Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಸಿಜೆಐ ಗವಾಯಿ ಮೇಲೆ ಶೂ ಎಸೆತ...

ಅಫಜಲಪುರ | ಸಿಜೆಐ ಗವಾಯಿ ಮೇಲೆ ಶೂ ಎಸೆತ ಘಟನೆ ಖಂಡಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Oct 2025 8:33 PM IST
share
ಅಫಜಲಪುರ | ಸಿಜೆಐ ಗವಾಯಿ ಮೇಲೆ ಶೂ ಎಸೆತ ಘಟನೆ ಖಂಡಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ

ಕಲಬುರಗಿ: ಸುಪ್ರೀಂಕೋರ್ಟ್ ಕಲಾಪದಲ್ಲಿ ನ್ಯಾಯಾಧೀಶರತ್ತ ಬೂಟು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ವಕೀಲ ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ತಕ್ಷಣವೇ ಗಡಿಪಾರು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ, ಅಫಜಲಪುರ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಹಿರಿಯ ವಕೀಲರಾದ ಕೆ.ಜಿ. ಪೂಜಾರಿ ಅವರು ಈ ವೇಳೆ ಮಾತನಾಡಿ, ಸಂವಿಧಾನದ ಅಡಿಯಲ್ಲಿ ನ್ಯಾಯಾಂಗದ ಸರ್ವೋಚ್ಚ ಪೀಠವದಲ್ಲಿ ಇರುವ ನ್ಯಾಯಾಧೀಶರನ್ನು ಅವಮಾನಿಸುವುದು ದೇಶದ್ರೋಹದ ಅಪರಾಧವಾಗಿದೆ. ಆಪಾದಿತನನ್ನು ಗಡಿಪಾರು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿದರು.

ವಸೀಮ ಜಾಗೀರ್ದಾರ್ ಮಾತನಾಡಿ, ಸನಾತನ ಧರ್ಮದ ರಕ್ಷಣೆಗಾಗಿ ನಾನು ಈ ಕಾರ್ಯ ಮಾಡಿದ್ದೇನೆ ಎಂದು ಹೇಳುವ ಅಪರಾಧಿಯ ಡೋಂಗಿ ಮಾತುಗಳನ್ನು ಯಾರೂ ಪರಿಗಣಿಸಬಾರದು, ಧರ್ಮ ರಕ್ಷಣೆಗಾಗಿ ಇಂಥ ಕಾರ್ಯ ಮಾಡಲು ಸಾಧ್ಯವಿಲ್ಲ, ಆಪಾದಿತನ ಉದ್ದೇಶಗಳು ಬೇರೆ ಇದ್ದಿರಬಹುದು, ಆದ್ದರಿಂದ ಆಪಾದಿತನನ್ನು ತಕ್ಷಣವೇ ಬಂಧಿಸಿ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಒತ್ತಾಯಿಸಿದರು.

ವಕೀಲರಾದ ಅನಿತಾ ಅವರು ಮಾತನಾಡಿ, ಇಂಥ ಪ್ರಕರಣ ನ್ಯಾಯಾಂಗದ ಇತಿಹಾಸದಲ್ಲಿ ನಡೆದಿಲ್ಲ ಮತ್ತು ನಡೆಯಬಾರದು, ಅಂತಹ ಕಠಿಣವಾದ ಶಿಕ್ಷೆಯನ್ನು ಆಪಾದಿತನಿಗೆ ಕೊಡಬೇಕು ಎಂದು ಹೇಳಿದರು.

ಯುವ ವಕೀಲರಾದ ಗುರು ಪೂಜಾರಿ, ವಕೀಲರ ಸಂಘದ ಅಧ್ಯಕ್ಷರಾದ ಎಸ್.ಎಸ್. ಪಾಟೀಲ್ ಅವರು ಮಾತನಾಡಿದರು.

ಅಫಜಲಪುರ ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷರಾದ ಆರ್.ಎ.ನೂಲಾ, ಆರ್.ಎನ್.ಪೂಜಾರಿ, ಜಂಟಿ ಕಾರ್ಯದರ್ಶಿ ಸುರೇಶ ಅವಟೆ, ಖಜಾಂಚಿ ರಾಜೇಂದ್ರ ಸರ್ದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸಿ.ಎಸ್.ಹಿರೇಮಠ, ಅನಿತಾ ದೊಡ್ಡಮನಿ, ಎಸ್. ಎನ್. ಪೂಜಾರಿ, ಎಸ್.ಬಿ.ತಳಕೇರಿ, ಎಸ್‌.ಟಿ.ರಾಥೋಡ್, ಪಿ.ಆರ್.ಪಾಟೀಲ್, ಎಂ.ಬಿ.ಪವಾರ್, ಎ.ಎಸ್.ಜಮಾದಾರ, ದತ್ತು ಪೂಜಾರಿ, ಸಿದ್ದರಾಮ ಇಸ್ಪೂರ, ಎಸ್.ಡಿ.ಮಂಜುನಾಥ್, ಸುಪ್ರಿಯಾ ಅಂಕಲಗಿ, ಡಿ.ಎಸ್.ಕುಂಬಾರ್, ಮತ್ತು ಸಲಹಾ ಸಮಿತಿಯ ಸದಸ್ಯರಾದ ಎಸ್.ಕೆ.ಪೂಜಾರಿ, ಎಸ್.ಜೆ.ಗುತ್ತೇದಾರ್, ನಾಗೇಶ್ ಕೊಳ್ಳಿ, ಮಂಜುನಾಥ್ ಕೊಳ್ಳಿ, ಅರ್ಜುನ್ ಕೆರೂರ್ ಮತ್ತು ಪಟ್ಟಣದ ಅನೇಕ ನಾಗರಿಕರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಸಲಾಯಿತು.

Tags

Afzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X