Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದೇಶದ ಸ್ವಾಭಿಮಾನಕ್ಕಿಂತ ಪ್ರಧಾನಿ ಮೋದಿಗೆ...

ದೇಶದ ಸ್ವಾಭಿಮಾನಕ್ಕಿಂತ ಪ್ರಧಾನಿ ಮೋದಿಗೆ ಕ್ರಿಕೆಟ್ ಹೆಚ್ಚಾಯ್ತೇ?: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ15 Sept 2025 2:36 PM IST
share
ದೇಶದ ಸ್ವಾಭಿಮಾನಕ್ಕಿಂತ ಪ್ರಧಾನಿ ಮೋದಿಗೆ ಕ್ರಿಕೆಟ್ ಹೆಚ್ಚಾಯ್ತೇ?: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಪಾಕಿಸ್ತಾನ ಬೆಂಬಲಿತ ಉಗ್ರರು ಭಾರತದೊಳಗೆ ಪ್ರವೇಶಿಸಿ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿನ ಪ್ರವಾಸಿಗರನ್ನು ಹಾಗೂ ಸೈನಿಕರನ್ನು ಕೊಲೆ ಮಾಡಿದರು. ಇಷ್ಟಾದರೂ ದೇಶದ ಸ್ವಾಭಿಮಾನಕ್ಕಿಂತ ಪ್ರಧಾನಿ ಮೋದಿಯವವರಿಗೆ ಕ್ರಿಕೆಟ್ ಹೆಚ್ಚಾಯ್ತೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ನಗರದಲ್ಲಿ ಐವಾನ್ ಎ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ- ಪಾಕಿಸ್ತಾನ ತಂಡಗಳು ಕ್ರಿಕೆಟ್ ಆಡಿವೆ, ಬಿಜೆಪಿಗರಿಗೆ ನಾಚಿಕೆಯಾಗಬೇಕು. ಭಾರತ ಆಡದಿದ್ದರೆ ಅಂಕ ಹೋಗುತ್ತವೆ ಎನ್ನುವುದು ಬಿಜೆಪಿಗೆ ಸಮಜಾಯಿಷಿ ಹೇಳಿಕೆ ನೀಡುತ್ತಾರೆ. ಹೋದರೆ ಹೋಗಲಿ ಬಿಡಿ ಅಂಕ ಮುಖ್ಯವೇ? ಸರಕಾರ ಬಿಸಿಸಿಐಗೆ ಯಾಕೆ ಸ್ಪಷ್ಟ ನಿರ್ದೇಶನ ನೀಡಿಲ್ಲ?. ಪ್ರಧಾನಿ ಮೋದಿ ಯಾಕೆ ಗೃಹ ಸಚಿವರಿಗೆ ಮತ್ತು ಅವರ ಮಗ ಜಯ್ ಶಾಗೆ ಹೇಳಿಲ್ಲ? ಹುತಾತ್ಮರ ಮನೆಯವರೂ ಭಾರತ ಪಾಕ್ ಜೊತೆ ಕ್ರಿಕೆಟ್ ಆಡುವುದು ಬೇಡ ಅಂದಿದ್ದಾರೆ, ಇಷ್ಟೊಂದು ವಿರೋಧದ ನಡುವೆಯೂ ಭಾರತ ಯಾಕೆ ಆಡಿತು ಎಂದು ವಾಗ್ದಾಳಿ ನಡೆಸಿದ್ದಾರೆ.

ಧರ್ಮಸ್ಥಳ, ಮದ್ದೂರು, ಚಾಮುಂಡೇಶ್ವರಿ ಚಲೋ, ಬಿಜೆಪಿಯವರಿಗೆ ಬೇಕಾಗಿರುವುದಾದರೂ ಏನು? ಕಾಮನ್ ಸೆನ್ಸ್ ಇದೆಯಾ? ಧರ್ಮಸ್ಥಳ, ಮದ್ದೂರು ಚಲೋ ಆಯ್ತು. ತಲೆ ಕಡಿರಿ ಅಂತ ಪ್ರಚೋದನೆ ಹೇಳಿಕೆ ನೀಡುವುದು ಬಿಜೆಪಿ ನಾಯಕರ ಚಾಳಿಯಾಗಿದೆ. ಸಿಟಿ ರವಿ ಸೇರಿದಂತೆ ಯಾವ ಬಿಜೆಪಿನಾಯಕರು ತಮ್ಮ ಮಕ್ಕಳ ಕೈಗೆ ಮಚ್ಚು ಲಾಂಗು ಕೊಟ್ಟಿದಾರೆ? ಬಿಜೆಪಿಗರು ರಾಜ್ಯವನ್ನು ಯುಪಿ, ಬಿಹಾರ ಮಾಡಲು ಹೊರಟಿದ್ದಾರ? ಎಂದು ಟೀಕಿಸಿದರು

ಬಿಜೆಪಿ ಪರ ವಾದಿಸುವ ಬಾಡಿಗೆ ಬಾಷಣಕಾರರು ಸೇರಿದಂತೆ ಪ್ರತಾಪ ಸಿಂಹ, ಸಿ.ಟಿ.ರವಿ ತಮ್ಮ ಮಕ್ಕಳ ಹೆಗಲಿಗೆ ಕೇಸರಿ ಶಾಲು ಹಾಕಿ ಧರ್ಮ ರಕ್ಷಣೆಗೆ ಕಳಿಸಿದ್ದಾರೆಯೇ? ಎಂದು ಪ್ರಶ್ನಿಸಿದರು.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗಿಲ್ಲ:

ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆಕಾಂಕ್ಷಿಗಳು ಇದ್ದಾರೆ. ನಮ್ಮಲ್ಲಿ ಕೆಲವರು ಸಿಎಂ, ಎಐಸಿಸಿ ಅಧ್ಯಕ್ಷರಿಗೆ ಇನ್ನೂ ಕೆಲವರು ಡಿಸಿಎಂ ವರೆಗೆ ಮಾತನಾಡಿರುತ್ತಾರೆ. ಅವರು ಏನು ಮಾತನಾಡಿರುತ್ತಾರೆ ನನಗೆ ಗೊತ್ತಿಲ್ಲ. ಸಚಿವ ಸಂಪುಟ ಪುನರ್ ರಚನೆ ಸಿಎಂ, ಎಐಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X