Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ವಿದ್ಯಾರ್ಥಿ ವಸತಿ ನಿಲಯಗಳ...

Afzalpur | ವಿದ್ಯಾರ್ಥಿ ವಸತಿ ನಿಲಯಗಳ ಆಹಾರ ಧಾನ್ಯ ವಿತರಣೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 Jun 2026 8:55 PM IST
share
Afzalpur | ವಿದ್ಯಾರ್ಥಿ ವಸತಿ ನಿಲಯಗಳ ಆಹಾರ ಧಾನ್ಯ ವಿತರಣೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಒತ್ತಾಯ

ಅಫಜಲಪುರ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ 14 ವಿದ್ಯಾರ್ಥಿ ವಸತಿ ನಿಲಯಗಳಿಗೆ ಸರ್ಕಾರದಿಂದ ಹಂಚಿಕೆಯಾಗಿರುವ ಆಹಾರ ಧಾನ್ಯಗಳ ಎತ್ತುವಳಿ, ವಿತರಣೆ ಹಾಗೂ ಬಳಕೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿದೆ ಎಂದು ದಲಿತ ಮುಖಂಡರಾದ ಅಶೋಕ ಸಿಂಗೆ, ಸಾಗರ ಈಸ್ಫೂರ, ಭೀಮರಾವ ಗೌರ ಹಾಗೂ ಪುಂಡಲೀಕ ಹೊಸಮನಿ ಆರೋಪಿಸಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ, ಜನ ಕಲ್ಯಾಣ ಸೇವಾ ಸಂಘಟನೆ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಅವರು 2025ರ ಜೂನ್ 10ರಂದು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ಲಿಮಿಟೆಡ್‌ಗೆ ಪತ್ರ ಬರೆದು ಡಿಸೆಂಬರ್-2024, ಜನವರಿ-2025 ಹಾಗೂ ಫೆಬ್ರವರಿ-2025ರ ಆಹಾರ ಧಾನ್ಯಗಳನ್ನು ಒಂದೇ ಇಂಡೆಂಟ್ ಮೂಲಕ ಎತ್ತುವಳಿ ಮಾಡಲು ಕ್ರಮ ಕೈಗೊಂಡಿರುವುದು ದಾಖಲೆಗಳಿಂದ ತಿಳಿದುಬಂದಿದೆ ಎಂದು ಅವರು ದೂರಿದರು.

ತಾಲೂಕಿನ 14 ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 1,398 ವಿದ್ಯಾರ್ಥಿಗಳಿಗೆ ಸರ್ಕಾರದ ಮಾನದಂಡದಂತೆ ಪ್ರತಿ ತಿಂಗಳು ತಲಾ 10 ಕೆ.ಜಿ ಅಕ್ಕಿ ಹಾಗೂ 5 ಕೆ.ಜಿ ಗೋಧಿ ವಿತರಿಸಬೇಕಿದೆ. ಮೂರು ತಿಂಗಳ ಅವಧಿಗೆ 419 ಕ್ವಿಂಟಲ್ ಅಕ್ಕಿ ಹಾಗೂ 209 ಕ್ವಿಂಟಲ್ ಗೋಧಿ ಅಗತ್ಯವಿದೆ. ಆದರೆ ಇದೇ ಪ್ರಮಾಣದ ಆಹಾರ ಧಾನ್ಯಗಳನ್ನು ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಬಿಡುಗಡೆ ಮಾಡಿರುವ ದಾಖಲೆಗಳು ಕಂಡುಬಂದಿದ್ದು, ಒಟ್ಟು ಆರು ತಿಂಗಳ ಅವಧಿಗೆ 838 ಕ್ವಿಂಟಲ್ ಅಕ್ಕಿ ಹಾಗೂ 418 ಕ್ವಿಂಟಲ್ ಗೋಧಿಯ ಎತ್ತುವಳಿ ಮತ್ತು ವಿತರಣೆಯ ಕುರಿತು ಅನುಮಾನ ಮೂಡಿದೆ ಎಂದು ಹೇಳಿದರು.

ಉಗ್ರಾಣದಿಂದ ಬಿಡುಗಡೆಯಾದ ಆಹಾರ ಧಾನ್ಯಗಳು ವಸತಿ ನಿಲಯಗಳಿಗೆ ಡೋರ್ ಡೆಲಿವರಿ ಮೂಲಕ ತಲುಪಿರುವ ಬಗ್ಗೆ ಸ್ಪಷ್ಟ ದಾಖಲೆಗಳಿಲ್ಲ. ಸಾಗಾಣಿಕೆ ವಾಹನಗಳ ವಿವರ, ಜಿಪಿಎಸ್ ಮಾಹಿತಿ, ವಸತಿ ನಿಲಯಗಳ ಮೇಲ್ವಿಚಾರಕರ ದೃಢೀಕರಣ ಪತ್ರಗಳು ಹಾಗೂ ಸ್ಟಾಕ್ ರಿಜಿಸ್ಟರ್‌ಗಳ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಇಂಡೆಂಟ್‌ಗಳು, ಉಗ್ರಾಣ ಬಿಡುಗಡೆ ದಾಖಲೆಗಳು, ಸಾಗಾಣಿಕೆ ದಾಖಲೆಗಳು, ವಾಹನಗಳ ವಿವರಗಳು, ಜಿಪಿಎಸ್ ಮಾಹಿತಿ, ಸ್ಟಾಕ್ ರಿಜಿಸ್ಟರ್‌ಗಳು ಹಾಗೂ ಸ್ವೀಕೃತಿ ಪತ್ರಗಳನ್ನು ಪರಿಶೀಲಿಸಿ ಸ್ವತಂತ್ರ ಮತ್ತು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅರವಿಂದ ದೊಡ್ಡಮನಿ, ಮಹಾಂತೇಶ ಬಡದಾಳ, ಶ್ರೀಮಂತ ಬಿರಾದಾರ, ವಿಠ್ಠಲ್ ಸಿಂಗೆ, ಮುತ್ತು ಕುರಿಮನಿ, ಪ್ರಕಾಶ ತೆಲ್ಲುಣಗಿ, ಕುಪೇಂದ್ರ ಸಿಂಗೆ, ಗುರುಶಾಂತ ದೊಡ್ಡಮನಿ, ಶರಣು ದೊಡ್ಡಮನಿ, ಚಿದಾನಂದ ಗುಡ್ಡಡಗಿ, ಚಿದಾನಂದ ಬಸರಿಗೆಡ್ಡಿ, ಪೀರಪ್ಪ ಜಮಖಂಡಿ, ಚಂದ್ರಕಾಂತ ಬಿಲ್ವಾಡ, ರಮೇಶ ನೂಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X