Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Aland | ರಸ್ತೆ ಅಗಲೀಕರಣ ಕಾಮಗಾರಿಗೆ...

Aland | ರಸ್ತೆ ಅಗಲೀಕರಣ ಕಾಮಗಾರಿಗೆ ವೇಗ; ಬಾಕಿ ಕಟ್ಟಡಗಳ ತೆರವು ಕಾರ್ಯಾಚರಣೆ ಚುರುಕು

ವಾರ್ತಾಭಾರತಿವಾರ್ತಾಭಾರತಿ8 Aug 2026 6:21 PM IST
share
Aland | ರಸ್ತೆ ಅಗಲೀಕರಣ ಕಾಮಗಾರಿಗೆ ವೇಗ; ಬಾಕಿ ಕಟ್ಟಡಗಳ ತೆರವು ಕಾರ್ಯಾಚರಣೆ ಚುರುಕು

ಆಳಂದ: ಪಟ್ಟಣದ ಹಳೆಯ ತಹಸೀಲ್ ಕಚೇರಿಯಿಂದ ದರ್ಗಾ ಚೌಕ್‌ವರೆಗೆ ಸಾಗುವ ಪ್ರಮುಖ ರಸ್ತೆಯ ಅಗಲೀಕರಣ ಕಾಮಗಾರಿ ಅಂತಿಮ ಹಂತ ತಲುಪಿದ್ದು, ರಸ್ತೆ ವಿಸ್ತರಣೆಗೆ ಅಡ್ಡಿಯಾಗಿದ್ದ ಬಾಕಿ ಕಟ್ಟಡಗಳ ತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಇನ್ನೆರಡು ದಿನಗಳಲ್ಲಿ ಬಾಕಿ ಉಳಿದಿರುವ ಬಹುತೇಕ ಕಟ್ಟಡಗಳ ತೆರವು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಆಡಳಿತ ಮೂಲಗಳು ತಿಳಿಸಿವೆ.

ತೆರವು ಕಾರ್ಯಾಚರಣೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಕಳೆದ ಕೆಲ ದಿನಗಳಿಂದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ತೆರವು ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ರಸ್ತೆ ಅಭಿವೃದ್ಧಿಯ ಮುಂದಿನ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಪುರಸಭೆ ಆಡಳಿತ ಸಜ್ಜಾಗಿದೆ.

ಒಂದು ಕಿ.ಮೀ.ಗೂ ಅಧಿಕ ಉದ್ದದ ಈ ಪ್ರಮುಖ ರಸ್ತೆಯ ಅಗಲೀಕರಣಕ್ಕಾಗಿ ಹಲವು ಹಂತಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕೆಲ ಆಸ್ತಿ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಹಾಗೂ ಆಸ್ತಿ ದಾಖಲೆಗಳ ಪರಿಶೀಲನೆ ಸೇರಿದಂತೆ ವಿವಿಧ ಕಾರಣಗಳಿಂದ ಕಾರ್ಯಾಚರಣೆ ಕೆಲಕಾಲ ಸ್ಥಗಿತಗೊಂಡಿತ್ತು. ಇದೀಗ ಆಡಳಿತ ಮತ್ತೆ ಕಾರ್ಯಾಚರಣೆಗೆ ವೇಗ ನೀಡಿದ್ದು, ರಸ್ತೆ ವಿಸ್ತರಣೆಗೆ ಅಡ್ಡಿಯಾಗಿರುವ ಕಟ್ಟಡ, ಗೋಡೆ, ಬಾಗಿಲು ಸೇರಿದಂತೆ ವಿವಿಧ ನಿರ್ಮಾಣಗಳನ್ನು ತೆರವುಗೊಳಿಸಲಾಗುತ್ತಿದೆ.

