Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | 47.50 ಕೋಟಿ ರೂ. ವೆಚ್ಚದ ಸಣ್ಣ...

ಆಳಂದ | 47.50 ಕೋಟಿ ರೂ. ವೆಚ್ಚದ ಸಣ್ಣ ನೀರಾವರಿ ಕಾಮಗಾರಿಗಳಿಗೆ ಸಚಿವ ಭೋಸರಾಜು ಅಡಿಗಲ್ಲು

ವಾರ್ತಾಭಾರತಿವಾರ್ತಾಭಾರತಿ7 March 2026 10:20 PM IST
share
ಆಳಂದ | 47.50 ಕೋಟಿ ರೂ. ವೆಚ್ಚದ ಸಣ್ಣ ನೀರಾವರಿ ಕಾಮಗಾರಿಗಳಿಗೆ ಸಚಿವ ಭೋಸರಾಜು ಅಡಿಗಲ್ಲು

ಆಳಂದ: ತಾಲೂಕಿನ ರೈತರ ಕೃಷಿಗೆ ನೀರಿನ ಸಿಂಚನ ಒದಗಿಸುವ ಮಹತ್ವದ ಹೆಜ್ಜೆಯಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ 2025–26ನೇ ಸಾಲಿನ 4702 ಎಪಿಬಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಐದು ಪ್ರಮುಖ ಕಾಮಗಾರಿಗಳಿಗೆ ಒಟ್ಟು 47.50 ಕೋಟಿ ರೂ. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಸಣ್ಣ ನೀರಾವರಿ ಇಲಾಖೆಯ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಯೋಜನೆಗೂ ಸುಮಾರು 9.50 ಕೋಟಿ ರೂ. ವೆಚ್ಚ ನಿಗದಿಪಡಿಸಲಾಗಿದ್ದು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳು ಜಾರಿಗೊಳ್ಳಲಿವೆ ಎಂದರು.

ಈ ಯೋಜನೆಗಳ ಅನುಷ್ಠಾನದಿಂದ ಸುಮಾರು 2,000 ಹೆಕ್ಟೇರ್ ಕೃಷಿಭೂಮಿ ನೀರಾವರಿ ಸೌಲಭ್ಯಕ್ಕೆ ಒಳಪಡುವುದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಮಹತ್ತರ ಉತ್ತೇಜನ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಯೋಜನೆಯಡಿ ಅಣೆಕಟ್ಟು ನಿರ್ಮಾಣ, ನಾಲೆಗಳ ಅಗೆತ ಹಾಗೂ ನೀರಿನ ಹರಿವು ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಖಂಡಾಳ ಗ್ರಾಮದಿಂದ ಮಟಕಿ ನಾಲೆಯವರೆಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣ, ಬಿಸಿಐಗಳ ನಿರ್ಮಾಣ ಮತ್ತು ನಾಲೆ ಅಗೆತ ಕಾಮಗಾರಿ ನಡೆಯಲಿದೆ. ಇದರಿಂದ ಮಧ್ಯಭಾಗದ ರೈತರಿಗೆ ತಕ್ಷಣದ ಪ್ರಯೋಜನ ದೊರೆಯಲಿದೆ ಎಂದು ಹೇಳಿದರು.

ಇದೇ ವೇಳೆ ನಿರಗುಡಿ–ಪಡಸಾವಳಿ ನಾಲೆಯವರೆಗೆ ಐಸಿಐಗಳ ನಿರ್ಮಾಣದೊಂದಿಗೆ ನೀರಿನ ಹರಿವು ಸುಧಾರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬಸವಂತವಾಡಿ ಗ್ರಾಮದಿಂದ ನಿಂಬರ್ಗಾ ನಾಲೆಯವರೆಗೆ ಅಣೆಕಟ್ಟು ನಿರ್ಮಾಣದ ಮೂಲಕ ದಕ್ಷಿಣ ಭಾಗದ ರೈತರ ಭೂಮಿಗಳಿಗೆ ನೀರಿನ ಲಭ್ಯತೆ ಹೆಚ್ಚಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ರೈತರಿಗೆ ನೀರಾವರಿ ದೊರೆತರೆ ಅದಕ್ಕಿಂತ ದೊಡ್ಡ ನೆರವು ಇನ್ನಿಲ್ಲ ಎಂದು ಹೇಳಿದರು.

