Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ ಬೈಪಾಸ್ ರಸ್ತೆ ಕಾಮಗಾರಿ...

ಆಳಂದ ಬೈಪಾಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ? ಸಾರ್ವಜನಿಕರಿಂದ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ18 July 2026 6:22 PM IST
share
ಆಳಂದ ಬೈಪಾಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ? ಸಾರ್ವಜನಿಕರಿಂದ ಆಕ್ಷೇಪ
1.20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ರಸ್ತೆ ಇಕ್ಕಟ್ಟು, ಕಲ್ವರ್ಟ್ ಅಪೂರ್ಣ : ಆರೋಪ

ಆಳಂದ: ಪಟ್ಟಣದ ವಾಹನ ದಟ್ಟಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಬೈಪಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಯೋಜನೆಯ ಮೂಲ ಉದ್ದೇಶವೇ ಹಾಳಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ.

ಹೊಸ ಚೆಕ್‌ಪೋಸ್ಟ್‌ನಿಂದ ಹನುಮಾನ ಅಗಸಿ ಹಳ್ಳದ ಮೂಲಕ ಎಚ್‌ಕೆಇ ಪದವಿ ಕಾಲೇಜು ಭಾಗಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ, ಶ್ರೀರಾಮ ಮಾರುಕಟ್ಟೆ, ಮುಖ್ಯರಸ್ತೆ ಹಾಗೂ ಬಸ್ ನಿಲ್ದಾಣದ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಪರ್ಯಾಯ ಮಾರ್ಗವಾಗಿ ರೂಪುಗೊಳ್ಳಬೇಕಿತ್ತು. ಆದರೆ ಕಾಮಗಾರಿ ಬಳಿಕ ರಸ್ತೆ ದ್ವಿಮುಖ ಸಂಚಾರಕ್ಕೆ ಅನುಕೂಲವಾಗುವ ಬದಲು ಇಕ್ಕಟ್ಟಿನ ಸಿಮೆಂಟ್ ರಸ್ತೆಯಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ದೂರಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಬಳಿರಾಮ ಬಂಗಲಾದಿಂದ ಹನುಮಾನ ಅಗಸಿ ಹಳ್ಳದವರೆಗೆ ರಸ್ತೆ ವಿಸ್ತರಣೆ ಹಾಗೂ ಸಿಮೆಂಟೀಕರಣ ಕಾಮಗಾರಿ ನಡೆಯುತ್ತಿದ್ದರೂ, ಅಗತ್ಯ ತಾಂತ್ರಿಕ ಮಾನದಂಡಗಳನ್ನು ಪಾಲಿಸಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ದ್ವಿಮುಖ ಸಂಚಾರಕ್ಕೆ ತೊಂದರೆ :

ಮೂಲ ಯೋಜನೆಯ ಪ್ರಕಾರ ರಸ್ತೆ ದ್ವಿಮುಖ ವಾಹನ ಸಂಚಾರಕ್ಕೆ ಅನುಕೂಲವಾಗುವಷ್ಟು ಅಗಲದಲ್ಲಿ ನಿರ್ಮಾಣವಾಗಬೇಕಿತ್ತು. ಆದರೆ ರಸ್ತೆ ಸಮರ್ಪಕವಾಗಿ ವಿಸ್ತರಣೆಯಾಗದ ಕಾರಣ ಎರಡು ವಾಹನಗಳು ಎದುರುಬಂದಾಗ ಒಂದಕ್ಕೆ ದಾರಿ ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರಿಗೆ ಅಪಘಾತದ ಆತಂಕ ಹೆಚ್ಚಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಸೇತುವೆ, ಕಲ್ವರ್ಟ್ ಕಾಮಗಾರಿ ಅಪೂರ್ಣ :

ರಸ್ತೆಯ ಹಿಂಭಾಗದಲ್ಲಿರುವ ಹಳೆಯ ಸೇತುವೆಯ ಪುನರ್‌ನಿರ್ಮಾಣ ಕೈಗೆತ್ತಿಕೊಳ್ಳಲಾಗಿಲ್ಲ. ಜೊತೆಗೆ ಮಧ್ಯಭಾಗದಲ್ಲಿ ನಿರ್ಮಿಸಬೇಕಿದ್ದ ಎರಡು ಕಲ್ವರ್ಟ್ ಕಾಮಗಾರಿಗಳೂ ಪೂರ್ಣಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಳೆಯ ಅನುಭವದಿಂದ ಪಾಠ ಕಲಿತಿಲ್ಲವೇ? :

ಈ ಹಿಂದೆ ಇದೇ ರಸ್ತೆಗೆ ಸುಮಾರು 88 ಲಕ್ಷ ರೂ. ವೆಚ್ಚದಲ್ಲಿ ಡಾಂಬರ ರಸ್ತೆ ನಿರ್ಮಿಸಲಾಗಿತ್ತು. ಆದರೆ ಒಂದು ವರ್ಷ ಪೂರ್ಣಗೊಳ್ಳುವ ಮುನ್ನವೇ ರಸ್ತೆ ಹಾಳಾಗಿತ್ತು. ಇದೀಗ ಅದೇ ರಸ್ತೆಗೆ ಮತ್ತೆ 1.20 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಣ ಸಮರ್ಪಕವಾಗಿ ಬಳಕೆಯಾಗುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಬೈಪಾಸ್ ಭರವಸೆ ಇನ್ನೂ ಈಡೇರಿಲ್ಲ :

ಶಾಸಕ ಬಿ.ಆರ್. ಪಾಟೀಲ ಅವರು ಪಟ್ಟಣಕ್ಕೆ ಸುಸಜ್ಜಿತ ಬೈಪಾಸ್ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದರೂ, ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಸ್ತುತ ನಡೆಯುತ್ತಿರುವ ಕಾಮಗಾರಿಯೂ ಭವಿಷ್ಯದ ವಾಹನ ದಟ್ಟಣೆಗೆ ಶಾಶ್ವತ ಪರಿಹಾರ ನೀಡುವಂತಿಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹೊನ್ನೇಶ ಹಾಗೂ ಕಿರಿಯ ಎಂಜಿನಿಯರ್ ಯುವರಾಜ ದೇವಣಗಾಂವ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಮೊಬೈಲ್ ದೂರವಾಣಿಗಳು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಹೆಸರು ಬಹಿರಂಗಪಡಿಸಲು ಇಚ್ಛಿಸದ ಸ್ಥಳೀಯ ರೈತರೊಬ್ಬರು, “ಈ ಹಿಂದೆ ಇದೇ ರಸ್ತೆ ದ್ವಿಮುಖ ವಾಹನ ಸಂಚಾರಕ್ಕೆ ಅನುಕೂಲಕರವಾಗಿತ್ತು. ಈಗ ರಸ್ತೆ ಅಗಲ ಕಡಿಮೆಯಾಗಿದ್ದು, ಎದುರುಬರುವ ವಾಹನಗಳಿಗೆ ದಾರಿ ಬಿಡುವುದು ಕಷ್ಟವಾಗಿದೆ. ಇದರಿಂದ ಅಪಘಾತಗಳ ಸಂಭವ ಹೆಚ್ಚುವ ಆತಂಕ ಎದುರಾಗಿದೆ,” ಎಂದು ತಿಳಿಸಿದ್ದಾರೆ.

Tags

Aland
share
ವಾರ್ತಾಭಾರತಿ
ವಾರ್ತಾಭಾರತಿ
Next Story
X