Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಡಿಸಿಸಿ ಬ್ಯಾಂಕ್‌ನಲ್ಲಿ ಗ್ರಾಹಕರ...

ಆಳಂದ | ಡಿಸಿಸಿ ಬ್ಯಾಂಕ್‌ನಲ್ಲಿ ಗ್ರಾಹಕರ ದಟ್ಟಣೆ : ವಯೋವೃದ್ಧರು, ಮಹಿಳೆಯರು ಪರದಾಟ

ವಾರ್ತಾಭಾರತಿವಾರ್ತಾಭಾರತಿ9 Oct 2025 7:17 PM IST
share
ಆಳಂದ | ಡಿಸಿಸಿ ಬ್ಯಾಂಕ್‌ನಲ್ಲಿ ಗ್ರಾಹಕರ ದಟ್ಟಣೆ : ವಯೋವೃದ್ಧರು, ಮಹಿಳೆಯರು ಪರದಾಟ

ಕಲಬುರಗಿ: ಆಳಂದ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಹಕರ ಅಪಾರ ದಟ್ಟಣೆಯಿಂದಾಗಿ ವಹಿವಾಟು ಸಂಪೂರ್ಣ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ವಿಶೇಷವಾಗಿ ವಯೋವೃದ್ಧರು ಮತ್ತು ಮಹಿಳಾ ಗ್ರಾಹಕರು ದಿನವಿಡೀ ಸರಣಿಯಲ್ಲಿ ನಿಂತು ಸುಸ್ತಾಗುತ್ತಿರುವ ಸ್ಥಿತಿ ಎದುರಾಗಿದೆ.

ಕಳೆದ ಸಾಲಿನ ಬಾಕಿ ಬೆಳೆಹಣ ಮತ್ತು ಎರಡನೇ ಕಂತಿನ ವಿಮಾ ಮೊತ್ತ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಿಂದ ರೈತರು ಮುಂಜಾನೆ ಬ್ಯಾಂಕ್ ಮುಂಭಾಗ ಸೇರಿಕೊಳ್ಳುತ್ತಿದ್ದಾರೆ. ಈ ವೇಳೆ ಬ್ಯಾಂಕ್‌ನಲ್ಲಿ ಕೇವಲ ಒಂದೇ ಕ್ಯಾಶಿಯರ್ ಕೌಂಟರ್ ಇರುವುದರಿಂದ ದಿನದ ಕೊನೆಯವರೆಗೂ ಹಣ ಪಡೆಯದೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಗ್ರಾಹಕರ ಹೇಳಿಕೆಯ ಪ್ರಕಾರ, ಎಸ್‌ಬಿಐ, ಕೇನರಾ, ಕರ್ನಾಟಕ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವ ಹಲವರು ಸಹ ತಮ್ಮ ಡಿಸಿಸಿ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿರುವುದರಿಂದ, ಇತ್ತೀಚಿನ ವಿಮಾ ಮೊತ್ತ ನೇರವಾಗಿ ಡಿಸಿಸಿ ಬ್ಯಾಂಕ್‌ನಲ್ಲೇ ಜಮಾ ಆಗುತ್ತಿದೆ. ಇದೂ ದಟ್ಟಣೆಗೆ ಪ್ರಮುಖ ಕಾರಣವಾಗಿದೆ.

ರೈತರು ತಮ್ಮ ಊರಿಗೆ ಹಿಂತಿರುಗಲು ಬಸ್ ಸಿಗದೇ ಮಧ್ಯಾಹ್ನದ ಬಿಸಿಲಿನಲ್ಲಿ ಗಂಟೆಗಟ್ಟಲೆ ಕಾಯಬೇಕಾಗುತ್ತಿದೆ. ಹಿರಿಯ ನಾಗರಿಕರು ಮತ್ತು ಮಹಿಳೆಯರು ನಿಂತುಕೊಂಡೇ ಕಾದುಕುಳಿತು ದಣಿದ ಸ್ಥಿತಿಯಲ್ಲಿ ವಹಿವಾಟು ಮುಗಿಯುವವರೆಗೆ ಕಾಯುತ್ತಿದ್ದಾರೆ.

ರೈತ ಸಂಘದ ಕಾರ್ಯಾಧ್ಯಕ್ಷ ಸಿದ್ದು ವೇದಶೆಟ್ಟಿ ಮಾತನಾಡಿ, ಎಲ್ಲ ರೈತರು ವಿಮೆಯ ಎರಡನೇ ಕಂತಿನ ಹಣ ಪಡೆಯಲು ಒಮ್ಮೆಗೆ ಬಂದಿರುವುದರಿoದ ದಟ್ಟಣೆ ಹೆಚ್ಚಾಗಿದೆ. ಜಿಲ್ಲಾಧ್ಯಕ್ಷರು ತಕ್ಷಣ ಕ್ರಮ ಕೈಗೊಂಡು ಇಲ್ಲಿ ಕ್ಯಾಶಿಯರ್ ಕೌಂಟರ್‌ಗಳನ್ನು ಕನಿಷ್ಠ ಎರಡುಗೊಳಿಸಬೇಕು, ಆಗ ರೈತರಿಗೆ ಹಾಗೂ ವಯೋವೃದ್ಧ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕ್ ಆಳಂದ ಶಾಖೆಯ ವ್ಯವಸ್ಥಾಪಕ ಶರಣಬಸಪ್ಪ ಕನಗುಂಡ ಅವರು ಮಾತನಾಡಿ, ಕಳೆದ ಸಾಲಿನ ವಿಮಾ ಹಣವಾಗಿ 16 ಕೋಟಿ ರೂ. ಬಿಡುಗಡೆಯಾಗಿದ್ದು, ಎರಡು ದಿನಗಳಲ್ಲಿ ಸುಮಾರು 2 ಕೋಟಿ ರೂ. ಗ್ರಾಹಕರ ಖಾತೆಗೆ ಜಮಾ ಮಾಡಲಾಗಿದೆ. ಶಾಖೆಯಲ್ಲಿ ಒಟ್ಟು 38 ಸಾವಿರ ಗ್ರಾಹಕರು ಇದ್ದು, 1.45 ಕೋಟಿ ರೂ. ಬೆಳೆಸಾಲ ನೀಡಲಾಗಿದೆ. ಸಿಬ್ಬಂದಿ ಕೊರತೆ ನಡುವೆಯೇ ಕೆಲಸ ನಿರ್ವಹಿಸಲಾಗುತ್ತಿದೆ. ಗ್ರಾಹಕರು ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಫಾರಂಗಳನ್ನು ಮುಂಚಿತವಾಗಿ ಸಲ್ಲಿಸಿದರೆ, ಹಣವನ್ನು ಎರಡು ದಿನಗಳೊಳಗೆ ಅವರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ; ಪುನಃ ಬ್ಯಾಂಕ್‌ಗೆ ಬರಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ಸಿಬ್ಬಂದಿ ಕೊರತೆಯ ನಡುವೆ ಗ್ರಾಹಕರ ಸೇವೆಯಲ್ಲಿ ತೊಡಗಿರುವ ಬ್ಯಾಂಕ್ ಸಿಬ್ಬಂದಿಯು ಸಹ ಒತ್ತಡದಲ್ಲಿದ್ದು, ನಿರ್ವಹಣಾ ಮಂಡಳಿಯು ತಕ್ಷಣ ಕ್ರಮ ಕೈಗೊಂಡರೆ ಮಾತ್ರ ಈ ಸಮಸ್ಯೆ ಶಮನಗೊಳ್ಳಲಿದೆ ಎಂದು ಗ್ರಾಹಕರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X