ಜಿಡಗಾ ಶ್ರೀಮಠದ ಕೆರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ 25 ಕೋಟಿ ರೂ. ಅನುದಾನ ಘೋಷಿಸಿರುವುದನ್ನು ಉಲ್ಲೇಖಿಸಿದ ಅವರು, ಅಂತರ್ಜಲ ಮಟ್ಟ ಹೆಚ್ಚಿಸಲು ಇನ್ನೂ 100 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಪಟ್ಟಣದಲ್ಲಿ ರೈತರ ಬೆಳೆ ಸಂರಕ್ಷಣೆಗೆ ಶೀತಗೃಹ (ಕೋಲ್ಡ್ ಸ್ಟೋರೇಜ್) ನಿರ್ಮಿಸಬೇಕು. ಜೊತೆಗೆ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿ ಹಾಗೂ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮಾದನಹಿಪ್ಪರಗಾ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ 20 ಮಹಿಳೆಯರಿಗೆ ಹೊಲಿಗೆ ಯಂತ್ರಗಳು ಹಾಗೂ 30 ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಸಚಿವರು ಹಾಗೂ ಶಾಸಕರು ವಿತರಿಸಿದರು.

ಇಲಾಖೆ ರಾಜ್ಯ ಕಾರ್ಯದರ್ಶಿ ಬಿ.ಕೆ. ಪವಿತ್ರಾ, ಮುಖ್ಯ ಇಂಜಿನಿಯರ್ ಹೆಚ್ ಎಲ್. ವೆಂಕಟೇಶ, ಅಧೀಕ್ಷಕ ಸುಭಾಷ ಎಲ್. ಶಿಕ್ಷಣಕರ್, ಅಭಿಯಂತರ ನಾಗನಗೌಡ ವಾಯ್. ಭಾವಿ ಮತ್ತು ಸಹಾಯಕ ಅಭಿಯಂತರ ಶಾಂತಪ್ಪ ಎಸ್. ಜಾಧವ, ಗುತ್ತಿಗೆದಾರ ಎನ್.ವಿ.ಕುಲಕರ್ಣಿ ಆಗಮಿಸಿದ್ದರು.

ವೇದಿಕೆಯಲ್ಲಿ ಪಂಚಗ್ಯಾರೆoಟಿ ಸಮಿತಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ, ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ತಾಪಂ ಮಾಜಿ ಅಧ್ಯಕ್ಷ ಬಸವರಾಜ ಪವಾಡಶೆಟ್ಟಿ, ಮೋಹನಗೌಡ ಪಾಟೀಲ, ಹಾಪ್‌ಕಾಮ್ ಅಧ್ಯಕ್ಷ ಗುರುಶಾಂತ ಪಾಟೀಲ ನಿಂಬಾಳ, ಕೃಷಿಕ ಸಮಾಜ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ತುಕಾರಾಮ ವಗ್ಗೆ, ಶಂಕರರಾವ್ ದೇಶಮುಖ, ಶರಣು ಭೂಸನೂರ, ಮಲ್ಲಪ್ಪ ಹತ್ತರಕಿ, ರಾಜಶೇಖರ ಪಾಟೀಲ ಚಿತಲಿ, ದಯಾನಂದ ಶೇರಿಕಾರ, ಪಾಶಾ ಗುತ್ತೇದಾರ, ಸುಭಾಷ ಫೌಜಿ, ಇಒ ಮಾನಪ್ಪ ಕಟ್ಟಿಮನಿ, ಡಿವೈಎಸ್‌ಪಿ ತಮರಾಮ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ ಸ್ವಾಗತಿಸಿದರು. ರಾಜಶೇಖರ ಪಾಟೀಲ ನಿರೂಪಿಸಿದರು.

Tags

Alanda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X