Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದ ಮೇಲೆ ಇಸ್ರೇಲ್ ದಾಳಿಗೆ ಪ್ರತಿಕಾರ...

ಗಾಝಾದ ಮೇಲೆ ಇಸ್ರೇಲ್ ದಾಳಿಗೆ ಪ್ರತಿಕಾರ | ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಹಮಾಸ್

ವಾರ್ತಾಭಾರತಿವಾರ್ತಾಭಾರತಿ13 Aug 2024 9:40 PM IST
share
ಗಾಝಾದ ಮೇಲೆ ಇಸ್ರೇಲ್ ದಾಳಿಗೆ ಪ್ರತಿಕಾರ | ಟೆಲ್ ಅವೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಹಮಾಸ್

ಜೆರುಸಲೇಂ: ಈ ವಾರ ಕದನ ವಿರಾಮದ ಕುರಿತ ಚರ್ಚೆಯನ್ನು ಪುನಾರಂಭಿಸಲು ಮುಂದಾಗಿರುವ ಬೆನ್ನಿಗೇ, ಗಾಝಾ ಮೇಲೆ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ 19 ಮಂದಿ ಫೆಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ. ಈ ದಾಳಿಗೆ ಪ್ರತೀಕಾರವಾಗಿ ಹಮಾಸ್ ಇಸ್ರೇಲ್ ನ ವಾಣಿಜ್ಯ ತಾಣವಾದ ಟೆಲ್ ಅವೀವ್ ಮೇಲೆ ಎರಡು ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು Reuters ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ನಲ್ಲಿ ಯಾರೂ ಮೃತಪಟ್ಟ ವರದಿಯಾಗಿಲ್ಲ. ಗಾಝಾದಿಂದ ಎರಡು ಕ್ಷಿಪಣಿಗಳನ್ನು ಉಡಾಯಿಸಲಾಗಿದ್ದು, ಈ ಪೈಕಿ ಒಂದು ಸಮುದ್ರಕ್ಕೆ ಬಿದ್ದಿದ್ದರೆ, ಮತ್ತೊಂದು ಕ್ಷಿಪಣಿ ಇಸ್ರೇಲ್ ಪ್ರದೇಶವನ್ನು ತಲುಪಿಲ್ಲ ಎಂದು ಇಸ್ರೇಲ್ ಸೇನಾಪಡೆ ಹೇಳಿದೆ.

ಇಸ್ರೇಲ್ ನಡೆಸುತ್ತಿರುವ ನಾಗರಿಕರ ಮಾರಣ ಹೋಮ ಹಾಗೂ ನಮ್ಮ ನಾಗರಿಕರನ್ನು ಬಲವಂತವಾಗಿ ತೆರವುಗೊಳಿಸುತ್ತಿರುವುದಕ್ಕೆ ಪ್ರತಿಯಾಗಿ ನಾವು ಟೆಲ್ ಅವೀವ್ ಹಾಗೂ ಅದರ ಉಪನಗರಗಳ ಮೇಲೆ ಬಾಂಬ್ ದಾಳಿ ನಡೆಸಿದ್ದೇವೆ ಎಂದು ಹಮಾಸ್ ಸೇನಾ ಘಟಕವು ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕೇಂದ್ರ ಮತ್ತು ದಕ್ಷಿಣ ಗಾಝಾ ಪಟ್ಟಿಯಲ್ಲಿ 19 ಮಂದಿ ಫೆಲೆಸ್ತೀನರು ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಿಬ್ಬಂದಿಗಳು ತಿಳಿಸಿದ್ದಾರೆ. ಇಸ್ರೇಲ್ ಮೇಲೆ ತಾನು ಕ್ಷಿಪಣಿ ದಾಳಿ ನಡೆಸಿರುವುದಾಗಿ ಇದಕ್ಕೂ ಮುನ್ನ ಕಳೆದ ಮೇ ತಿಂಗಳಲ್ಲಿ ಹಮಾಸ್ ಹೊಣೆ ಹೊತ್ತುಕೊಂಡಿತ್ತು.

ಒಂದು ವೈಮಾನಿಕ ದಾಳಿಯಲ್ಲಿ ದೈರ್ ಅಲ್-ಬಲಾದ ಆರು ಮಂದಿ ಹತ್ಯೆಗೀಡಾಗಿದ್ದು, ಈ ಪೈಕಿ ಓರ್ವ ತಾಯಿ ಹಾಗೂ ಆಕೆಯ ನಾಲ್ಕು ದಿನಗಳ ಅವಳಿ ಮಕ್ಕಳು ಸೇರಿವೆ. ಇದಲ್ಲದೆ ಅಲ್-ಬುರೇಜಿ ಶಿಬಿರದ ಬಳಿ ನಡೆದಿರುವ ವೈಮಾನಿಕ ದಾಳಿಯಲ್ಲಿ ಇನ್ನೂ ಏಳು ಮಂದಿ ಫೆಲೆಸ್ತೀನಿಯನ್ನರು ಹತರಾಗಿದ್ದಾರೆ.

ಪ್ರತ್ಯೇಕ ವೈಮಾನಿಕ ದಾಳಿಗಳಲ್ಲಿ ಕೇಂದ್ರ ಗಾಝಾ ಪಟ್ಟಿಯ ಅಲ್-ಮಘಝಿ ಶಿಬಿರ ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ರಫಾ ನಗರದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಉತ್ತರ ಗಾಝಾ ನಗರದ ನೆರೆಯಲ್ಲಿರುವ ಶೇಖ್ ರದ್ವಾನ್ ನಲ್ಲಿನ ಮನೆಯೊಂದರ ಮೇಲೆ ನಡೆದಿರುವ ವೈಮಾನಿಕ ದಾಳಿಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ವೈದ್ಯಕೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ನಾವು ಗಾಝಾದ ಹಲವಾರು ಪ್ರದೇಶಗಳಲ್ಲಿ ಪರಸ್ಪರ ಹೋರಾಡುತ್ತಿದ್ದೇವೆ ಎಂದು ಇಸ್ರೇಲ್ ಸೇನಾಪಡೆ ಹಾಗೂ ಇಸ್ಲಾಮಿಕ್ ಜಿಹಾದ್ ಮತ್ತು ಹಮಾಸ್ ಗುಂಪುಗಳು ಪ್ರತಿಪಾದಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X