Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯನ್ ಗೋಲನ್ನಿಂದ ಇಸ್ರೇಲ್ ಹಿಂದೆ...

ಸಿರಿಯನ್ ಗೋಲನ್ನಿಂದ ಇಸ್ರೇಲ್ ಹಿಂದೆ ಸರಿಯಲು ವಿಶ್ವಸಂಸ್ಥೆ ಆಗ್ರಹ

► ನಿರ್ಣಯದ ಪರ ಮತ ಚಲಾಯಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ29 Nov 2023 10:03 PM IST
share
ಸಿರಿಯನ್ ಗೋಲನ್ನಿಂದ ಇಸ್ರೇಲ್ ಹಿಂದೆ ಸರಿಯಲು ವಿಶ್ವಸಂಸ್ಥೆ ಆಗ್ರಹ

ವಿಶ್ವಸಂಸ್ಥೆ: ಸಿರಿಯನ್ ಗೋಲನ್ನಿಂದ ಇಸ್ರೇಲ್ ಇನ್ನೂ ಹಿಂದೆ ಸರಿಯದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ನಿರ್ಣಯದ ಪರ ಭಾರತ ಸಹಿತ 91 ದೇಶಗಳು ಮತ ಹಾಕಿವೆ ಎಂದು ವರದಿಯಾಗಿದೆ.

ನೈಋತ್ಯ ಸಿರಿಯಾದಲ್ಲಿರುವ ಗೋಲನ್ ಹೈಟ್ಸ್ ಪ್ರಾಂತವನ್ನು 1967ರ ಯುದ್ಧದಲ್ಲಿ ಇಸ್ರೇಲ್ ಸ್ವಾಧೀನ ಪಡಿಸಿಕೊಂಡಿದೆ. ಗೋಲನ್ನಿಂದ ಇಸ್ರೇಲ್ ಹಿಂದಕ್ಕೆ ಸರಿಯದಿರುವ ಬಗ್ಗೆ ಕಳವಳ ವ್ಯಕ್ತಪಡಿಸುವ ನಿರ್ಣಯವನ್ನು ಮಂಗಳವಾರ ನಡೆದ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಈಜಿಪ್ಟ್ ಮಂಡಿಸಿದ್ದು 193 ಸದಸ್ಯ ದೇಶಗಳಲ್ಲಿ 91 ದೇಶಗಳು ಪರ, 8 ವಿರುದ್ಧ ಮತ ಚಲಾಯಿಸಿದರೆ 62 ದೇಶಗಳು ಗೈರಾಗಿದ್ದವು.

ಭಾರತ, ಮಲೇಶ್ಯಾ, ಮಾಲ್ದೀವ್ಸ್, ಬಾಂಗ್ಲಾದೇಶ, ಭೂತಾನ್, ಚೀನಾ, ನೇಪಾಳ, ರಶ್ಯ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಯುಎಇ ಸೇರಿದಂತೆ 91 ದೇಶಗಳು ನಿರ್ಣಯದ ಪರ ಮತ ಹಾಕಿದರೆ ಇಸ್ರೇಲ್, ಆಸ್ಟ್ರೇಲಿಯಾ, ಕೆನಡಾ, ಬ್ರಿಟನ್, ಅಮೆರಿಕ ಸಹಿತ 8 ದೇಶಗಳು ನಿರ್ಣಯವನ್ನು ವಿರೋಧಿಸಿವೆ.

`1967ರಿಂದಲೂ ಅತಿಕ್ರಮಣಕ್ಕೆ ಒಳಗಾಗಿರುವ ಸಿರಿಯನ್ ಗೋಲನ್ನಿಂದ ಇಸ್ರೇಲ್ ಹಿಂದಕ್ಕೆ ಸರಿಯಬೇಕೆಂಬ ವಿಶ್ವಸಂಸ್ಥೆ ಭದ್ರತಾ ಮಂಡಳಿ ಹಾಗೂ ಸಾಮಾನ್ಯ ಸಭೆಯ ನಿರ್ಣಯದ ಪಾಲನೆ ಆಗದಿರುವುದು ತೀವ್ರ ಕಳವಳದ ವಿಷಯವಾಗಿದೆ. ಸಿರಿಯನ್ ಗೋಲನ್ ಹೈಟ್ಸ್ ಪ್ರದೇಶದಲ್ಲಿ ತನ್ನ ಕಾನೂನುಗಳು, ನ್ಯಾಯ ವ್ಯವಸ್ಥೆ ಮತ್ತು ಆಡಳಿತವನ್ನು ಹೇರುವ ಇಸ್ರೇಲ್ನ ನಿರ್ಧಾರ ಅಕ್ರಮ ಮತ್ತು ಅನೂರ್ಜಿತ ಮತ್ತು ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧ ಎಂಬ ಭದ್ರತಾ ಮಂಡಳಿ ನಿರ್ಣಯ 497(1981)ರ ಪಾಲನೆಗೆ ಇಸ್ರೇಲ್ ವಿಫಲವಾಗಿದೆ' ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

`1981ರ ಡಿಸೆಂಬರ್ 14ರಂದು ಇಸ್ರೇಲ್ ಜಾರಿಗೊಳಿಸಿದ ನಿರ್ಧಾರ ಅಕ್ರಮ ಮತ್ತು ಅನೂರ್ಜಿತವಾಗಿದ್ದು ಇದಕ್ಕೆ ಮಾನ್ಯತೆಯಿಲ್ಲ. 1967ರಿಂದ ಆಕ್ರಮಿತ ಗೋಲನ್ ಹೈಟ್ಸ್ ಪ್ರಾಂತದಲ್ಲಿ ಇಸ್ರೇಲ್ನ ವಸಾಹತು ನಿರ್ಮಾಣ ಹಾಗೂ ಇತರ ಚಟುವಟಿಕೆಗಳೂ ಕಾನೂನು ಬಾಹಿರ. 1967ರ ಜೂನ್ 4ರ ರೇಖೆಗೆ ಇಸ್ರೇಲ್ ಹಿಂದಕ್ಕೆ ಸರಿಯಬೇಕು. ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಅನುಷ್ಠಾನಗೊಳ್ಳಬೇಕು ಮತ್ತು ಗೋಲನ್ನಲ್ಲಿ ಇಸ್ರೇಲ್ನ ನಿರಂತರ ಅತಿಕ್ರಮಣ ಮತ್ತು ಸ್ವಾಧೀನತೆಯು ಈ ಪ್ರದೇಶದಲ್ಲಿ ನ್ಯಾಯಯುತ, ಸಮಗ್ರ ಮತ್ತು ಶಾಶ್ವತವಾದ ಶಾಂತಿಯನ್ನು ಸಾಧಿಸುವ ಹಾದಿಯಲ್ಲಿ ಒಂದು ತೊಡಕಾಗಿದೆ' ಎಂದು ನಿರ್ಣಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X