Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಂಚಾರ ನಿಯಮಗಳು ಅನುಸರಿಸಿದರೆ ಅಪಘಾತ...

ಸಂಚಾರ ನಿಯಮಗಳು ಅನುಸರಿಸಿದರೆ ಅಪಘಾತ ತಡೆಯಲು ಸಾಧ್ಯ: ಗೌಸ್ ಮಹಮ್ಮದ್ ಖಾನ್

ಕಲಬುರಗಿ ಗೋದುತಾಯಿ ಕಾಲೇಜಿನಲ್ಲಿ ಸಂಚಾರಿ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 March 2025 1:16 PM IST
share
ಸಂಚಾರ ನಿಯಮಗಳು ಅನುಸರಿಸಿದರೆ ಅಪಘಾತ ತಡೆಯಲು ಸಾಧ್ಯ: ಗೌಸ್ ಮಹಮ್ಮದ್ ಖಾನ್

ಕಲಬುರಗಿ: ಸಾರ್ವಜನಿಕ ರಸ್ತೆಯಲ್ಲಿ ಸಾಗುವಾಗ ವಾಹನಗಳು ಮತ್ತು ಪಾದಚಾರಿಗಳು ಸಂಚಾರ ನಿಯಮಗಳನ್ನು ಅನುಸರಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಸಂಚಾರಿ ಪೊಲೀಸ್ ಸ್ಟೇಷನ್ ಪಿಎಸ್‌ಐ ಗೌಸ್ ಮಹಮ್ಮದ್ ಖಾನ್ ಅವರು ತಿಳಿಸಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಎನ್‌ಎಸ್‌ಎಸ್ ವಿಭಾಗದ ವತಿಯಿಂದ ಸಂಚಾರಿ ನಿಯಮಗಳ ಜಾಗೃತಿ ಕುರಿತು ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ವಾಹನ ನಡೆಸುವುದು ಮುಖ್ಯವಲ್ಲ ಅದರ ಜೊತೆಗೆ ರಸ್ತೆ ನಿಮಯಗಳ ಪಾಲನೆಯೂ ಬಹಳ ಮುಖ್ಯವಾಗಿದೆ. ಸರಿಯಾಗಿ ಪಾಲಿಸದಿದ್ದರೆ ಅಪಘಾತ ಸಂಭವಿಸುತ್ತವೆ. ಕಾನೂನು ಕಾಯ್ದೆಗಳು ಜನ ಸಾಮಾನ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವುದು. ವಾಹನ ಚಾಲನೆ ಮಾಡುವಾಗ ಚಾಚೂ ತಪ್ಪದೆ ಹೆಲ್ಮೇಟ್ ಹಾಗೂ ಸಂಚಾರಿ ನಿಯಮ ಪಾಲನೆ ಮಾಡಿದ್ದಲ್ಲಿ ಅಪಘಾತ ತಪ್ಪುವ ಜತೆಗೆ ದಂಡ ತೆರವುದು ಮತ್ತು ಪ್ರಾಣ ಹಾನಿ ತಪ್ಪಿಸಬಹುದು. ನಿಯಮಗಳನ್ನು ಬಹುತೇಖ ಯುವಜನತೆ ಜತೆ ವಿದ್ಯಾವಂತರೇ ಮೀರುತ್ತಿದ್ದಾರೆಂಬುದು ವಿಷಾದನೀಯ. ಈ ನಿಟ್ಟಿನಲ್ಲಿ ಇಲಾಖೆ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿ ಎಂದು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.

ಸಂಚಾರಿ ಪೋಲಿಸ್ ಅಧಿಕಾರಿ ಗಂಗಾಧರ ರಾಠೋಡ್ ಮಾತನಾಡಿ, ಲೈಸನ್ಸ್ ಪಡೆಯುವುದು, ವಾಹನಗಳ ಇನ್ಸುರೆನ್ಸ್ ಮಾಡಿಸುವುದರ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಮಾತನಾಡಿ, ಹೆಲ್ಮೆಟ್ ಧರಿಸುವುದು, ಚಾಲನೆ ವೇಳೆ ಮೊಬೈಲ್ ಬಳಕೆ ಬಳಸದಿರುವುದು, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್, ಸೀಟ್ ಬೆಲ್ಟ್ ಧರಿಸುವುದು ಬಹಳ ಮುಖ್ಯವಾಗಿದೆ. ವಿದ್ಯಾರ್ಥಿನಿಯರು ಅತಿ ವೇಗದಲ್ಲಿ ವಾಹನ ಚಲಿಸುವುದನ್ನು ತಪ್ಪಿಸಿ ಇಲ್ಲದಿದ್ದರೆ ಅಪಘಾತಗಳು ಸಂಭವಿಸುತ್ತವೆ. ಸಂಚಾರಿ ನಿಯಮಗಳು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಎಂದು ಕರೆ ನೀಡಿದರು.

ವೇದಿಕೆ ಮೇಲೆ ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ.ಮೀಲಿಂದ ಸುಳ್ಳದ್, ಕಲ್ಪನಾ ಡಿ.ಎಮ್, ಐಕ್ಯೂಎಸಿ, ನ್ಯಾಕ್ ಸಂಯೋಜಕರಾದ ಡಾ.ಸಿದ್ಧಲಿಂಗರೆಡ್ಡಿ ಮತ್ತಿತರರು ಇದ್ದರು.

ಕು. ಅಂಬಿಕಾ ಸ್ವಾಗತಿಸಿದರು, ಕು.ಜವೇರಿಯಾ ಅಂಜುಮ್ ನಿರೂಪಿಸಿದರೆ ಕು.ದಾನೇಶ್ವರಿ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X