Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Saudi Arabia | ಹೌದಿ ದಾಳಿ ಭೀತಿ:...

Saudi Arabia | ಹೌದಿ ದಾಳಿ ಭೀತಿ: ಇತಿಹಾಸದಲ್ಲಿ ಮೊದಲ ಬಾರಿಗೆ ಮಕ್ಕಾದಲ್ಲಿ ವಾಯುದಾಳಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2026 7:38 AM IST
share
Saudi Arabia | ಹೌದಿ ದಾಳಿ ಭೀತಿ: ಇತಿಹಾಸದಲ್ಲಿ ಮೊದಲ ಬಾರಿಗೆ ಮಕ್ಕಾದಲ್ಲಿ ವಾಯುದಾಳಿ ಎಚ್ಚರಿಕೆ

ರಿಯಾದ್: ಇರಾನ್ ಬೆಂಬಲಿತ ಹೌದಿ ಬಂಡುಕೋರರು ಸೌದಿ ಅರೇಬಿಯಾ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ, ಪವಿತ್ರ ನಗರ ಮಕ್ಕಾದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಯುದಾಳಿ ಎಚ್ಚರಿಕೆ ನೀಡಲಾಗಿದೆ.

ಸೌದಿ ನಾಗರಿಕ ರಕ್ಷಣಾ ನಿರ್ದೇಶನಾಲಯವು ಮಂಗಳವಾರ ಮಕ್ಕಾ, ಜಿದ್ದಾ ಮತ್ತು ತಾಯಿಫ್ ಸೇರಿದಂತೆ ಪಶ್ಚಿಮ ಸೌದಿ ಅರೇಬಿಯಾದ ಹಲವು ನಗರಗಳಲ್ಲಿ ಎಚ್ಚರಿಕೆ ನೀಡಿತು. ಆದರೆ ಕೆಲವೇ ಸಮಯದ ಬಳಿಕ ಎಚ್ಚರಿಕೆಯನ್ನು ಹಿಂಪಡೆಯಲಾಯಿತು.

‘ಮಕ್ಕಾ ನಗರದಲ್ಲಿನ ಅಪಾಯ ದೂರವಾಗಿದೆ’ ಎಂದು ಸೌದಿ ನಾಗರಿಕ ರಕ್ಷಣಾ ನಿರ್ದೇಶನಾಲಯ ಸಾಮಾಜಿಕ ಜಾಲತಾಣ ‘X’ನಲ್ಲಿ ತಿಳಿಸಿತು. ಸೂಚನೆಗಳನ್ನು ಪಾಲಿಸಬೇಕು, ಗುಂಪುಗೂಡುವುದು ಮತ್ತು ವೀಡಿಯೋ ಚಿತ್ರೀಕರಣ ಮಾಡುವುದನ್ನು ತಪ್ಪಿಸಬೇಕು ಹಾಗೂ ತುರ್ತು ಸಂದರ್ಭದಲ್ಲಿ 911ಕ್ಕೆ ಕರೆ ಮಾಡಬೇಕು ಎಂದು ಸೂಚಿಸಿತು.

ಮಕ್ಕಾದಲ್ಲಿ ಇಂತಹ ಎಚ್ಚರಿಕೆ ನೀಡಿರುವುದು ಇದೇ ಮೊದಲ ಬಾರಿ ಎಂದು ವರದಿಯಾಗಿದೆ. ಸೌದಿ ನಾಗರಿಕ ರಕ್ಷಣಾ ಸಚಿವಾಲಯ ಈ ಹಿಂದೆ ದೇಶದ ಆರು ಪ್ರದೇಶಗಳಲ್ಲಿ ಅಲ್ಪಾವಧಿಯ ವಾಯುದಾಳಿ ಎಚ್ಚರಿಕೆಗಳನ್ನು ನೀಡಿತ್ತು.

ಯೆಮೆನ್‌ ನಿಂದ ಹೌದಿಗಳು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ ಗಳ ಮೂಲಕ ಸೌದಿ ಅರೇಬಿಯಾ ಮೇಲೆ ದಾಳಿ ನಡೆಸಿದ್ದು, 13 ಮಂದಿ ಗಾಯಗೊಂಡಿದ್ದರು. ಇದರ ಮರುದಿನವೇ ಮಕ್ಕಾ ಸೇರಿದಂತೆ ಹಲವು ನಗರಗಳಲ್ಲಿ ವಾಯುದಾಳಿ ಎಚ್ಚರಿಕೆ ನೀಡಲಾಗಿದೆ.

ಇಸ್ರೇಲಿ ಪತ್ರಿಕೆ ‘ಹಯೋಮ್’ ವರದಿ ಪ್ರಕಾರ, ಮದೀನಾದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲಝೀಝ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (MED) ತೆರಳುತ್ತಿದ್ದ ವಿಮಾನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು.

ಇದಕ್ಕೂ ಮುನ್ನ ಸೌದಿ ಬೆಂಬಲಿತ ಹಾಗೂ ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಯೆಮೆನ್ ಸರ್ಕಾರ ಮತ್ತು ಸೌದಿ ಪಡೆಗಳು ಯೆಮೆನ್‌ನ ತೈಝ್ ನಗರದ ಸಮೀಪದ ನೆಲೆಗಳ ಮೇಲೆ ದಾಳಿ ನಡೆಸಿದ್ದವು ಎಂದು ವರದಿ ತಿಳಿಸಿದೆ.

ಈ ವಾರ ಹೌದಿಗಳು ಸೌದಿ ಅರೇಬಿಯಾ ವಿರುದ್ಧ ಕಳೆದ ಕೆಲವು ವರ್ಷಗಳಲ್ಲೇ ಅತ್ಯಂತ ಭಾರಿ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ತೈಲ ಘಟಕಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 73 ಮಂದಿ ಗಾಯಗೊಂಡಿದ್ದಾರೆ.

