Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಲಿಂಗಾಯತ ಧರ್ಮದ ತತ್ವ, ಪರಂಪರೆ,...

ಲಿಂಗಾಯತ ಧರ್ಮದ ತತ್ವ, ಪರಂಪರೆ, ಅಸ್ತಿತ್ವದ ಕುರಿತು ಅರಿವಿರಲಿ: ಗುರುಮಹಾಂತ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ11 Jan 2026 10:34 PM IST
share
ಲಿಂಗಾಯತ ಧರ್ಮದ ತತ್ವ, ಪರಂಪರೆ, ಅಸ್ತಿತ್ವದ ಕುರಿತು ಅರಿವಿರಲಿ: ಗುರುಮಹಾಂತ ಸ್ವಾಮೀಜಿ

ಆಳಂದ: ಇಂದಿನ ಕಾಲಘಟ್ಟದಲ್ಲಿ ಬಸವಣ್ಣನವರ ಅಭಿಮಾನಿಗಳು ಹಾಗೂ ಪ್ರಗತಿಪರ ಚಿಂತಕರು ಲಿಂಗಾಯತ ಧರ್ಮದ ತತ್ವಗಳು, ಅದರ ಪರಂಪರೆ ಮತ್ತು ಅಸ್ತಿತ್ವದ ಕುರಿತು ಗಂಭೀರವಾಗಿ ತಿಳಿವಳಿಕೆ ಪಡೆದುಕೊಳ್ಳಬೇಕಾದ ಸಮಯ ಬಂದಿದೆ ಎಂದು ಇಲಕಲ್‌ನ ಶ್ರೀವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಶ್ರೀ ಗುರುಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ತೋಂಟದಾರ್ಯ ಅನುಭವ ಮಂಟಪದಲ್ಲಿ ರವಿವಾರ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ನಡೆದ ಅಖಿಲ ಕರ್ನಾಟಕ ಶರಣ ಸಾಹಿತ್ಯ 2ನೇ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಮಾತನಾಡಿದ ಶ್ರೀ ಗುರುಮಹಾಂತ ಸ್ವಾಮೀಜಿ, ಅರಿವಿಲ್ಲದೆ ಹೋದರೆ ನಮ್ಮ ಅಸ್ತಿತ್ವವೇ ಮೌನವಾಗಿ ಸಮಾಧಿಯಾಗುವ ಅಪಾಯವಿದೆ. ಪ್ರಜ್ಞೆ ಮತ್ತು ಜಾಗೃತಿ ತಂದುಕೊಳ್ಳುವುದು ಇಂದಿನ ಅತ್ಯಾವಶ್ಯಕತೆ ಇದೆ ಎಂದರು.

ಲಿಂಗಾಯತರು ಹಿಂದೂ ಧರ್ಮದ ವಿರೋಧಿಗಳಲ್ಲ. ಆದರೆ ನಮ್ಮ ಧರ್ಮದ ರಕ್ಷಣೆಯನ್ನು ನಾವು ಸ್ವತಃ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಹಿಂದೂ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಷ್ಯ ಮತ್ತು ಶೂದ್ರ ಎಂಬ ನಾಲ್ಕು ವರ್ಣಗಳಿದ್ದು, ಅಂಗದ ಮೇಲೆ ಲಿಂಗ ಕಟ್ಟಿಕೊಂಡ ಲಿಂಗಾಯತರು ಯಾವ ವರ್ಣಕ್ಕೆ ಸೇರುತ್ತಾರೆ ಎಂಬ ಪ್ರಶ್ನೆಯನ್ನು ಸಮಾಜವೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ವರ್ಣವ್ಯವಸ್ಥೆಯಲ್ಲಿ ಶೂದ್ರರಿಗೆ ಶಿಕ್ಷಣ, ಆಸ್ತಿ, ಆರ್ಥಿಕ–ಸಾಮಾಜಿಕ ಸ್ವಾತಂತ್ರ‍್ಯ ಇಲ್ಲದ ಸ್ಥಿತಿ ಇತ್ತು. ಮಹಿಳೆಯರನ್ನೂ ಸಹ ಸಂಪೂರ್ಣ ಹಕ್ಕುಗಳಿಲ್ಲದವರಂತೆ ನೋಡಲಾಗುತ್ತಿತ್ತು. ಇಂತಹ ಅನ್ಯಾಯಕರ ವ್ಯವಸ್ಥೆಯನ್ನು 12ನೇ ಶತಮಾನದಲ್ಲೇ ಬಸವಣ್ಣನವರು ತೊಡೆದು ಹಾಕಿದರು. ನಂತರ ಸ್ವಾತಂತ್ರ‍್ಯ ಭಾರತದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ವರ್ಗದ ಮಹಿಳೆ–ಪುರುಷರಿಗೆ ಸಮಾನ ಹಕ್ಕು, ಆಸ್ತಿ, ನ್ಯಾಯ ಮತ್ತು ಧಾರ್ಮಿಕ ಸ್ವಾತಂತ್ರ‍್ಯವನ್ನು ನೀಡಿದರು ಎಂದು ಸ್ವಾಮೀಜಿ ಹೇಳಿದರು.

