Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರತಿ ಟನ್‌ ಕಬ್ಬಿಗೆ 3,500...

ಕಲಬುರಗಿ | ಪ್ರತಿ ಟನ್‌ ಕಬ್ಬಿಗೆ 3,500 ಬೆಲೆಗೆ ನಿಗದಿಗೆ ಆಗ್ರಹಿಸಿ ಅಫಜಲಪುರ ಬಂದ್

ವಾರ್ತಾಭಾರತಿವಾರ್ತಾಭಾರತಿ10 Nov 2025 7:22 PM IST
share
ಕಲಬುರಗಿ | ಪ್ರತಿ ಟನ್‌ ಕಬ್ಬಿಗೆ 3,500 ಬೆಲೆಗೆ ನಿಗದಿಗೆ ಆಗ್ರಹಿಸಿ ಅಫಜಲಪುರ ಬಂದ್

ಕಲಬುರಗಿ: ಪ್ರತಿ ಟನ್‌ ಕಬ್ಬಿಗೆ 3,500 ಬೆಲೆಗೆ ನಿಗದಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಅಫಜಲಪುರ ಪಟ್ಟಣವನ್ನು ಬಂದ್ ಮಾಡಿ ರೈತಪರ ಮುಖಂಡರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಫಜಲಪುರ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಕಲಬುರಗಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘಗಳ ಆಶ್ರಯದಲ್ಲಿ ನಡೆದಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ಒಂದು ವಾರದಿಂದ ನಿರಂತರ ಧರಣಿ ಸತ್ಯಾಗ್ರಹವನ್ನು ನಡೆಸುತ್ತಾ ಬಂದಿರುವ ಸ್ವಾಭಿಮಾನಿ ರೈತ ಹೋರಾಟಗಾರರ ಒಕ್ಕೂಟದ ಮುಖಂಡರು ಯಾವುದೇ ಕಾರಣಕ್ಕೂ ಕಬ್ಬಿಗೆ ರೂ.3500ಕ್ಕಿಂತ ಕಡಿಮೆ ಬೆಲೆ ನೀಡಿದರೆ ರೈತರು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಅಫಜಲಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಬೇರೆ ಬೇರೆ ಹಳ್ಳಿಗಳಿಂದ ಆಗಮಿಸಿ, ತಮ್ಮ ಬೇಡಿಕೆಗಾಗಿ ಅಫಜಲಪುರ ಪಟ್ಟಣ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಬೆಳಗ್ಗೆ 10 ಗಂಟೆಯಿಂದಲೇ ಪಟ್ಟಣದಾದ್ಯಂತ ಯಾವುದೇ ಬಸ್ ಸಂಚಾರ ನಡೆಯಲಿಲ್ಲ. ರೈತರು ತರುತ್ತಿರುವ ಟ್ಯಾಕ್ಟರ್‌ಗಳು ಮತ್ತು ದ್ವಿಚಕ್ರ ವಾಹನಗಳ ಹೊರತಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.

ಪಟ್ಟಣದಲ್ಲಿ ವಾರದ ಸಂತೆಯ ದಿನ ಆದ್ದರಿಂದ ಅನೇಕರು ತರಕಾರಿ, ದವಸ ಧಾನ್ಯಗಳನ್ನು ಮತ್ತು ಹಣ್ಣುಗಳನ್ನು ಮಾರಾಟ ಮಾಡಲು ತಂದಿದ್ದರು. ಹಾಲು, ತರಕಾರಿ ವ್ಯಾಪಾರ ಬಿಟ್ಟರೆ ಯಾವುದೇ ರೀತಿಯ ವಾರದ ಸಂತೆ ಪ್ರತಿವಾರದಂತೆ ನಡೆಯಲಿಲ್ಲ. ಬಸ್ ಸಂಚಾರ ಈ ಮೊದಲೇ ಸ್ಥಗಿತವಾಗಿದ್ದರಿಂದ ದೂರದ ವಿಜಯಪುರ, ಅಕ್ಕಲಕೋಟೆ ಮತ್ತು ಧಾರ್ಮಿಕ ಸುಕ್ಷೇತ್ರ ಘತ್ತರಗಿಗೆ ಹೋಗುವ ಪ್ರಯಾಣಿಕರು ಬಸ್ ಸಂಚಾರ ಇಲ್ಲದೆ ಪರದಾಡಿದರು.

ಇಳುವರಿ ನಿಗದಿ ಮಾಡುವ ಮಾನದಂಡಗಳಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ. ರೈತ ಪ್ರತಿನಿಧಿಗಳ ಎದುರು ಇಳುವರಿ ನಿಗದಿಯ ಪ್ರಕ್ರಿಯೆ ನಡೆಯುವುದಿಲ್ಲ. ಬದಲಾಗಿ ಕಾರ್ಖಾನೆಯ ಪ್ರತಿನಿಧಿಗಳು ಮತ್ತು ಸರಕಾರದ ಅಧಿಕಾರಿಗಳು ಶಾಮೀ ಲಾಗಿ ರೈತರ ಹಿತಾಸಕ್ತಿಯನ್ನು ಬಲಿಕೊಡುತ್ತಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದರು.

ಬೆಳಿಗ್ಗೆ ಒಂಭತ್ತು ಗಂಟೆಯಿಂದಲೇ ಸುತ್ತಮುತ್ತಲಿನ ಹಲವಾರು ಗ್ರಾಮಗಳಿಂದ ಹಸಿರು ಶಾಲು ಕಬ್ಬಿನ ಜಲ್ಲೆಗಳನ್ನು ಹಿಡಿದುಕೊಂಡು ಎತ್ತಿನಗಾಡಿ ಮತ್ತು ಭಾರಕೋಲು ಸಮೇತ ರೈತರು ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದರು. ನೂರಾರು ಜನ ರೈತರು ಹಸಿರು ಶಾಲು ತಿರುಗಿಸುತ್ತಾ ಬಾರೆಕೋಲಿನ ಚಾಟಿ ಬಾರಿಸುತ್ತಾ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಮತ್ತು ಸಹ ನಿರ್ದೇಶಕರು ಸ್ಥಳಕ್ಕೆ ಆಗಮಿಸುವವರೆಗೆ ಬಂದ್ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಬಂದ್ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಾದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಮತ್ತು ಪ್ರಮುಖ ಬೀದಿಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X