Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಏಕಕಾಲಕ್ಕೆ ಮೂರು ಕಚೇರಿಗಳ...

ಅಫಜಲಪುರ | ಏಕಕಾಲಕ್ಕೆ ಮೂರು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ7 Jan 2026 7:35 PM IST
share
ಅಫಜಲಪುರ | ಏಕಕಾಲಕ್ಕೆ ಮೂರು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಅಫಜಲಪುರ : ಪಟ್ಟಣದಲ್ಲಿನ ತಹಶೀಲ್ ಕಚೇರಿ, ಪುರಸಭೆ ಹಾಗೂ ಉಪನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಿಢೀರ್‌ ದಾಳಿ ನಡೆಸಿ, ವಿವಿಧ ಕಡತಗಳನ್ನು ಪರಿಶೀಲಿಸಿ ತಪ್ಪುಗಳು ಕಂಡುಬಂದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು, ರಾಮನಗರ ಹಾಗೂ ಗದಗ ಲೋಕಾಯುಕ್ತ ವಿಭಾಗದ ಮೂರು ತಂಡಗಳು ಕಚೇರಿಗಳು ಆರಂಭವಾಗುತ್ತಿದ್ದಂತೆಯೇ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದ ತಂಡ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪರಿಶೀಲನೆ ನಡೆಸಿತು. ದಿನನಿತ್ಯದ ನೋಂದಣಿ ಪುಸ್ತಕವನ್ನು ಸರಿಯಾಗಿ ನಿರ್ವಹಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ತಕ್ಷಣದಿಂದಲೇ ನೋಂದಣಿ ಪುಸ್ತಕ ಬರೆಯುವಂತೆ ದ್ವಿತೀಯ ದರ್ಜೆ ಸಿಬ್ಬಂದಿ ಜಯಪುತ್ರ ರಾಜೋಳ್ಕರ್ ಅವರಿಗೆ ಸೂಚನೆ ನೀಡಿದರು.

ಕಚೇರಿಯಲ್ಲಿ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯಗಳ ಕೊರತೆ ಹಾಗೂ ದಲ್ಲಾಳಿಗಳ ಹಾವಳಿ ಕುರಿತು ಉಪನೋಂದಣಾಧಿಕಾರಿ ಪ್ರಕಾಶ್ ಪವಾರ್ ಅವರಿಗೆ ಲೋಕಾಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನ್ಯೂನತೆ ಕಂಡುಬಂದ ದಾಖಲೆಗಳನ್ನು ದೃಢೀಕರಿಸಿ ವಶಕ್ಕೆ ಪಡೆಯಲಾಯಿತು.

ಪುರಸಭೆ ಕಚೇರಿಯಲ್ಲಿ ಸಿಬ್ಬಂದಿಗಳ ಮೊಬೈಲ್ ಪರಿಶೀಲನೆ :

ಬೆಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿಜಯಕುಮಾರ ಕೆ.ಸಿ. ನೇತೃತ್ವದ ತಂಡ ಪುರಸಭೆ ಕಚೇರಿಗೆ ದಾಳಿ ನಡೆಸಿ, ಸಿಬ್ಬಂದಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆದು ಫೋನ್‌ಪೇ, ಗೂಗಲ್‌ಪೇ ಸೇರಿದಂತೆ ಡಿಜಿಟಲ್ ಹಣಕಾಸು ವಹಿವಾಟುಗಳ ಪರಿಶೀಲನೆ ನಡೆಸಿತು. ಈ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ತಹಶೀಲ್ ಕಚೇರಿಯಲ್ಲಿ ಸಾರ್ವಜನಿಕ ಸೇವೆಗಳ ಪರಿಶೀಲನೆ :

ರಾಮನಗರ ಲೋಕಾಯುಕ್ತ ಸಬ್‌ಇನ್ಸ್‌ಪೆಕ್ಟರ್ ವಿಜಯಕುಮಾರ ಕೃಷ್ಣ ನೇತೃತ್ವದ ತಂಡ ತಹಶೀಲ್ ಕಚೇರಿಯಲ್ಲಿ ದಾಖಲೆ ಹಾಗೂ ದಾಸ್ತಾನು ಪರಿಶೀಲನೆ ನಡೆಸಿ, ಜನನ–ಮರಣ ಪ್ರಮಾಣ ಪತ್ರ, ಸಿಂಧುತ್ವ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಶೌಚಾಲಯದ ಕೊರತೆ ಕುರಿತು ಪ್ರಶ್ನಿಸಿದಾಗ, ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು, “ಹೊಸ ಶೌಚಾಲಯ ನಿರ್ಮಾಣವಾಗಿದ್ದು, ಶೀಘ್ರವೇ ಉದ್ಘಾಟನೆ ಮಾಡಲಾಗುವುದು” ಎಂದು ತಿಳಿಸಿದರು.ಸ್ಮಶಾನ ಭೂಮಿ ಅಕ್ರಮ ವರ್ಗಾವಣೆ ಆರೋಪ

ಈ ಸಂದರ್ಭದಲ್ಲಿ ಬಳೂರ್ಗಿ ಗ್ರಾಮದ ಸರ್ವೆ ನಂ.423ರಲ್ಲಿನ ಸ್ಮಶಾನದ 30 ಗುಂಟೆ ಭೂಮಿಯನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಕಾನೂನುಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ಜಿಲ್ಲಾ ಅಧ್ಯಕ್ಷ ರಮೇಶ್ ನಾಟೀಕಾರ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದರು.

ಮೂಟೆಗಟ್ಟಲೇ ದಾಖಲೆ ಸಲ್ಲಿಸಿದ ಮಳೇಂದ್ರ ಡಾಂಗೆ :

ಅಫಜಲಪುರ ಪುರಸಭೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ವೇಳೆ, ಪುರಸಭೆ ಮಾಜಿ ಸದಸ್ಯ ಮಳೇಂದ್ರ ಡಾಂಗೆ ಅವರು ಮೂಟೆಗಟ್ಟಲೇ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಸಾರ್ವಜನಿಕ ಆಸ್ಪತ್ರೆ ಎದುರು ಶೌಚಾಲಯ ನಿರ್ಮಾಣದ ವಿರುದ್ಧ ಕ್ರಮ ಜರುಗಿಸದಿರುವುದು, ಗಾರ್ಡನ್ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಮನೆ ನಿರ್ಮಾಣಕ್ಕೆ ಅನುಮತಿ ನೀಡಿರುವುದು, ನಕಲಿ ಖಾತಾ ಸೃಷ್ಟಿ, ಒಂದೇ ವ್ಯಕ್ತಿಗೆ ಎರಡು ಜಾತಿ ಪ್ರಮಾಣ ಪತ್ರ ನೀಡಿರುವುದು ಸೇರಿದಂತೆ ಹಲವು ಅಕ್ರಮಗಳ ಕುರಿತು ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ.

Tags

LokayuktaAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X