ಸೋಮವಾರ ಪಶ್ಚಿಮ ಯೆಮೆನ್‌ ನಲ್ಲಿ ಹೌದಿಗಳು ನಡೆಸಿದ ದಾಳಿಯಲ್ಲಿ ಯೆಮೆನ್ ಸರ್ಕಾರದ ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಬ್ಬರು ಸೇನಾ ಮೂಲಗಳು ತಿಳಿಸಿದ್ದಾರೆ.

ಅದೇ ವೇಳೆ, ದಕ್ಷಿಣ ಸೌದಿ ಅರೇಬಿಯಾದ ಖಮಿಸ್ ಮುಶೈತ್‌ ನಲ್ಲಿರುವ ಕಿಂಗ್ ಖಾಲಿದ್ ವಾಯುನೆಲೆಯ ಮೇಲೆ ಡಝನ್ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ ಗಳನ್ನು ಬಳಸಿ ಬೃಹತ್ ದಾಳಿ ನಡೆಸಿರುವುದಾಗಿ ಹೌದಿಗಳು ಹೇಳಿಕೊಂಡಿದ್ದಾರೆ.

ಜುಲೈನಲ್ಲಿ ಯೆಮೆನ್‌ ನ ಅಂತರ್ಯುದ್ಧ ಮತ್ತೆ ತೀವ್ರಗೊಂಡ ಬಳಿಕ ಹೌದಿಗಳು ಸೌದಿ ಬೆಂಬಲಿತ ಸರ್ಕಾರಿ ಪಡೆಗಳೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ರಿಯಾದ್ ವಿರುದ್ಧ ನೌಕಾ ದಿಗ್ಬಂಧನ ಘೋಷಿಸಿರುವ ಹೌದಿಗಳು, ಕೆಂಪು ಸಮುದ್ರದಲ್ಲಿನ ಸೌದಿ ಹಡಗುಗಳನ್ನು ಗುರಿಯಾಗಿಸಲು ಆರಂಭಿಸಿದ್ದಾರೆ.

ಹೌದಿ ಪೊಲಿಟ್‌ಬ್ಯೂರೋ ಸದಸ್ಯ ಹಜೆಮ್ ಅಲ್-ಅಸ್ಸಾದ್, ‘ಸೌದಿ ಅರೇಬಿಯಾ ನಮ್ಮ ಜನರ ವಿರುದ್ಧದ ಆಕ್ರಮಣವನ್ನು ಮುಂದುವರಿಸುವವರೆಗೆ ಯೆಮೆನ್‌ ನ ಪ್ರತಿಕ್ರಿಯೆ ಮುಂದುವರಿಯಲಿದೆ ಮತ್ತು ಮತ್ತಷ್ಟು ತೀವ್ರಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಬಾಬ್ ಅಲ್-ಮಂದಬ್ ಮುಚ್ಚುವ ಎಚ್ಚರಿಕೆ

ಸಂಘರ್ಷ ಮತ್ತಷ್ಟು ಉಲ್ಬಣಗೊಂಡರೆ ಬಾಬ್ ಅಲ್-ಮಂದಬ್ ಜಲಸಂಧಿಯ ಮೂಲಕ ಸಾಗುವ ಹಡಗುಗಳ ಸಂಚಾರಕ್ಕೂ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಬಾಬ್ ಅಲ್-ಮಂದಬ್ ಜಲಸಂಧಿಯನ್ನು ಮುಚ್ಚಿದರೆ ಗಂಭೀರ ಪರಿಣಾಮ ಎದುರಾಗಲಿದೆ ಎಂದು ಖತರ್ ಮಂಗಳವಾರ ಎಚ್ಚರಿಸಿದೆ.

ಜಲಸಂಧಿಯನ್ನು ಮುಚ್ಚುವುದು ‘ಇಡೀ ಜಗತ್ತಿಗೆ ವಿನಾಶಕಾರಿ’ ಎಂದು ಖತರ್ ವಿದೇಶಾಂಗ ಸಚಿವಾಲಯದ ಅಧಿಕಾರಿ ಇಬ್ರಾಹಿಂ ಅಲ್ ಹಶ್ಮಿ ಹೇಳಿದ್ದಾರೆ.

ಹೌದಿಗಳ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶಿಸಬೇಕು ಎಂದು ಸೌದಿ ಯುವರಾಜರು ಮನವಿ ಮಾಡಿದ್ದರು. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

ಇದೇ ವೇಳೆ, ಶನಿವಾರ ಹೌದಿಗಳು ವಾಷಿಂಗ್ಟನ್‌ ಗೆ ಕರೆ ಮಾಡಿ, ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗದಂತೆ ಮನವಿ ಮಾಡಿದ್ದರು ಎಂದು ಟ್ರಂಪ್ ತಿಳಿಸಿದ್ದಾರೆ.

ಹೌದಿಗಳ ಕ್ಷಿಪ್ರ ಮುನ್ನಡೆ ಇದೀಗ ಕೆಂಪು ಸಮುದ್ರದ ಪ್ರಮುಖ ಸಾಗರ ಮಾರ್ಗಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಹೌದಿಗಳ ವಿರುದ್ಧ ಪ್ರತಿಕ್ರಿಯಿಸಲು ಸೌದಿ ಅರೇಬಿಯಾಕ್ಕೆ ಇರುವ ಸೀಮಿತ ಆಯ್ಕೆಗಳನ್ನು ಮರುಪರಿಶೀಲಿಸುವ ಅನಿವಾರ್ಯತೆ ಎದುರಾಗಿದೆ.

Tags

Saudi ArabiaHouthiattackAir raidMakkah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X