Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖತರ್‌ ಗೆ ಅಮೆರಿಕದ ಪ್ರತಿನಿಧಿಗಳ ಆಗಮನ:...

ಖತರ್‌ ಗೆ ಅಮೆರಿಕದ ಪ್ರತಿನಿಧಿಗಳ ಆಗಮನ: ಒಪ್ಪಂದ ಅನುಷ್ಠಾನಕ್ಕೆ ಉಭಯ ದೇಶಗಳ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ30 Jun 2026 11:06 PM IST
share
ಖತರ್‌ ಗೆ ಅಮೆರಿಕದ ಪ್ರತಿನಿಧಿಗಳ ಆಗಮನ: ಒಪ್ಪಂದ ಅನುಷ್ಠಾನಕ್ಕೆ ಉಭಯ ದೇಶಗಳ ಪ್ರಯತ್ನ

ದೋಹಾ, ಜೂ.30: ಅಮೆರಿಕ-ಇರಾನ್ ಯುದ್ಧವನ್ನು ಕೊನೆಗೊಳಿಸುವ ಉದ್ದೇಶ ಹೊಂದಿರುವ ಆರಂಭಿಕ ಒಪ್ಪಂದವನ್ನು ಅನುಷ್ಠಾನಗೊಳಿಸುವ ಕುರಿತು ಮಧ್ಯಸ್ಥಗಾರರೊಂದಿಗೆ ಪರೋಕ್ಷ ಮಾತುಕತೆ ನಡೆಸಲು ಅಮೆರಿಕದ ಇಬ್ಬರು ಹಿರಿಯ ಪ್ರತಿನಿಧಿಗಳು ಮಂಗಳವಾರ ಖತರ್‌ ಗೆ ಆಗಮಿಸಿದ್ದಾರೆ.

ಆದರೆ, ಅಮೆರಿಕ ಮತ್ತು ಇರಾನ್ ಸದ್ಯಕ್ಕೆ ನೇರ ಮಾತುಕತೆಯ ಸಾಧ್ಯತೆಯನ್ನು ತಳ್ಳಿಹಾಕಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಪ್ರಾಚ್ಯದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಮತ್ತು ಹಿರಿಯ ಸಲಹೆಗಾರ ಜೆರೆಡ್ ಕುಶ್ನರ್ ಅವರು ಖತರ್ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಲು ದೋಹಾ ತಲುಪಿದ್ದಾರೆ. ಉಭಯ ದೇಶಗಳ ನಡುವೆ ಖತರ್ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಮಧ್ಯೆ, ಅಮೆರಿಕ ಅಧಿಕಾರಿಗಳೊಂದಿಗೆ ಯಾವುದೇ ಮಾತುಕತೆ ನಿಗದಿಯಾಗಿಲ್ಲ ಎಂದು ಇರಾನ್ ಹೇಳಿದ್ದು, ತನ್ನ ನಿಯೋಗದ ಖತರ್ ಭೇಟಿಗೂ ಅಮೆರಿಕ ಪ್ರತಿನಿಧಿಗಳ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ, ಇರಾನ್ ನಿಯೋಗದ ಖತರ್ ಭೇಟಿಯು ಕೇವಲ ತಿಳುವಳಿಕಾ ಒಪ್ಪಂದದ ಅನುಷ್ಠಾನವನ್ನು, ಅದರಲ್ಲೂ ಮುಖ್ಯವಾಗಿ ಆರ್ಟಿಕಲ್ 11 ಅನ್ನು ಮೇಲ್ವಿಚಾರಣೆ ಮಾಡುವ ಉದ್ದೇಶವನ್ನು ಹೊಂದಿದೆ. ಸಮಗ್ರ ಅಥವಾ ಅಂತಿಮ ಒಪ್ಪಂದದ ಕುರಿತು ಚರ್ಚೆಗಳು ಇನ್ನೂ ಪ್ರಾರಂಭವಾಗಿಲ್ಲ. 14 ಅಂಶಗಳ ಈ ತಿಳುವಳಿಕಾ ಒಪ್ಪಂದದ ಆರ್ಟಿಕಲ್ 13ರ ಪ್ರಕಾರ, ಆರ್ಟಿಕಲ್ 1, 4, 5, 10 ಮತ್ತು 11ರ ಅನುಷ್ಠಾನ ಪ್ರಕ್ರಿಯೆಗಳು ಪ್ರಾರಂಭವಾಗಿ, ಚಾಲ್ತಿಯಲ್ಲಿದ್ದಾಗ ಮಾತ್ರ ಔಪಚಾರಿಕ ಮಾತುಕತೆಗಳು ಆರಂಭವಾಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಆರ್ಟಿಕಲ್ 11ರ ಪ್ರಕಾರ, ಇರಾನ್ ತನ್ನ ಮುಟ್ಟುಗೋಲು ಹಾಕಿಕೊಳ್ಳಲಾದ ಅಥವಾ ನಿರ್ಬಂಧಿತ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಅಮೆರಿಕವು ಪರಸ್ಪರ ಒಪ್ಪಿಗೆಯ ಕಾರ್ಯವಿಧಾನಗಳ ಮೂಲಕ ನೆರವಾಗಬೇಕಿದೆ. ಹಾಗೆಯೇ, ಆ ಹಣದ ಬಳಕೆಯನ್ನು ಸುಲಭಗೊಳಿಸಲು ಅಗತ್ಯವಾದ ಪರವಾನಗಿಗಳು ಮತ್ತು ಅಧಿಕಾರಗಳನ್ನು ನೀಡಬೇಕಾಗುತ್ತದೆ.

Tags

Qataramerica
share
ವಾರ್ತಾಭಾರತಿ
ವಾರ್ತಾಭಾರತಿ
Next Story
X