ಪ್ರಥಮ ಸಮ್ಮೇಳನದ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಹಾಗೂ ಹಿರಿಯ ಸಾಹಿತಿ ರಂಜಾನ್ ದರ್ಗಾ ಮಾತನಾಡಿ, ಲಿಂಗಾಯತ ಸಮಾಜದಲ್ಲಿ ಮಾತ್ರ ನಿಜವಾದ ಬದಲಾವಣೆ ಸಾಧ್ಯವಿದೆ. ಆದರೆ ಆ ಬದಲಾವಣೆಗೆ ಸ್ವವಿಮರ್ಶೆ ಅನಿವಾರ್ಯ. ಸ್ವವಿಮರ್ಶೆ ಇಲ್ಲದೆ ಭವಿಷ್ಯವಿಲ್ಲ ಎಂದು ಹೇಳಿದರು.

ಇಲ್ಲಕಲದ ಶ್ರೀಗಳು ಹಾಗೂ ಅನುಭವ ಮಂಟಪದ ಕೋರಣೇಶ್ವರ ಮಹಾಸ್ವಾಮಿಗಳು ಸಮಾಜ ಬದಲಾವಣೆಗೆ ಮಹಾನ್ ಶಕ್ತಿಯಾಗಿದ್ದಾರೆ. ಈ ಶಕ್ತಿಯನ್ನು ಸಮಗ್ರ ನಾಡಿನ ಪರಿವರ್ತನೆಗೆ ಬಳಸಬಹುದು. ಆದರೆ ಲಿಂಗಾಯತರು ಸ್ವವಿಮರ್ಶೆಯಿಂದ ಬಹುದೂರ ಉಳಿದಿದ್ದಾರೆ. ವಿಮರ್ಶೆ ಮಾಡಿಕೊಳ್ಳದೇ ಹೋದರೆ ಸಮಾಜದ ಭವಿಷ್ಯವೇ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

ವಚನ ಚಿಂತನಾ ಗೋಷ್ಠಿಗೆ ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮ್ಮೇಳನಕ್ಕೆ ಅನುಭವ ಮಂಟಪದ ಶ್ರೀ ಕೋರಣೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಸಾಹಿತಿ ಡಾ. ಮೀನಾಕ್ಷಿ ಬಾಳಿ ಉಪನ್ಯಾಸ ನೀಡಿದರು. ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೆಶ ಎಸ್. ಉಪ್ಪಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಡಾ. ವಿಶ್ವರಾಧ್ಯ ಸಂತ್ಯoಪೇಟೆ ಮಾತನಾಡಿದರು. ಸಮಾರೋಪ ನುಡಿಯನ್ನು ವಿಜಯಪುರದ ಶರಣ ಸಂಸ್ಕೃತಿ ಚಿಂತಕ ಡಾ. ಜಿ. ಎಸ್. ಪಾಟೀಲ್ ಮಂಡಿಸಿದರು.

ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೆಶ ಎಸ್. ಉಪ್ಪಾರ್ ಉಪಸ್ಥಿತರಿದ್ದರು.

ಈ ಸಂದರ್ಭ ಶರಣ ಸಂಕುಲ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಾಗತಿಕ ಲಿಂಗಾಯತ್ ಮಹಾಸಭಾ ಜಿಲ್ಲಾ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ತಾಲೂಕು ಅಧ್ಯಕ್ಷ ರಮೇಶ ಲೋಹಾರ, ಮುಖಂಡ ಬಾಬುರಾವ್ ಮಡ್ಡೆ, ಮಲ್ಲಿನಾಥ ಯಲಶೆಟ್ಟಿ, ಬಾಬುರಾವ್ ಮಡ್ಡೆ, ರಾಜಶೇಖರ ಯಂಕoಚಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Guru Mahant Swamiji
share
ವಾರ್ತಾಭಾರತಿ
ವಾರ್ತಾಭಾರತಿ
Next Story
X