Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಕನ್ನಡದ ಬಗ್ಗೆ ಉದಾಸೀನತೆ ಬೇಡ,...

ಆಳಂದ | ಕನ್ನಡದ ಬಗ್ಗೆ ಉದಾಸೀನತೆ ಬೇಡ, ಅಭಿಮಾನ ಇರಲಿ : ಧರ್ಮಣ್ಣ ಧನ್ನಿ

ವಾರ್ತಾಭಾರತಿವಾರ್ತಾಭಾರತಿ1 Nov 2025 11:00 PM IST
share
ಆಳಂದ | ಕನ್ನಡದ ಬಗ್ಗೆ ಉದಾಸೀನತೆ ಬೇಡ, ಅಭಿಮಾನ ಇರಲಿ : ಧರ್ಮಣ್ಣ ಧನ್ನಿ

ಕಲಬುರಗಿ : ನಮ್ಮ ನಾಡು ನುಡಿಗಳ ಬಗ್ಗೆ ಉದಾಸೀನತೆ ತೋರದೆ ಪ್ರೀತಿ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್.ಧನ್ನಿ ಹೇಳಿದರು.

ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಮೌಂಟ್ ಕಾರ್ಮೆಲ್ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೆಲ ಜಲ, ಭಾಷೆ ಸಂಸ್ಕೃತಿಯನ್ನು ಗೌರವಿಸುವ ಮೂಲಕ ಅವುಗಳ ರಕ್ಷಣೆಗೆ ನಾವೆಲ್ಲ ಕನ್ನಡದ ಅಸ್ಮೀತೆ ಮೆರೆಯಬೇಕು. ಜೊತೆಗೆ ಅನ್ಯ ಭಾಷೆ ಪ್ರೀತಿಸಿ ನಮ್ಮ ಮಾತೃ ಭಾಷೆಯನ್ನು ಹೃದಯ ಭಾಷೆ ಮತ್ತು ಅನ್ನದ ಭಾಷೆಯನ್ನಾಗಿ ಕಾಣಬೇಕಾಗಿದೆ. ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸಲು ಪಾಲಕರು ಮುಂದಾಗಬೇಕು. ಮಕ್ಕಳಲ್ಲಿ ಉತ್ತಮ ಹವ್ಯಾಸ ಮೂಡಿಸಬೇಕು ಎಂದರು.

ಮುಖ್ಯ ಅತಿಥಿ ಸಮನ್ವಿತಾ ಜಿ.ಮಠ ಮಾತನಾಡಿ, ಮಕ್ಕಳಲ್ಲಿ ಕನ್ನಡ ಭಾಷೆ ಪ್ರತಿದಿನ ಬಳಸುವುದರಿಂದ ಸೊಗಡು ಇನ್ನಷ್ಟು ಹೆಚ್ಚುತ್ತದೆ. ಇಂದು ನಗರ ಪ್ರದೇಶಗಳಲ್ಲಿ ಕನ್ನಡ ಸೊರುಗುತ್ತಿದ್ದು, ಕನ್ನಡ ಕಟ್ಟಿ ಬೆಳೆಸುವ ಕಾರ್ಯ ಎಲ್ಲರು ಸೇರಿ ಮಾಡಬೇಕಾಗಿದೆ. ಮಕ್ಕಳಲ್ಲಿ ಮಾತೃ ಹೃದಯ ಇಂದು ಕಾಣಬೇಕಾಗಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ದೀಪಕ ಥಾಮಸ್ ಅವರು ಅಧ್ಯಕ್ಷತೆ ವಹಿಸಿ, ಸಂಸ್ಥೆಯಡಿ ಓದುತ್ತಿರುವ ಸಾವಿರಾರು ಮಕ್ಕಳಿಗೆ ಕನ್ನಡ ಪ್ರೀತಿ ಮತ್ತು ಅಭಿಮಾನ ಮೂಡಿಸುವ ಅನೇಕ ಕಾರ್ಯಗಳನ್ನು ಮಾಡಲಾಗುತ್ತಿದೆ. ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳನ್ನು ಕೂಡ ಹಮ್ಮಿಕೊಂಡು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕನ್ನಡವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಅದರ ಹಿರಿಮೆಯನ್ನು ಮಕ್ಕಳಿಗೆ ತಿಳಿಸಿ ಹೇಳಬೇಕಾಗದೆ ಎಂದರು.

ಪ್ರೀನ್ಸಿಪಾಲ್‌ ಸಂದೀಪ್‌ ಹಾಗು ಫಾದರ್ ಪ್ಲೇಮಿಂಗ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ನಂತರ ರಾಜ್ಯೋತ್ಸವ ಕುರಿತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X