ಜೇವರ್ಗಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಜೇವರ್ಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಭವ್ಯವಾಗಿ ಆಚರಿಸಲಾಯಿತು.
ಪಟ್ಟಣದ ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ದೆಕ್ಕನ್ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ ಡಾ. ಅನೀಲ್ ಕುಮಾರ ಟೆಂಗಳಿ, ಅಂಬೇಡ್ಕರ್ ಅವರು ಸಮಾನತೆ ಮತ್ತು ಹಕ್ಕುಗಳ ಸಂಕೇತವಾಗಿದ್ದು, ವಿಶ್ವದಾದ್ಯಂತ ಅತ್ಯಂತ ಹೆಚ್ಚು ಗೌರವಿಸಲ್ಪಡುವ ನಾಯಕರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಇನ್ನು ಮುಂದೆ ಅಂಬೇಡ್ಕರ್ ಅವರನ್ನು ಕೇವಲ ಮೆರವಣಿಗೆ, ಪ್ಲೆಕ್ಸ್, ಡಿಜೆ ಮತ್ತು ಘೋಷಣೆಗಳಲ್ಲಿ ಮಾತ್ರ ಸೀಮಿತಗೊಳಿಸದೆ, ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ಶಂಭುಲಿಂಗ ದೇಸಾಯಿ, ರವಿಚಂದ್ರ ರೆಡ್ಡಿ, ಸತೀಶಕುಮಾರ್ ಸಂಗಾನ್, ರಾಜೇಸಾಹೇಬ್ ನದಾಫ್, ವೀರಣ್ಣ ಬೊಮ್ಮನಳ್ಳಿ, ಶೌಕತ್ ಅಲಿ ಆಲೂರ, ಪ್ರತಾಪ್ ಕಟ್ಟಿ, ಭಗವಂತರಾಯಗೌಡ ಪಾಟೀಲ್ ಅಂಕಲಗಾ, ಪುಂಡಲಿಕ ಗಾಯಕವಾಡ್, ದಾನಪ್ಪಗೌಡ ಹಳಿಮನಿ, ಮಕಬುಲ್ ಪಟೇಲ್ ಕಾಚೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮುಖಂಡರಾದ ಚಂದ್ರಶೆಖರ ಹರನಾಳ, ಮರೆಪ್ಪ ಬಡಿಗೇರ, ಶಾಂತಪ್ಪ ಕೂಡಲಗಿ, ಕಮಲಬಾಯಿ ಮರೆಪ್ಪ ಬಡಿಗೇರ, ಭೀಮರಾಯ ನಗನೂರ, ಸುಭಾಷ ಚನ್ನೂರ, ಮಲ್ಲಣ್ಣ ಕೊಡಚಿ, ಶಾಂತಪ್ಪ ಯಲಗೋಡ, ಹರಿಚಂದ್ರ ಕೊಡಚಿ, ಮಲ್ಲಮ್ಮ ಕೊಬ್ಬಿನ್, ದವಲಪ್ಪ ಮದನ್, ಶಿವಶರಣ ಮಾರಡಗಿ, ಪ್ರಭಾಕರ ಸಾಗರ, ಬೆಣ್ಣೆಪ್ಪ ಕೊಂಬಿನ್, ರಾಜಶೇಖರ ಶಿಲ್ಪಿ, ರವಿ ಕುಳಗೇರಿ, ಶ್ರೀಹರಿ ಕರಕಳ್ಳಿ, ಸಿದ್ದು ಕೆರೂರ, ಸಿದ್ರಾಮ ಕಟ್ಟಿ, ಶ್ರೀಮಂತ ಕಿಲ್ಲೆದಾರ, ಸಂತೋಷ ಚನ್ನೂರ, ಪ್ರಕಾಶ ಕುಡಲಗಿ, ವಿಶ್ವ ಆಲೂರ, ದೇವಿಂದ್ರ ಬಡಿಗೇರ, ಪ್ರಕಾಶ ಮಾರಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






