Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ| ಅಮರ್ಜಾ ಅಣೆಕಟ್ಟೆ ಸೇರಿ 37...

ಆಳಂದ| ಅಮರ್ಜಾ ಅಣೆಕಟ್ಟೆ ಸೇರಿ 37 ಕೆರೆಗಳು ಭರ್ತಿ, ರೈತರ ಬೆಳೆ ಜಲಾವೃತ : ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ19 Aug 2025 7:06 PM IST
share
ಆಳಂದ| ಅಮರ್ಜಾ ಅಣೆಕಟ್ಟೆ ಸೇರಿ 37 ಕೆರೆಗಳು ಭರ್ತಿ, ರೈತರ ಬೆಳೆ ಜಲಾವೃತ : ಜನಜೀವನ ಅಸ್ತವ್ಯಸ್ತ

ಕಲಬುರಗಿ: ವಾರದಿಂದ ಆಳಂದ ತಾಲೂಕಿನ ಗ್ರಾಮೀಣ ಹಾಗೂ ಪಟ್ಟಣ ಭಾಗಗಳಲ್ಲಿ ನಿರಂತರ ಜಿಟಿಜಿಟಿ ತುಂತುರು ಮಳೆಯೊಂದಿಗೆ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದ್ದು, ಇದರ ಪರಿಣಾಮವಾಗಿ ಅಮರ್ಜಾ ಅಣೆಕಟ್ಟೆ ಸೇರಿದಂತೆ ಆಳಂದ ತಾಲೂಕಿನ 37 ಕೆರೆಗಳು ಭರ್ತಿಯಾಗಿ ಹರಿಯಲು ಆರಂಭಿಸಿದರೆ, ಮತ್ತೊಂದೆಡೆ ರೈತರ ಕೈಗೆ ಬಂದ ಬೆಳೆಗಳು ನೀರಿನಲ್ಲಿ ಮುಳುಗಿ ಹಾನಿಗೊಳಗಾಗಿವೆ.

ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು, ಅಲ್ಲಲ್ಲಿ ಮನೆಗಳು ಕುಸಿದು, ವ್ಯಾಪಾರ ವಹಿವಾಟು ಕುಂಠಿತಗೊಂಡು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ತುಂಬಿ ಹರಿಯುತ್ತಿರುವ ಕೆರೆ :

ಸಾಲೇಗಾಂವ್ ಮತ್ತು ಆಳಂದ ಕೆರೆಗಳು ವೇಸ್ಟ್ವೇರ್‌ನಿಂದ ನೀರು ಹರಿಯಲಾರಂಭಿಸಿದ್ದು, ಸುತ್ತಮುತ್ತಲಿನ ಕೃಷಿ ಭೂಮಿಗಳಲ್ಲಿ ನೀರು ನಿಂತು ಬೆಳೆ ಹಾನಿಯ ಆತಂಕ ಹೆಚ್ಚಿದೆ. 18 ಕಾಲುವೆ ಕೆರೆಗಳು ಹಾಗೂ 17 ಜಿನುಗು ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ಹಳ್ಳ-ಹರಿವುಗಳೆಲ್ಲಾ ಪ್ರಚಂಡವಾಗಿ ಹರಿಯುತ್ತಿವೆ. ತೋಟಗಾರಿಕೆ ಇಲಾಖೆ ಪ್ರಕಾರ ಇನ್ನೂ ತೋಟಗಾರಿಕಾ ಬೆಳೆಗಳು ಹಾನಿಯಾಗದಿದ್ದರೂ, ಮಳೆಯ ಅಬ್ಬರ ಮುಂದುವರಿದರೆ ಅವುಗಳಿಗೂ ತೀವ್ರ ಹಾನಿ ಸಂಭವಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತೊಗರಿ, ಉದ್ದು, ಹೆಸರು ಸೇರಿದಂತೆ ಬಹುತೇಕ ಬೆಳೆಗೆ ನೀರು ನುಗ್ಗಿದ್ದು, ರೈತರು ಬೆಳೆ ಕೊಳೆತುಹೋಗುವ ಭಯದಲ್ಲಿ ಇದ್ದಾರೆ. “ಮಳೆ ನಿಂತ ನಂತರವೇ ನಿಜವಾದ ಹಾನಿಯ ಅಂದಾಜು ಸಾಧ್ಯ, ಆದರೆ ಈಗಲೇ ಹೆಚ್ಚಿನ ಹಾನಿ ಖಚಿತ” ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಮನೆ ಕುಸಿತ – ಜನರಲ್ಲಿ ಆತಂಕ :

