Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. SCO ಶೃಂಗಸಭೆ | ಭಯೋತ್ಪಾದನೆ ಯಾರಿಗೂ...

SCO ಶೃಂಗಸಭೆ | ಭಯೋತ್ಪಾದನೆ ಯಾರಿಗೂ ತಂತ್ರಗಾರಿಕೆಯ ಸಾಧನವಾಗಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಶೃಂಗಸಭೆಯ ಜಂಟಿ ಘೋಷಣೆಯಲ್ಲಿ ಇರಾನ್ ಮೇಲಿನ ದಾಳಿಗೆ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ2 Sept 2026 8:48 AM IST
share
SCO ಶೃಂಗಸಭೆ | ಭಯೋತ್ಪಾದನೆ ಯಾರಿಗೂ ತಂತ್ರಗಾರಿಕೆಯ ಸಾಧನವಾಗಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಬಿಶ್ಕೆಕ್: ಭಯೋತ್ಪಾದನೆ ಯಾವುದೇ ದೇಶಕ್ಕೂ ತಂತ್ರಗಾರಿಕೆಯ ಸಾಧನವಾಗಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ವಿರುದ್ಧ ಜಾಗತಿಕವಾಗಿ ಒಗ್ಗಟ್ಟಿನ ಕ್ರಮ ಅಗತ್ಯ ಎಂದು ಒತ್ತಿಹೇಳಿದ್ದಾರೆ.

ಭಯೋತ್ಪಾದನೆ ಇಡೀ ಮಾನವಕುಲಕ್ಕೆ ಗಂಭೀರ ಸವಾಲಾಗಿ ಮುಂದುವರಿದಿದೆ. ಇದರ ವಿರುದ್ಧದ ಹೋರಾಟವನ್ನು ಕೇವಲ ಕ್ರಿಯೆ-ಪ್ರತಿಕ್ರಿಯೆ ವಿಧಾನಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

“ಭಯೋತ್ಪಾದನೆಗೆ ಹಣಕಾಸು ನೆರವು, ನೇಮಕಾತಿ, ಮೂಲಭೂತವಾದಕ್ಕೆ ಪ್ರಚೋದನೆ ಹಾಗೂ ಸುರಕ್ಷಿತ ಆಶ್ರಯ ನೀಡುವ ಸಂಪೂರ್ಣ ಜಾಲವನ್ನು ಬುಡಮೇಲು ಮಾಡಬೇಕು. ಈ ಗಂಭೀರ ವಿಚಾರದಲ್ಲಿ ಎಲ್ಲರೂ ಒಂದೇ ಧ್ವನಿಯಲ್ಲಿ ಮಾತನಾಡಬೇಕು. ಇಬ್ಬಗೆಯ ನೀತಿಗೆ ಯಾವುದೇ ಅವಕಾಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು,” ಎಂದು ಮೋದಿ ಹೇಳಿದ್ದಾರೆ.

“ಭಯೋತ್ಪಾದನೆಯನ್ನು ಸರ್ಕಾರದ ನೀತಿಯ ಸಾಧನವಾಗಿ ಬಳಸುವ ರಾಷ್ಟ್ರಗಳಿಗೆ, ಅದು ಯಾರಿಗೂ ತಂತ್ರಗಾರಿಕೆಯ ಸಾಧನವಾಗಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಸಿಂಧೂ ಜಲ ಒಪ್ಪಂದದ ಬಗ್ಗೆ ಷರೀಫ್ ಪರೋಕ್ಷ ಪ್ರಸ್ತಾಪ

ಇನ್ನೊಂದೆಡೆ, ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್, “ಪಾಕಿಸ್ತಾನದ ವಿರುದ್ಧ ಅಫ್ಘಾನ್ ನೆಲವನ್ನು ಬಳಸಿಕೊಳ್ಳಲು ಅವಕಾಶ ನೀಡಬಾರದು” ಎಂದು ಹೇಳಿದ್ದಾರೆ.

ಇದೇ ವೇಳೆ, “ನೀರನ್ನು ರಾಜಕೀಯ ಉದ್ದೇಶಗಳಿಗಾಗಿ ಅಥವಾ ಒತ್ತಡ ಹೇರುವ ಸಾಧನವಾಗಿ ಬಳಸುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ ಷರೀಫ್, ಅಂತರರಾಷ್ಟ್ರೀಯ ಒಪ್ಪಂದಗಳನ್ನು ಅವುಗಳ ಆಶಯ ಮತ್ತು ಅಕ್ಷರಶಃ ಸಂಪೂರ್ಣವಾಗಿ ಪಾಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇದು ಭಾರತ–ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ವಿಚಾರಕ್ಕೆ ನೀಡಿದ ಪರೋಕ್ಷ ಉಲ್ಲೇಖ ಎನ್ನಲಾಗಿದೆ.

ಇರಾನ್ ಮೇಲಿನ ದಾಳಿಗೆ ಆಕ್ಷೇಪ; ಶೃಂಗಸಭೆ ಘೋಷಣೆ

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ನ ಮಿಲಿಟರಿ ದಾಳಿಯನ್ನು ಭಾರತ, ಪಾಕಿಸ್ತಾನ, ರಷ್ಯಾ ಹಾಗೂ ಚೀನಾ ಸೇರಿದಂತೆ SCO ಸದಸ್ಯ ರಾಷ್ಟ್ರಗಳು ಪರೋಕ್ಷವಾಗಿ ಖಂಡಿಸಿವೆ.

ಶೃಂಗಸಭೆಯ ಬಳಿಕ ಹೊರಡಿಸಲಾದ ಶೃಂಗಸಭೆಯ ಜಂಟಿ ಘೋಷಣೆಯಲ್ಲಿ, ಇರಾನ್ ಮೇಲಿನ ದಾಳಿಗಳು ಅಂತರರಾಷ್ಟ್ರೀಯ ಕಾನೂನು ಹಾಗೂ ವಿಶ್ವಸಂಸ್ಥೆಯ ಚಾರ್ಟರ್ ನ ಉಲ್ಲಂಘನೆಯಾಗಿವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಲಾಗಿದೆ.

ಇದೇ ವೇಳೆ, ಜಾಗತಿಕ ಆಹಾರ, ಇಂಧನ ಮತ್ತು ಮಾನವೀಯ ಭದ್ರತೆಗೆ ಧಕ್ಕೆ ತರುವ “ಏಕಪಕ್ಷೀಯ ನಿರ್ಬಂಧಗಳನ್ನು” ವಿರೋಧಿಸುವ ಮೂಲಕ ಅಮೆರಿಕದ ನೀತಿಗೆ ಅಸಮಾಧಾನ ವ್ಯಕ್ತಪಡಿಸಲಾಗಿದೆ.

Tags

SCO SummitTerrorismstrategyPM Modi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X