Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಎರಡನೇ ದಿನಕ್ಕೆ ಕಾಲಿಟ್ಟ ಆಶಾ...

ಕಲಬುರಗಿ| ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ

ವಾರ್ತಾಭಾರತಿವಾರ್ತಾಭಾರತಿ13 Aug 2025 7:26 PM IST
share
ಕಲಬುರಗಿ| ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ

ಕಲಬುರಗಿ: ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಆಶಾ ಕಾರ್ಯಕರ್ತೆಯರ 3 ದಿನಗಳ ಧರಣಿಯು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ರಸ್ತೆಯ ಮೇಲೆ ಧರಣಿ ಕುಳಿತಿದ್ದಾರೆ.

ಈ ಸಂದರ್ಭ ಮಾತನಾಡಿದ ಎ.ಐ.ಎಂ.ಎಸ್.ಎಸ್ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಗುಂಡಮ್ಮಾ ಮಡಿವಾಳ, ಮುಖ್ಯಮಂತ್ರಿಗಳು ಆಶಾ ಕಾರ್ಯಕರ್ತೆಯರಿಗೆ ಮಾತು ಕೊಟ್ಟಂತೆ ಅವರ ವೇತನವನ್ನು 10,000/- ನಿಗದಿಗೊಳಿಸಬೇಕೆಂದು ಆಗ್ರಹಿಸಿದರು.

ಎ.ಐ.ಕೆ.ಕೆ.ಎಮ್.ಎಸ್. ಜಿಲ್ಲಾ ಅಧ್ಯಕ್ಷರಾದ ಗಣಪತ್ ರಾವ ಕೆ. ಮಾನೆ ಮಾತನಾಡಿ, ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳಿಂದಾಗಿ ಇಂದು ನಾವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಸರಕಾರವು ಕೋಟ್ಯಾಧಿಶರ ಕೋಟ್ಯಾಂತರ ರೂಪಾಯಿ ತೆರಿಗೆಯನ್ನು ಮನ್ನಾ ಮಾಡುತ್ತದೆ, ಆದರೆ ಕಾರ್ಮಿಕರ ವೇತನವನ್ನು ಹೆಚ್ಚಿಸುವುದಿಲ್ಲ. ಬಂಡವಾಳಶಾಹಿಗಳು ಅತ್ಯಧಿಕ ಲಾಭಗಳಿಸಲು ಸರಕಾರ ಅನುಕೂಲ ಮಾಡಿಕೊಡುತ್ತದೆ. ರೈತರಿಗೆ ಸಹಾಯ ಮಾಡುವುದಿಲ್ಲ. ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ ಕುಳಿತರೂ ಸರಕಾರಕ್ಕೆ ನಾಚಿಕೆ ಇಲ್ಲ. ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.

ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಎಂ. ಶರ್ಮಾ ಮಾತನಾಡಿ, ಕಾರ್ಮಿಕರ ಸಮಸ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಅವರ ಜೀವನ ಬಹಳ ದುರ್ಲಭವಾಗುತ್ತಿದೆ. ಸರಕಾರಗಳು ಕಾರ್ಮಿಕರ ಗೋಳು ಕೇಳುತ್ತಿಲ್ಲ. ಕಾರ್ಮಿಕರಿಗೆ ಹೋರಾಟ ಮಾಡದೇ ಬೇರೆ ದಾರಿ ಇಲ್ಲ. ಆಶಾ ಕಾರ್ಯಕರ್ತೆಯರ 3 ದಿನಗಳ ಅಹೋರಾತ್ರಿ ಧರಣಿ ಬಹಳ ದಿಟ್ಟತನದ ನಿರ್ಧಾರ, ಹೋರಾಟ ನಿರತ ಆಶಾ ಕಾರ್ಯಕರ್ತೆಯರಿಗೆ ಕ್ರಾಂತಿಕಾರಿ ಅಭಿನಂದನೆ ತಿಳಿಸಿದರು.

ಎರಡನೇ ದಿನದ ಧರಣಿಯಲ್ಲಿ ಸಂಗೀತಾ ಸಾವಳಗಿ, ಜಯಶ್ರೀ, ವಿಜಯಲಕ್ಷ್ಮೀ ತಾಯಮ್ಮ, ಶಾರದಾ ಈಜೇರಿ, ಲಕ್ಷ್ಮೀ ಮಂದೇವಾಲ, ಯಾಸಮೀನ ಅಂಕಲಗಾ, ಸುಗಂಧಾ ಅನ್ನೋಳ್ಳಿ, ಪ್ರಭಾ ತಹಾಬಾದ, ಮಂಜುಳಾ ವಾಡಿ, ಸಾವಿತ್ರಿ ಇಂಗಳಗಿ, ರೇಣುಕಾ, ನಾಗವೇಣಿ ಚಿಂಚೋಳಿ, ಯಶೋಧಾ, ಲಕ್ಷ್ಮೀ ಸುಲೆಪೇಟ, ಲಕ್ಷ್ಮೀ ಚಿಮ್ಮನಚೂಡ, ಸಾಬಮ್ಮ, ವಿಜಯಲಕ್ಷ್ಮೀ, ಲಕ್ಷ್ಮೀ ಮಲಖೇಡ, ಲಕ್ಷ್ಮೀ ಕುರಕುಂಟಾ, ಸವಿತಾ ಅಫಜಲಪುರ, ಭಾರತಿ, ಗೌರಮ್ಮ, ಲಕ್ಷ್ಮೀ ಗೊಬ್ಬುರ, ಮಮತಾಜ, ಸೇರಿದಂತೆ, ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಹಳ್ಳಿಗಳಿಂದ ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಅಲ್ಲದೆ, ಎರಡನೇ ದಿನದ ಧರಣಿಗೆ ರೈತ ಸಂಘಟನೆ ಮುಖಂಡರಾದ ಶರಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ ಸೇರಿದಂತೆ ಹಲವು ಮುಖಂಡರು ಬೆಂಬಲ ವ್ಯಕ್ತಪಡಿಸಿದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X