Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್: ಮೇ ತಿಂಗಳಿನಿಂದ 1,200 ಮಕ್ಕಳ...

ಸುಡಾನ್: ಮೇ ತಿಂಗಳಿನಿಂದ 1,200 ಮಕ್ಕಳ ಮೃತ್ಯು; ವಿಶ್ವಸಂಸ್ಥೆ

ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ19 Sept 2023 10:58 PM IST
share
ಸುಡಾನ್: ಮೇ ತಿಂಗಳಿನಿಂದ 1,200 ಮಕ್ಕಳ ಮೃತ್ಯು; ವಿಶ್ವಸಂಸ್ಥೆ

ಜಿನೆವಾ: ಯುದ್ಧದಿಂದ ಜರ್ಝರಿತಗೊಂಡಿರುವ ಸುಡಾನ್ ದೇಶದ ನಿರಾಶ್ರಿತರ ಶಿಬಿರದಲ್ಲಿ ಮೇ ತಿಂಗಳಿನಿಂದ 1,200ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದು ಈ ವರ್ಷಾಂತ್ಯಕ್ಕೆ ಸಾವಿರಾರು ನವಜಾತ ಶಿಶುಗಳು ಮೃತಪಡುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ.

ಸುಡಾನಿನಲ್ಲಿನ ಬಿಕ್ಕಟ್ಟಿನ ಪರಿಣಾಮ ಮಕ್ಕಳ ಆರೋಗ್ಯದ ಮೇಲೆ ಬೀರುವ ಪರಿಣಾಮದ ಕುರಿತು ಎಚ್ಚರಿಕೆ ವಹಿಸುವಂತೆ ವಿಶ್ವಸಂಸ್ಥೆ ಸಲಹೆ ನೀಡಿದೆ. ‘ನಾಗರಿಕರ ಬಗ್ಗೆ ಕ್ರೂರ ನಿರ್ಲಕ್ಷ್ಯ, ಆರೋಗ್ಯ ಮತ್ತು ಪೌಷ್ಟಿಕಾಂಶ ಸೇವೆಗಳ ಮೇಲಿನ ನಿರಂತರ ದಾಳಿಯ ಹಿನ್ನೆಲೆಯಲ್ಲಿ , ವರ್ಷಾಂತ್ಯದ ವೇಳೆಗೆ ಸಾವಿರಾರು ನವಜಾತ ಶಿಶುಗಳು ಸಾಯುವ ಅಪಾಯವಿದೆ’ ಎಂದು ವಿಶ್ವಸಂಸ್ಥೆ ಮಕ್ಕಳ ಏಜೆನ್ಸಿ(ಯುನಿಸೆಫ್)ನ ವಕ್ತಾರ ಜೇಮ್ಸ್ ಎಲ್ಡರ್ ಜಿನೆವಾದಲ್ಲಿ ಸುದ್ಧಿಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ ನಿಂದ ಡಿಸೆಂಬರ್ ನಡುವಿನ ಅವಧಿಯಲ್ಲಿ ಸುಡಾನ್ ನಲ್ಲಿ 3,33,000 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಇದೇ ವೇಳೆ ಯುದ್ಧಗ್ರಸ್ತ ದೇಶದಲ್ಲಿ ಅಪೌಷ್ಟಿಕತೆಯ ಸಮಸ್ಯೆ ತೀವ್ರಗೊಂಡಿದೆ. ಪ್ರತೀ ತಿಂಗಳೂ 55,000 ಮಕ್ಕಳಿಗೆ ಅಪೌಷ್ಟಿಕತೆಯ ಸಮಸ್ಯೆಗೆ ಚಿಕಿತ್ಸೆಯ ಅಗತ್ಯವಿದೆ. ಆದರೆ ರಾಜಧಾನಿ ಖಾರ್ಟಮ್ ನಲ್ಲಿ 50ಕ್ಕೂ ಕಡಿಮೆ ಪೌಷ್ಟಿಕಾಂಶ ಕೇಂದ್ರಗಳು, ವೆಸ್ಟ್ ದಾರ್ಫುರ್ನಲ್ಲಿ ಒಂದು ಕೇಂದ್ರ ಮಾತ್ರ ಸುಸ್ಥಿತಿಯಲ್ಲಿದೆ. ಸುಡಾನಿನಲ್ಲಿನ 9 ನಿರಾಶ್ರಿತರ ಶಿಬಿರದಲ್ಲಿ ಮೇ 15 ಮತ್ತು ಸೆಪ್ಟಂಬರ್ 14ರ ನಡುವಿನ ಅವಧಿಯಲ್ಲಿ 5 ವರ್ಷದ ಕೆಳಗಿನ 1,200ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿರುವುದಾಗಿ ಸುಡಾನಿನಲ್ಲಿರುವ ವಿಶ್ವಸಂಸ್ಥೆಯ ನಿಯೋಗ ವರದಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ಶಿಬಿರಗಳಲ್ಲಿ ಹೆಚ್ಚಾಗಿ ದಕ್ಷಿಣ ಸುಡಾನ್ ಮತ್ತು ಇಥಿಯೋಪಿಯಾದ ನಿರಾಶ್ರಿತರು ಆಶ್ರಯ ಪಡೆದಿದ್ದಾರೆ ಎಂದು ಯುಎನ್ಎಚ್ ಸಿ ಆರ್ ನ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯಸ್ಥೆ ಅಲೆನ್ ಮರೀನಾ ಹೇಳಿದ್ದಾರೆ. ಇದೇ ಅವಧಿಯಲ್ಲಿ ಸುಮಾರು 3,100 ಶಂಕಿತ ದಡಾರ ಪ್ರಕರಣ, 500ಕ್ಕೂ ಹೆಚ್ಚು ಶಂಕಿತ ಕಾಲರಾ ಪ್ರಕರಣ ವರದಿಯಾಗಿರುವ ಜತೆಗೆ, ಡೆಂಘಿ ಮತ್ತು ಮಲೇರಿಯಾ ಪ್ರಕರಣ ಉಲ್ಬಣಗೊಂಡಿದೆ. ದಡಾರ ಅಥವಾ ಅಪೌಷ್ಟಿಕತೆಯಿಂದ ಸಂಭವಿಸುವ ಪ್ರತೀ ಸಾವನ್ನೂ ತಡೆಯುವ ವಿಧಾನ ಮತ್ತು ಆರ್ಥಿಕ ಸಂಪನ್ಮೂಲವನ್ನು ಈ ಜಗತ್ತು ಹೊಂದಿದೆ. ಇನ್ನಷ್ಟು ಸಾವನ್ನು ನಾವು ತಡೆಯಬಹುದು, ಆದರೆ ಇದಕ್ಕೆ ಇನ್ನಷ್ಟು ಹಣದ ಅಗತ್ಯವಿದೆ ಎಂದು ಯುಎನ್ಎಚ್ ಸಿ ಆರ್ ಮುಖ್ಯಸ್ಥ ಫಿಲಿಪೊ ಗ್ರಾಂಡಿ ಹೇಳಿಕೆ ನೀಡಿದ್ದಾರೆ.

ಸುಡಾನಿನಲ್ಲಿ ನೆರವಿನ ಅಗತ್ಯವಿರುವ 10 ದಶಲಕ್ಷ ಮಕ್ಕಳಿಗೆ ನೆರವು ಒದಗಿಸಲು 838 ದಶಲಕ್ಷ ಡಾಲರ್ ನಿಧಿಯ ಅಗತ್ಯವಿದೆ. ಆದರೆ ಇದುವರೆಗೆ ಇದರ 25%ದಷ್ಟು ಮೊತ್ತ ಮಾತ್ರ ದೇಣಿಗೆ ರೂಪದಲ್ಲಿ ಸಂಗ್ರಹವಾಗಿದೆ ಎಂದು ಯುನಿಸೆಫ್ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X