Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್‌ನಲ್ಲಿ ಭಾರತೀಯ ಸ್ವಾತಂತ್ರ್ಯ...

ಲಂಡನ್‌ನಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರವಾಗಿದ್ದ ಇಂಡಿಯಾ ಕ್ಲಬ್ ಮುಚ್ಚುಗಡೆಯತ್ತ

ವಾರ್ತಾಭಾರತಿವಾರ್ತಾಭಾರತಿ22 Aug 2023 9:55 PM IST
share
ಲಂಡನ್‌ನಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರವಾಗಿದ್ದ ಇಂಡಿಯಾ ಕ್ಲಬ್ ಮುಚ್ಚುಗಡೆಯತ್ತ

ಲಂಡನ್: ಭಾರತದ ಸ್ವಾತಂತ್ರ್ಯ ಹೋರಾಟದ ಜೊತೆ ಗಾಢವಾದ ನಂಟನ್ನು ಹೊಂದಿದ್ದ ಲಂಡನ್‌ನ ಇಂಡಿಯಾ ಕ್ಲಬ್ ಇನ್ನು ಕೆಲವು ದಿನಗಳಲ್ಲಿ ಇತಿಹಾಸದ ಪುಟಗಳಿಗೆ ಸೇರಲಿದೆ. ಕೃಷ್ಣಮೆನನ್ ಸೇರಿದಂತೆ ಭಾರತ ರಾಷ್ಟ್ರೀಯವಾದಿಗಳಿಗೆ ಕೇಂದ್ರವಾಗಿದ್ದ ಇಂಡಿಯಾ ಕ್ಲಬ್ ಮುಂದಿನ ಸೆಪ್ಟೆಂಬರ್‌ನಲ್ಲಿ ಮುಚ್ಚುಗಡೆಯಾಗಲಿದೆ. ತನ್ನ ಮುಚ್ಚುಗಡೆಯನ್ನು ವಿರೋಧಿಸಿ ಇಂಡಿಯಾ ಕ್ಲಬ್ ದೀರ್ಘಕಾಲದ ಕಾನೂನು ಹೋರಾಟವನ್ನು ನಡೆಸಿತ್ತು.

ಲಂಡನ್‌ನ ಹೃದಯಭಾಗವಾದ ಸ್ಟ್ರಾಂಡ್‌ನಲ್ಲಿರುವ ಇಂಡಿಯಾ ಕ್ಲಬ್ ಕಟ್ಟಡವು ಸ್ವಾತಂತ್ರ್ಯ ಹೋರಾಟದ ಬೆಂಬಲಿಗರ ಸಭೆ, ಸಮಾಲೋಚನೆಯ ಕೇಂದ್ರವಾಗಿತ್ತು. ಕೆಲವು ವರ್ಷಗಳ ಹಿಂದೆ ಈ ಕಟ್ಟಡವನ್ನು ನೆಲಸಮಗೊಳಿಸಲು ನೋಟಿಸ್ ಜಾರಿಗೊಳಿಸಲಾಗಿತ್ತಾದರೂ, ಅದನ್ನು ತಡೆಯುವಲ್ಲಿ ಇಂಡಿಯಾ ಕ್ಲಬ್ ಯಶಸ್ವಿಯಾಗಿತ್ತು. ಆದರೆ ಆ ಸ್ಥಳದಲ್ಲಿ ಅತ್ಯಾಧುನಿಕ ಹೊಟೇಲ್ ಒಂದನ್ನು ನಿರ್ಮಿಸುವ ಬಗ್ಗೆ ಭೂಮಾಲೀಕರು ನೋಟಿಸ್ ಜಾರಿಗೊಳಿಸಿದ್ದು, ಇಂಡಿಯಾ ಕ್ಲಬ್‌ನ ಮುಚ್ಚುಗಡೆ ಖಚಿತವಾಗಿದೆ.

ಇಂಡಿಯಾ ಕ್ಲಬ್ ಅನ್ನು ಉಳಿಸಲು ಪ್ರೊಪ್ರೈಟರ್‌ಗಳಾದ ಯಾದ್‌ಗಾರ್ ಮಾರ್ಕರ್ ಹಾಗೂ ಅವರ ಪುತ್ರಿ ಫಿರೋಝಾ ‘ಸೇವ್ ಇಂಡಿಯಾ ಕ್ಲಬ್’ ಅಭಿಯಾನವನ್ನು ನಡೆಸಿದ್ದರು. ಆದರೆ ಇದೀಗ ಅವರು ಈ ಐತಿಹಾಸಿಕ ಕಟ್ಟಡದ ಮುಚ್ಚುಗಡೆ ಅನಿವಾರ್ಯವೆಂದು ಹೇಳಿದ್ದಾರೆ.

‘‘ಇಂಡಿಯಾ ಕ್ಲಬ್‌ನ ಮುಚ್ಚುಗಡೆಯನ್ನು ನಾವು ಅತ್ಯಂತ ಭಾರವಾದ ಹೃದಯದೊಂದಿಗೆ ಘೋಷಿಸುತ್ತಿದ್ದೇವೆ. ಈ ಕಟ್ಟಡಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಸೆಪ್ಟೆಂಬರ್ ೧೭ ಅಂತಿಮ ದಿನವಾಗಿರುವುದು ಎಂದು ಮಾರ್ಕರ್ ಹಾಗೂ ಫಿರೋಝಾ ಅವರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಕೃಷ್ಣ ಮೆನನ್ ಸೇರಿದಂತೆ ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟನ್‌ನಲ್ಲಿ ಅಭಿಯಾನ ನಡೆಸುತ್ತಿದ್ದ ಇಂಡಿಯಾ ಲೀಗ್ ಸಂಘಟನೆಯ ಸಂಸ್ಥಾಪಕ ಸದಸ್ಯರ ಜೊತೆ ಇಂಡಿಯಾ ಕ್ಲಬ್ ಗಾಢವಾದ ನಂಟನ್ನು ಹೊಂದಿತ್ತು. ಭಾರತ ಸ್ವಾತಂತ್ರ್ಯಗೊಂಡ ಬಳಿಕ ಕೃಷ್ಣ ಮೆನನ್ ಅವರು ಬ್ರಿಟನ್‌ನಲ್ಲಿನ ಭಾರತದ ಪ್ರಪ್ರಥಮ ಹೈಕಮೀಶನರ್ ಆಗಿ ನೇಮಕಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X