Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಲ್ಲಿ ಭೀಕರ ಪ್ರವಾಹ: ಕನಿಷ್ಟ 20...

ಚೀನಾದಲ್ಲಿ ಭೀಕರ ಪ್ರವಾಹ: ಕನಿಷ್ಟ 20 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ2 Aug 2023 11:35 PM IST
share
ಚೀನಾದಲ್ಲಿ ಭೀಕರ ಪ್ರವಾಹ: ಕನಿಷ್ಟ 20 ಮಂದಿ ಮೃತ್ಯು

ಬೀಜಿಂಗ್: ಚೀನಾ ರಾಜಧಾನಿ ಬೀಜಿಂಗ್ ಸುತ್ತಮುತ್ತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ರಸ್ತೆಗಳು ಕೊಚ್ಚಿಹೋಗಿವೆ. ಮಳೆ ಮತ್ತು ಪ್ರವಾಹದಿಂದಾಗಿ ಕನಿಷ್ಟ 20 ಮಂದಿ ಮೃತಪಟ್ಟಿದ್ದು 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ಧಿಸಂಸ್ಥೆ ವರದಿ ಮಾಡಿದೆ.

ಹಲವು ಮರಗಳು ಉರುಳಿಬಿದ್ದ ಕಾರಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಬೀಜಿಂಗ್ ಹೊರವಲಯ ಹಾಗೂ ತಿಯಾನ್‌ಜಿನ್ ಮತ್ತು ರೊರೊವ್ ನಗರಗಳಲ್ಲಿನ ಶಾಲೆಗಳು ಸರಕಾರಿ ಕಟ್ಟಡಗಳಲ್ಲಿ ತಾತ್ಕಾಲಿಕ ಶಿಬಿರಗಳನ್ನು ತೆರೆಯಲಾಗಿದೆ. ಮೆಂಟೊಗು ಜಿಲ್ಲೆಯ ಹಲವೆಡೆ ರಸ್ತೆಯಲ್ಲಿ ಹರಿಯುತ್ತಿರುವ ನೆರೆನೀರಿನಲ್ಲಿ ಹಲವು ವಾಹನಗಳು ಕೊಚ್ಚಿಹೋಗಿವೆ. ಪ್ರಮುಖ ರಸ್ತೆಗಳಲ್ಲಿ ತುಂಬಿರುವ ಕೆಸರು ಮತ್ತು ಕಸಕಡ್ಡಿಗಳನ್ನು ಕ್ರೇನ್ ಬಳಸಿ ತೆರವುಗೊಳಿಸಲಾಗುತ್ತಿದೆ.

ಹಲವೆಡೆ ಭೂಕುಸಿತ ಸಂಭವಿಸಿದ್ದು ರಾಜಧಾನಿ ಬೀಜಿಂಗ್‌ನಲ್ಲಿ 11 ಮಂದಿ, ಹೆಬೆಯ್ ಪ್ರಾಂತದಲ್ಲಿ 9 ಮಂದಿ ಸೇರಿದಂತೆ ಒಟ್ಟು 20 ಮಂದಿ ಮೃತಪಟ್ಟಿದ್ದು ಇತರ 27 ಮಂದಿ ನಾಪತ್ತೆಯಾಗಿದ್ದಾರೆ. ಫಂಗ್‌ಶಾನ್ ಜಿಲ್ಲೆಯಲ್ಲಿ ಸುಮಾರು 60,000 ಮನೆಗಳು ವಿದ್ಯುತ್ ಸಂಪರ್ಕ ಕಳೆದುಕೊಂಡಿವೆ. ಬೀಜಿಂಗ್‌ನ ನೈಋತ್ಯದಲ್ಲಿರುವ ರೊರೊವ್ ನಗರದಲ್ಲಿ ಸುಮಾರು 1,25,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಫೋನಿಕ್ಸ್ ಟಿವಿ ವರದಿ ಮಾಡಿದೆ.

ಯಾಂಗ್‌ಡಿಂಗ್ ನದಿ ಉಕ್ಕೇರಿ ಹರಿಯುತ್ತಿರುವುದರಿಂದ ರಾಜಧಾನಿ ಬೀಜಿಂಗ್‌ನ ಪೂರ್ವದಲ್ಲಿರುವ ಬಂದರು ನಗರ ತಿಯಾಂಜಿನ್‌ನಲ್ಲಿ 35,000 ಜನರನ್ನು, ಶಾಂಕ್ಸಿ ಪ್ರಾಂತದಿಂದ ಸುಮಾರು 42,000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಹಲವು ಪ್ರದೇಶಗಳಲ್ಲಿ ಶನಿವಾರದಿಂದ ಸುಮಾರು 500 ಮಿ.ಮೀನಷ್ಟು ಮಳೆ ಸುರಿಯುತ್ತಿದೆ. ಬೀಜಿಂಗ್, ತಿಯಾಂಜಿನ್ ಮತ್ತು ಶಿಜಾಝ್ವಂಗ್ ಸೇರಿದಂತೆ ಹೈಹೆ ಜಲಾನಯನ ಪ್ರದೇಶದಲ್ಲಿ ಸುಮಾರು 13 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಪ್ರವಾಹದಲ್ಲಿ ಸಿಕ್ಕಿಬಿದ್ದವರನ್ನು ರಕ್ಷಿಸಲು , ಜೀವಹಾನಿ, ಆಸ್ತಿಹಾನಿಯನ್ನು ಕಡಿಮೆ ಮಾಡಲು ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ಅಧ್ಯಕ್ಷ ಕ್ಸಿಜಿಂಪಿಂಗ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X