Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ರೈತರ ಸಾಲಮನ್ನಾ ಜೊತೆಗೆ ಪ್ರತಿ...

ಆಳಂದ | ರೈತರ ಸಾಲಮನ್ನಾ ಜೊತೆಗೆ ಪ್ರತಿ ಎಕರೆಗೆ 35,000 ರೂ. ಪರಿಹಾರ ನೀಡಿ: ನಾಗರಾಜ ಶೇಗಜಿ

ವಾರ್ತಾಭಾರತಿವಾರ್ತಾಭಾರತಿ24 Sept 2025 10:59 PM IST
share
ಆಳಂದ | ರೈತರ ಸಾಲಮನ್ನಾ ಜೊತೆಗೆ ಪ್ರತಿ ಎಕರೆಗೆ 35,000 ರೂ. ಪರಿಹಾರ ನೀಡಿ: ನಾಗರಾಜ ಶೇಗಜಿ

ಕಲಬುರಗಿ: ಕಳೆದ ಒಂದು ತಿಂಗಳಿಂದ ಆಳಂದ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ರೈತರ ಹೊಲಗಳು, ಬೆಳೆಗಳು, ರಸ್ತೆ ಮತ್ತು ಮನೆಗಳು ತೀವ್ರ ಹಾನಿಗೊಳಗಾಗಿವೆ ಇದಕ್ಕೆ ಸಾಲಮನ್ನಾ ಮತ್ತು ಪರಿಹಾರವೇ ದಾರಿಯಾಗಿದೆ ಎಂದು ಆಳಂದ ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಶೇಗಜಿ ಧಂಗಾಪೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲ್ಲೂಕಿನ ಜೀವನಾಡಿ ಅಮರ್ಜಾ ಅಣೆಕಟ್ಟು ಸಂಪೂರ್ಣವಾಗಿ ತುಂಬಿ ನೀರು ಬಿಡುವುದರಿಂದ ಭೂಸನೂರ, ಧಂಗಾಪೂರ, ಕೋರಳ್ಳಿ, ದೇವಂತಗಿ, ಜವಳಿ ಡಿ, ಬಟ್ಟರ್ಗಾ, ಹಿತ್ತಲಶಿರೂರ ಮತ್ತು ಕುಡಕಿ ಗ್ರಾಮಗಳ ಸಾವಿರಾರು ಎಕರೆ ಜಮೀನುಗಳು ಜಲಾವೃತಗೊಂಡಿವೆ ಎಂದು ಹೇಳಿದ್ದಾರೆ.

ಪ್ರಮುಖ ಬೆಳೆಗಳಾದ ಕಬ್ಬು, ತೊಗರಿ, ಉದ್ದು, ಸೋಯಾಬೀನ್, ಬಾಳೆಹಣ್ಣು, ಕಾಯಿಪಲ್ಲೆ ಸಂಪೂರ್ಣ ನಾಶವಾಗಿದ್ದು, ರೈತರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಮನೆಗಳು ಹಾಗೂ ಸಂಪರ್ಕ ರಸ್ತೆಗಳು, ಸೇತುವೆಗಳು ಹಾನಿಗೊಳಗಾಗಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ.

ಹಾನಿಗೊಳಗಾದ ಬೆಳೆಗಳಿಗೆ ತಕ್ಷಣ ಪ್ರತಿ ಎಕರೆಗೆ ಸೂಕ್ತ ಪರಿಹಾರ ಘೋಷಿಸಬೇಕು. ಬೆಳೆ ಸಾಲ ಮನ್ನಾ ಮಾಡಿ, ಹೊಸ ಬೆಳೆ ಬೆಳೆಸಲು ಬಿತ್ತನೆ ಬೀಜ ಮತ್ತು ರಸಗೊಬ್ಬರ ಉಚಿತವಾಗಿ ನೀಡಬೇಕು. ಹಾನಿಗೊಳಗಾದ ಮನೆಗಳಿಗೆ ಕನಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಗ್ರಾಮಾಂತರ ರಸ್ತೆಗಳು ಮತ್ತು ಸೇತುವೆಗಳ ತ್ವರಿತ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಪ್ರವಾಹ ಪೀಡಿತರಿಗೆ ತಕ್ಷಣವೇ ತಾತ್ಕಾಲಿಕ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸಹಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇಂದಿನ ಪರಿಸ್ಥಿತಿಯಲ್ಲಿ ರೈತರು ತಮ್ಮ ಬದುಕು ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಸರ್ಕಾರವು ತಕ್ಷಣ ಕ್ರಮ ಕೈಗೊಂಡು ರೈತರ ಸಾಲ ಮನ್ನಾ ಮಾಡಿ ಅದರ ಜೊತೆಗೆ ಪ್ರತಿ ಎಕರೆಗೆ 35,000 ರೂ. ಪರಿಹಾರ ಘೋಷಿಸದಿದ್ದರೆ, ನಾವು ರೈತ ಸಮುದಾಯದೊಂದಿಗೆ ಕಠಿಣ ಹೋರಾಟ ನಡೆಸುತ್ತೇವೆ. ರೈತರ ಕಣ್ಣೀರನ್ನು ಒರೆಸುವುದು ಸರ್ಕಾರದ ಮೊದಲ ಕರ್ತವ್ಯವಾಗಲಿ ಎಂದು ನಾಗರಾಜ ಶೇಗಜಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X