Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಜೋತಿಬಾ ಫುಲೆ ಭವನ ನಿರ್ಮಾಣಕ್ಕೆ...

ಆಳಂದ | ಜೋತಿಬಾ ಫುಲೆ ಭವನ ನಿರ್ಮಾಣಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ30 Jan 2026 6:12 PM IST
share
ಆಳಂದ | ಜೋತಿಬಾ ಫುಲೆ ಭವನ ನಿರ್ಮಾಣಕ್ಕೆ ಒತ್ತಾಯ

ಆಳಂದ: ಹೆಚ್ಚಿನ ಸಂಖ್ಯೆಯಲ್ಲಿರುವ ಮಾಳಿಮಾಲಗಾರ ಸಮುದಾಯ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ಫುಲೆ ಭವನ ಸೇರಿದಂತೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ ಸ್ಥಳೀಯ ಬೇಡಿಕೆ ಈಡೇರಿಸಬೇಕು ಎಂದು ತಾಲೂಕು ಮಾಳಿ ಮಾಲಗಾರ ಶ್ರೇಯೋಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಗಣೇಶ ಪಾಟೀಲ ಅವರು ಒತ್ತಾಯಿಸಿದರು.

ಪಟ್ಟಣದ ಲಿಂಗಾಯತ್ ಭವನದಲ್ಲಿ ತಾಲೂಕು ಮಾಳಿ ಮಾಲಗಾರ ಶ್ರೇಯೋಭಿವೃದ್ಧಿ ಸಂಘಕ್ಕೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರ ಮಟ್ಟದಲ್ಲಿನ ನ್ಯಾಯಯುತ ಬೇಡಿಕೆ ಹಾಗೂ ಹಕ್ಕಿಗಾಗಿ ಸಮಾಜ ಬಾಂಧವರು ಒಗ್ಗೂಡುವ ಕಾಲವಿದು, ತಾಲೂಕು ಕೇಂದ್ರದಲ್ಲಿ ಸಮಾಜದ ವತಿಯಿಂದ ಒಂದು ನಿವೇಶನ ಪಡೆದು ಫುಲೆ ಭವನ ನಿರ್ಮಿಸಲು ಸರ್ಕಾರಕ್ಕೆ ನಿವೇಶನ ಹಾಗೂ ಅನುದಾನ ನೀಡುವಂತೆ ಸಮಾಜದ ಬಹುದಿನಗಳ ಬೇಡಿಕೆಯಾಗಿದೆ. ಇದಕ್ಕಾಗಿ ಒಗ್ಗೂಡಿ ಕೆಲಸ ಮಾಡಲು ಸರ್ವರು ಕೈಜೋಡಿಸಬೇಕು ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸುಭಾಷ ಬಳೂರ್ಗಿ ಮಾತನಾಡಿದರು.

ಅಧ್ಯಕ್ಷರಾಗಿ ಗಣೇಶ್ ಪಾಟೀಲ್ ಹಡಲಗಿ, ಉಪಾಧ್ಯಕ್ಷರಾಗಿ ಸಿದ್ಧರಾಮ ತೋಳನೂರ ಮಾದನಹಿಪ್ಪರಗಾ, ಗುರುನಾಥ ಜಂದೆ ಯಳಸಂಗಿ, ಪ್ರಧಾನ ಕಾರ್ಯದರ್ಶಿಯಾಗಿ ಸುಭಾಷ ಬಳೂರ್ಗಿ ಆಳಂದ, ಸಹ ಕಾರ್ಯದರ್ಶಿಯಾಗಿ ವೀರೇಶ್ ಪಾಟೀಲ್, ಖಜಾಂಚಿಯಾಗಿ ಚಂದ್ರಕಾoತ ಭೀಕಮಾಳೆ ಸರಸಂಬಾ, ಸದಸ್ಯರನ್ನಾಗಿ ಗುರುನಾಥ ಧುಳೆ, ಅಶೋಕ ಇಟಾಮಳೆ, ಮಲ್ಲಿಕಾರ್ಜುನ ಎ. ವಣದೇ, ವಿಶ್ವನಾಥ ಧುಳೆ ಕಿಣ್ಣಿ ಸುಲ್ತಾನ್, ಶರಣಪ್ಪ ಶೇರಿಕಾರ ಹಿರೋಳಿ, ಬಸವರಾಜ ಮೆತ್ರಿ ನಾಗಾಲೆಗಾಂವ, ಸಿದ್ಧರಾಜ ಆಲೂರೆ ಮಾದನಹಿಪ್ಪರಗಾ, ಸಂತೋಷ ಸವಳೆ ಯಳಸಂಗಿ, ಸಿದ್ಧರಾಮ ಆಳಂದ ಮಾಡ್ಯಾಳ, ಶ್ರೀಕಾಂತ ಶ್ರೀಗಣಿ ಮಾಡ್ಯಾಳ, ಲಕ್ಷ್ಮಿಕಾಂತ ಹೇಬಳಿ ಲಾಡಚಿಂಚೋಳಿ, ಸಿದ್ಧರಾಮ ಮುನ್ನೊಳ್ಳಿ ಪಡಸಾವಳಿ, ಶ್ರೀಶೈಲ ಮಾಡ್ಯಾಳೆ ಸರಸಂಬಾ, ಅವರುಗಳನ್ನು ಆಯ್ಕೆ ಮಾಡಲಾಯಿತು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X