Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ಬಾರಿಯ ಚುನಾವಣೆ ಸ್ವಾತಂತ್ರ್ಯ ಮತ್ತು...

ಈ ಬಾರಿಯ ಚುನಾವಣೆ ಸ್ವಾತಂತ್ರ್ಯ ಮತ್ತು ಅರಾಜಕತೆ ನಡುವಿನ ಆಯ್ಕೆ: ಕಮಲಾ ಹ್ಯಾರಿಸ್

ವಾರ್ತಾಭಾರತಿವಾರ್ತಾಭಾರತಿ24 July 2024 7:52 AM IST
share
ಈ ಬಾರಿಯ ಚುನಾವಣೆ ಸ್ವಾತಂತ್ರ್ಯ ಮತ್ತು ಅರಾಜಕತೆ ನಡುವಿನ ಆಯ್ಕೆ: ಕಮಲಾ ಹ್ಯಾರಿಸ್

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ ನಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಸ್ವಾತಂತ್ರ್ಯ ಮತ್ತು ಅರಾಜಕತೆ ನಡುವೆ ತಮಗೆ ಯಾವುದು ಬೇಕು ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ತಮ್ಮ ಎದುರಾಳಿ ಹಾಗೂ ರಿಪಬ್ಲಿಕನ್ ಪಕ್ಷದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ.

"ಈ ಪ್ರಚಾರದ ಅವಧಿಯಲ್ಲಿ ಅವರ ಪೂರ್ವ ದಾಖಲೆಗಳ ವಿರುದ್ಧ ನನ್ನದನ್ನು ಯಾವುದೇ ಸಂದರ್ಭದಲ್ಲಾದರೂ ಪ್ರಸ್ತುತಪಡಿಸುವ ಭರವಸೆಯನ್ನು ಹೆಮ್ಮೆಯಿಂದ ನೀಡುತ್ತೇನೆ. ಪ್ರತಿಯೊಬ್ಬರೂ ಪ್ರಯೋಜನ ಪಡೆಯುವುದು ಮಾತ್ರವಲ್ಲದೇ ಮುನ್ನಡೆಯುವ ಅವಕಾಶವನ್ನು ಪ್ರತಿಯೊಬ್ಬರಿಗೆ ಕಲ್ಪಿಸಿಕೊಡುವ ಭವಿಷ್ಯದ ಬಗ್ಗೆ ನನಗೆ ನಂಬಿಕೆ ಇದೆ" ಎಂದು ಅವರು ಘೋಷಿಸಿದರು.

ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಅಧ್ಯಕ್ಷೀಯ ರೇಸ್ ನಿಂದ ಹಿಂದೆ ಸರಿದ ಬೆನ್ನಲ್ಲೇ, ನಾಮನಿರ್ದೇಶನಕ್ಕಾಗಿ ಡೆಮಾಕ್ರಟಿಕ್ ಪ್ರತಿನಿಧಿಗಳ ಬೆಂಬಲ ಯಾಚಿಸಲು ಮಿಲ್ವಾಕೀಗೆ ಹ್ಯಾರಿಸ್ ಆಗಮಿಸಿದ್ದಾರೆ. ಬೈಡನ್ ಅವರು ಹ್ಯಾರಿಸ್ ಹೆಸರನ್ನು ದೃಢಪಡಿಸಿದ ಎರಡೇ ದಿನದಲ್ಲಿ ತಮ್ಮ ಮೊದಲ ಪ್ರಚಾರಸಭೆ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಇದ್ದ ಬೆಂಬಲದ ಕೊರತೆಯನ್ನು ನೀಗಿಸುವ ಭರವಸೆಯನ್ನು ಈ ಸಭೆ ಮೂಡಿಸಿದ್ದು, ನವೆಂಬರ್ ನಲ್ಲಿ ನಡೆಯುವ ಚುಣಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಪರ ನಿಧಾನವಾಗಿ ವಿಶ್ವಾಸದ ಅಲೆ ಸೃಷ್ಟಿಯಾಗುತ್ತಿದೆ. ಮಂಗಳವಾರ ಕಾಂಗ್ರೆಸ್ ಮುಖಂಡರಾದ ಚಾರ್ಲ್ಸ್ ಶುಮೆರ್ ಮತ್ತು ಹ್ಯಾಕೀಮ್ ಜೆಫ್ರಿಸ್ ಸೇರಿದಂತೆ ಹಲವು ಮಂದಿ ಸೇರಿದಂತೆ ಹೆಚ್ಚಿನ ಡೆಮಾಕ್ರಟಿಕ್ ಅಧಿಕಾರಿಗಳು ಮತ್ತು ರಾಜಕೀಯ ಗುಂಪುಗಳ ಬೆಂಬಲವನ್ನು ಪಡೆದರು.

ವಿಸ್ಕಿನ್ ಸನ್ ನಲ್ಲಿ ನಿಲ್ಲುವ ಮೂಲಕ ಹ್ಯಾರಿಸ್ ಮಿಚಿಗನ್ ಹಾಗೂ ಪೆನ್ಸೆಲ್ವೇನಿಯಾ ಸೇರಿದಂತೆ 'ಬ್ಲೂ ವಾಲ್' ರಾಜ್ಯದಲ್ಲಿ ಗುರುತು ಮೂಡಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯ ಗೆಲುವಿಗೆ ಡೆಮಾಕ್ರಟಿಕ್ ಪಕ್ಷಕ್ಕೆ ಇಲ್ಲಿನ ಬೆಂಬಲ ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X