Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Afzalpur | ಅಸಮರ್ಪಕ ವಿದ್ಯುತ್ ಪೂರೈಕೆ...

Afzalpur | ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 May 2026 8:30 PM IST
share
Afzalpur | ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ರೈತರಿಂದ ಪ್ರತಿಭಟನೆ

ಅಫಜಲಪುರ: ತಾಲೂಕಿನ ರೇವೂರ(ಬಿ) ಜೆಸ್ಕಾಂ ಕೇಂದ್ರದಿಂದ ಅಸಮರ್ಪಕ ವಿದ್ಯುತ್ ಪೂರೈಕೆ, ಸಿಬ್ಬಂದಿಗಳ ಅಸಹಕಾರ ಧೋರಣೆ ಹಾಗೂ ಟಿ.ಸಿ ಸುಟ್ಟಾಗ ಹಣಕ್ಕಾಗಿ ಪೀಡಿಸುತ್ತಿರುವುದನ್ನು ಖಂಡಿಸಿ ರೇವೂರ(ಬಿ) ಜೆಸ್ಕಾಂ ವಲಯದ ಬಡದಾಳ, ರೇವೂರ(ಬಿ), ಚಿಂಚೋಳಿ, ಅರ್ಜುಣಗಿ, ಸಿದ್ದನೂರ, ಅಂಕಲಗಿ, ಕುಲಾಲಿ ಗ್ರಾಮಗಳ ರೈತರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರೇವೂರ(ಬಿ) ಜೆಸ್ಕಾಂ ವಲಯದಿಂದ ಗ್ರಾಮಗಳು ಹಾಗೂ ಹೊಲಗದ್ದೆಗಳಿಗೆ ಸರಿಯಾದ ವಿದ್ಯುತ್ ಸಂಪರ್ಕ ನೀಡುತ್ತಿಲ್ಲ. ಹೊಲಗದ್ದೆಗಳಲ್ಲಿ ಸಮರ್ಪಕ ವಿದ್ಯುತ್ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

33 ಕೆವಿ ಸಾಮರ್ಥ್ಯದ ರೇವೂರ ಕೇಂದ್ರದಿಂದ 110 ಕೆವಿ ಸಾಮರ್ಥ್ಯದ ಚವಡಾಪುರ ಪಕ್ಕದ ಊರಿನವರೆಗೂ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ. ಆದರೆ ನಮ್ಮ ಭಾಗದಲ್ಲೇ ಹೆಚ್ಚಿನ ಬೇಡಿಕೆ ಇದ್ದರೂ ಸಮರ್ಪಕ ಪೂರೈಕೆ ಮಾಡುತ್ತಿಲ್ಲ ಎಂದು ದೂರಿದರು.

40 ಡಿಗ್ರಿಗಿಂತ ಹೆಚ್ಚಿನ ಸುಡುಬಿಸಿಲಿನಿಂದ ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಬೆಳೆ ಉಳಿಸಿಕೊಳ್ಳಲು ಸರಿಯಾದ ಸಮಯಕ್ಕೆ ವಿದ್ಯುತ್ ಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಸಹಕಾರ ಧೋರಣೆ ತಾಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಕರೆ ಮಾಡಿದರೂ ಸ್ಪಂದಿಸುವುದಿಲ್ಲ. ಟಿ.ಸಿ ಸುಟ್ಟರೆ ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಹಣ ಬೇಡಿಕೆ ಇಡುತ್ತಾರೆ. ಹಣ ಕೊಟ್ಟರೂ ಸಮಯಕ್ಕೆ ಟಿ.ಸಿ ಅಳವಡಿಸದೆ ವಿಳಂಬ ಮಾಡುತ್ತಾರೆ ಎಂದು ಆರೋಪಿಸಿದರು.

ರೇವೂರ(ಬಿ) ಕೇಂದ್ರವು 33 ಕೆವಿ ಸಾಮರ್ಥ್ಯ ಹೊಂದಿದ್ದು, ಹೆಚ್ಚಿನ ಬೇಡಿಕೆ ಇರುವುದರಿಂದ ಅದನ್ನು 65 ಕೆವಿಗೆ ಹೆಚ್ಚಿಸಬೇಕು. ರೈತರ ಸಮಸ್ಯೆಗಳನ್ನು ಮೇ 10ರೊಳಗೆ ಬಗೆಹರಿಸಬೇಕು. ಇಲ್ಲದಿದ್ದರೆ ಮೇ 15ರಿಂದ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಚವಡಾಪುರ ಜೆಸ್ಕಾಂ ವಲಯದ ಎಇಇ ಖೈಮುದ್ದಿನ್ ಭೇಟಿ ನೀಡಿ, ಮೇ 10ರೊಳಗೆ ರೇವೂರ ವಲಯದ ವಿದ್ಯುತ್ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವುದೇ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು, ಧರಣಿ ಕೈಬಿಡುವಂತೆ ಮನವಿ ಮಾಡಿದರು. ಅವರ ಭರವಸೆಯ ಮೇರೆಗೆ ರೈತರು ಪ್ರತಿಭಟನೆ ಹಿಂಪಡೆದರು.

ಈ ಸಂದರ್ಭದಲ್ಲಿ ಬಡದಾಳ, ಕುಲಾಲಿ, ರೇವೂರ, ಸಿದ್ದನೂರ, ಅಂಕಲಗಿ, ಅರ್ಜುಣಗಿ, ಚಿಂಚೋಳಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿದ್ದರು.

Tags

FarmerprotestAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X