ಯಳಸಂಗಿ, ಸರಸಂಬಾ, ವೈಜಾಪೂರ, ಜವಳಿ, ಲಿಂಗದಳ್ಳಿ ಹಾಗೂ ಸಾವಳೇಶ್ವರ ಸೇರಿ ಹಲವು ಗ್ರಾಮಗಳಲ್ಲಿ ಹಳೆಯ ಮಣ್ಣಿನ ಮನೆಗಳು ಕುಸಿದು ಬಿದ್ದಿವೆ. ಕೆಲವು ಗ್ರಾಮಗಳಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಜನರ ಜೀವನ ಅಸ್ತವ್ಯವಸ್ಥವಾಗಿದೆ. “ಮನೆಯ ಗೋಡೆ ಕುಸಿದು ಒಳಗಿನ ಸಾಮಾನು ನಾಶವಾಯಿತು, ಈಗ ಎಲ್ಲಿ ವಾಸಿಸಬೇಕು ಎಂಬ ಆತಂಕದಲ್ಲಿ ಇದ್ದೇವೆ” ಎಂದು ಅಲ್ಲಿನ ನಿವಾಸಿಗಳು ಕಣ್ಣೀರು ಸುರಿಸಿದ್ದಾರೆ.

ಅಮರ್ಜಾ ಅಣೆಕಟ್ಟೆಯ ಸಾಮರ್ಥ್ಯ 1.555 ಟಿಎಂಸಿ ಇದ್ದು, ಈಗಾಗಲೇ 1.450 ಟಿಎಂಸಿ ತುಂಬಿರುವುದರಿಂದ ಅಗತ್ಯಕ್ಕೆ ಅನುಗುಣವಾಗಿ ಗೇಟ್‌ಗಳನ್ನು ಎತ್ತಿ ನೀರು ಬಿಡಲಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ನದಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುವ ಸಾಧ್ಯತೆ ಇದ್ದು, ನದಿ ದಡದಲ್ಲಿನ ಜನ ಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಣೆಕಟ್ಟೆಯ ಒಳಭಾಗದಲ್ಲಿ ನೀರು ಉಕ್ಕಿ ಆಳಂದ ಪಂಪ್‌ಹೌಸ್‌ಗೆ ನುಗ್ಗಿದ್ದರಿಂದ ಪೈಪ್‌ಲೈನ್ ಸೋರಿಕೆಯಾದರೂ ತುರ್ತು ಕ್ರಮ ಕೈಗೊಂಡು ಮರುಜೋಡಣೆ ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು ಹೇಳಿದ್ದಾರೆ.

ಮಕ್ಕಳ ಶಿಕ್ಷಣಕ್ಕೂ ತೊಡಕು :

ಗ್ರಾಮಾಂತರ ರಸ್ತೆಗಳು ಕೆಸರುಮಯವಾಗಿದ್ದು, ನೀರು ನಿಂತಿರುವುದರಿಂದ ಮಕ್ಕಳು ಶಾಲೆಗೆ ಹೋಗಲು ಹೆದರಿದ್ದು, ಕೆಲವು ಗ್ರಾಮಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ.

“ಮಳೆಯಿಂದ ಉಂಟಾದ ಸಂಕಷ್ಟ ನಿವಾರಣೆಗೆ ಆಡಳಿತ ಸ್ಪಂದಿಸಬೇಕು. ರಸ್ತೆ ದುರಸ್ತಿ, ಚರಂಡಿ ಸ್ವಚ್ಛತೆ, ಕೆರೆ ನಿರ್ವಹಣೆ ತಕ್ಷಣ ಕೈಗೊಳ್ಳಬೇಕಿದೆ” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ, ಮಳೆಯ ಸವಿನೆನಪು ನೀಡಿದ ನೀರಿನ ತುಂಬು, ಜನಜೀವನಕ್ಕೆ ದುಃಖದ ಬಿರುಗಾಳಿ ತರಿಸಿದೆ. ರೈತರಿಗೆ ಬೆಳೆ ಹಾನಿ, ವ್ಯಾಪಾರ ಕುಸಿತ, ಮನೆ ಕುಸಿತ, ಸಂಚಾರ ತೊಂದರೆ – ಎಲ್ಲವೂ ಒಂದೇ ವೇಳೆ ಎದುರಾಗಿದ್ದು, ತಕ್ಷಣದ ಪರಿಹಾರ ಕ್ರಮ ಅಗತ್ಯವಾಗಿದೆ ಎಂದು ರೈತರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X