35 ಕಟ್ಟಡಗಳ ಪೈಕಿ 20 ತೆರವು :

ರಸ್ತೆ ಮಾರ್ಗದಲ್ಲಿ 500ಕ್ಕೂ ಹೆಚ್ಚು ಆಸ್ತಿ ಸಂಖ್ಯೆಗಳನ್ನು ಗುರುತಿಸಲಾಗಿದ್ದು, ಹಂತ ಹಂತವಾಗಿ ಬಹುತೇಕ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಇತ್ತೀಚೆಗೆ ಬಾಕಿ ಉಳಿದಿದ್ದ ಸುಮಾರು 35 ಕಟ್ಟಡಗಳ ಪೈಕಿ ಶುಕ್ರವಾರ ಹಾಗೂ ಶನಿವಾರ 20 ಕಟ್ಟಡಗಳ ತೆರವು ಕಾರ್ಯ ಪೂರ್ಣಗೊಂಡಿದೆ. ಉಳಿದ ಕಟ್ಟಡಗಳ ಪೈಕಿ ಸುಮಾರು 10 ಕಟ್ಟಡಗಳ ತೆರವು ಕಾರ್ಯ ಭಾನುವಾರ ಅಥವಾ ಸೋಮವಾರದೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಆಡಳಿತ ಮೂಲಗಳು ತಿಳಿಸಿವೆ.

ಶನಿವಾರ ಮಹಾದೇವ ಮಂದಿರದ ಬಳಿ ಕೆಲವರು ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರೂ, ಆಡಳಿತವು ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ಮುಂದುವರಿಸಿತು.

8 ಜೆಸಿಬಿ, 6 ಹಿಟಾಚಿಗಳ ಬಳಕೆ :

ತೆರವು ಕಾರ್ಯಾಚರಣೆಗೆ ಆಡಳಿತವು ಭಾರಿ ಯಂತ್ರೋಪಕರಣಗಳನ್ನು ನಿಯೋಜಿಸಿದ್ದು, ಶನಿವಾರ 8 ಜೆಸಿಬಿ ಹಾಗೂ 6 ಹಿಟಾಚಿಗಳ ಮೂಲಕ ಕಾರ್ಯಾಚರಣೆ ನಡೆಸಲಾಯಿತು. ರಸ್ತೆ ವಿಸ್ತರಣೆಗೆ ಗುರುತಿಸಲಾದ ಪ್ರದೇಶಗಳಲ್ಲಿನ ಕಟ್ಟಡ, ಗೋಡೆ ಹಾಗೂ ಇತರ ನಿರ್ಮಾಣಗಳನ್ನು ಹಂತ ಹಂತವಾಗಿ ತೆರವುಗೊಳಿಸಲಾಯಿತು.

ಆ. 3ರಂದು ರಸ್ತೆ ಅಗಲೀಕರಣ ಸಮಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಟ್ಟಡಗಳ ಅನುಭೋಗದಾರರಿಗೆ ಸ್ವಯಂಪ್ರೇರಿತವಾಗಿ ತೆರವು ಮಾಡಿಕೊಳ್ಳುವಂತೆ ಸೂಚಿಸಿದ್ದರು. ನಿಗದಿತ ಅವಧಿಯಲ್ಲಿ ತೆರವು ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಆಡಳಿತವು ಯಂತ್ರೋಪಕರಣಗಳ ಮೂಲಕ ಕಾರ್ಯಾಚರಣೆ ಆರಂಭಿಸಿದೆ. ಗುರುವಾರ ಸಂತೆ ಇರುವುದರಿಂದ ಕಾರ್ಯಾಚರಣೆಗೆ ವಿರಾಮ ನೀಡಲಾಗಿದ್ದು, ಶುಕ್ರವಾರದಿಂದ ಮತ್ತೆ ಕಾರ್ಯಾಚರಣೆ ಆರಂಭಿಸಿ ಶನಿವಾರ ಮತ್ತಷ್ಟು ಚುರುಕುಗೊಳಿಸಲಾಯಿತು.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X