ಕಾಳಗಿ | ಹಲಚೇರಾ ಗ್ರಾಮದಲ್ಲಿ ಮೇ 17ರಂದು ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಕಾಳಗಿ : ತಾಲೂಕು ಹಲಚೇರಾ ಗ್ರಾಮದಲ್ಲಿ ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ರಾಮಸ್ಥರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾಳಗಿ-ಚಿಂಚೋಳಿ ಅಧ್ಯಕ್ಷ ಶರಣು ಪಾಟೀಲ ಮೋತಕಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಕ್ಕೆ ಭರತನೂರಿನ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಹಾಗೂ ಹೊಸಳ್ಳಿಯ ಸಿದ್ಧಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ.
ಬೀದರ್ ಸಂಸದ ಸಾಗರ ಖಂಡ್ರೆ ಷಟಸ್ಥಲ ಧ್ವಜಾರೋಹಣ ನೆರವೇರಿಸಿ ಮೂರ್ತಿ ಅನಾವರಣ ಮಾಡಲಿದ್ದು, ಶಾಸಕ ಡಾ. ಅವಿನಾಶ ಜಾಧವ ಭಾಗವಹಿಸಲಿದ್ದಾರೆ.
ಬೆಂಗಳೂರು ಜವಾಹರ ಬಾಲ ಭವನದ ಉಪಾಧ್ಯಕ್ಷ ಅನೀಲ ಜಮಾದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ರಾಠೋಡ, ಭೀಮರಾವ ಟಿ.ಟಿ., ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ಆರ್.ಜಿ. ಶಟಗಾರ, ಗೌತಮ ಪಾಟೀಲ, ಜಗನ್ನಾಥ ಈದಲಾಯಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಇದೇ ವೇಳೆ ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಮಲಿ, ವಿಜಯಕುಮಾರ ಚೆಂಗಟಾ, ಮಲ್ಲಿಕಾರ್ಜುನ ಕೊಲಕುಂದಿ, ಮಲ್ಲಿಕಾರ್ಜುನ ಪಾಲಾಮೂರ, ನಂದಕುಮಾರ ಪಾಟೀಲ, ಶಿವಕುಮಾರ ಸಜ್ಜನ್, ಜಗನ್ನಾಥ ಶೇರಿಕಾರ, ರೇವಣಸಿದ್ದ ಬಡಾ ಸಾವುಕಾರ, ಮಲ್ಲಿಕಾರ್ಜುನ ಪಾಟೀಲ ಕಾಳಗಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲೆಯ ಬಸವೇಶ್ವರ ಅಭಿಮಾನಿಗಳು ಹಾಗೂ ಸಮಸ್ತ ವೀರಶೈವ ಲಿಂಗಾಯತ ಧರ್ಮದ ಶರಣರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.






