Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಭೀಮಾ ಕೋರೆಗಾಂವ್‌ ಕಥೆಗಳನ್ನು ಕೇಳುತ್ತಲೇ...

ಭೀಮಾ ಕೋರೆಗಾಂವ್‌ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ : ಡಾ.ಅರುಣ ಜೋಳದಕೂಡ್ಲಗಿ

ವಾರ್ತಾಭಾರತಿವಾರ್ತಾಭಾರತಿ2 Jan 2026 8:28 PM IST
share
ಭೀಮಾ ಕೋರೆಗಾಂವ್‌ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ : ಡಾ.ಅರುಣ ಜೋಳದಕೂಡ್ಲಗಿ

ವಾಡಿ : ಭೀಮಾ ಕೋರೆಗಾಂವ್‌ ವಿಜಯೋತ್ಸವ ಆಚರಿಸುವುದೆಂದರೆ ಸ್ವಾಭಿಮಾನದ ಹೋರಾಟವನ್ನು ನೆನೆಸಿಕೊಳ್ಳುವ ದಿನವಾಗಿದ್ದು, ಆ ಹೋರಾಟದ ಕಥೆಗಳನ್ನು ಕೇಳುತ್ತಲೇ ಯುವ ಪೀಳಿಗೆಯೊಳಗೆ ಹೋರಾಟದ ಕಿಚ್ಚು ಹಚ್ಚುತ್ತದೆ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಉಪನ್ಯಾಸಕ ಹಾಗೂ ಯುವ ಬರಹಗಾರ ಡಾ.ಅರುಣ ಜೋಳದಕೂಡ್ಲಗಿ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ ಹಾಗೂ ಸ್ಥಳೀಯ ಬೌದ್ಧ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಭೀಮಾ ಕೋರೆಗಾಂವ್‌ 208ನೇ ವಿಜಯೋತ್ಸವ ಅಂಗವಾಗಿ ನಡೆದ ಶೌರ್ಯ ದಿನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಂದು ಪೇಶ್ವೆಗಳ ಆಡಳಿತದ ಮಾದರಿಯಲ್ಲೇ ಇಂದು ಬಿಜೆಪಿ ಆಡಳಿತ ನಡೆಯುತ್ತಿದೆ ಎಂಬ ವಿಚಾರದ ಕುರಿತು 2018ರಲ್ಲಿ ಭೀಮಾ ಕೋರೆಗಾಂವ್‌ ನಲ್ಲಿ ದೇಶದ ಹಲವು ವಿದ್ವಾಂಸರು ನಡೆಸಿದ ಮಹತ್ವದ ಚರ್ಚೆಯಿಂದ ಕೇಂದ್ರ ಬಿಜೆಪಿ ಸರ್ಕಾರ ಭಯಗೊಂಡು ಅನೇಕ ವಿದ್ವಾಂಸರು ಹಾಗೂ ಹೋರಾಟಗಾರರನ್ನು ವರ್ಷಗಟ್ಟಲೆ ಜೈಲಿನಲ್ಲಿ ಬಂಧಿಸಿದೆ. ಇಂದಿಗೂ ಹಲವರು ಜೈಲಿನಲ್ಲೇ ಇದ್ದಾರೆ ಎಂದು ಆರೋಪಿಸಿದರು.

ಶಿವಾಜಿ ಕಾಲದಲ್ಲಿ ಸೈನ್ಯ ಮತ್ತು ಆಡಳಿತದ ವಿವಿಧ ವಿಭಾಗಗಳಲ್ಲಿ ಮೇಲ್ಜಾತಿಯ ಮರಾಠ ಹಾಗೂ ಬ್ರಾಹ್ಮಣರು ಷಡ್ಯಂತ್ರ ರೂಪಿಸುತ್ತಿದ್ದರು. ಇದನ್ನು ಅರಿತ ಶಿವಾಜಿ, ಅವರನ್ನು ತಡೆಗಟ್ಟಲು ಮಹಾರರನ್ನು ಸೈನ್ಯಕ್ಕೆ ಸೇರಿಸಿಕೊಂಡಿದ್ದರು. ಈ ಇತಿಹಾಸವನ್ನು ಅಧ್ಯಯನ ಮಾಡಿದ ಬ್ರಿಟಿಷರು 1750ರಲ್ಲಿ ಮೊದಲ ಬಾರಿಗೆ ಮಹಾರರನ್ನು ಸೈನ್ಯಕ್ಕೆ ಸೇರಿಸಿಕೊಂಡರು. 1818ರಲ್ಲಿ ನಡೆದ ಯುದ್ಧವು ಬ್ರಿಟಿಷ್ ಪರವಲ್ಲ, ನಾತನವಾದಿ ಪೇಶ್ವೆಗಳ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಹೋರಾಟ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಮರಿಯಪ್ಪ ಹಳ್ಳಿ ಮಾತನಾಡಿ, ಭೀಮಾ ಕೋರೆಗಾಂವ್‌ ವಿಜಯೋತ್ಸವವನ್ನು ಭಾವನಾತ್ಮಕವಾಗಿ ಆಚರಿಸದೆ, ಅದರ ಐತಿಹಾಸಿಕ ಸತ್ಯವನ್ನು ಅರಿತು ಸಂವಿಧಾನ ರಕ್ಷಣಾ ಪಡೆಗಳಾಗಿ ನಿಲ್ಲಬೇಕು ಎಂದರು.

ಆರೆಸ್ಸೆಸ್‌ ಸನಾತನಿಗಳ ಪ್ರಭಾವದಲ್ಲಿರುವ ಬಿಜೆಪಿ, ಅಸ್ಪೃಶ್ಯ ದಲಿತ ಸಮುದಾಯವನ್ನು ಗುರಿಯಾಗಿಸಿಕೊಂಡು ಸಂವಿಧಾನದಲ್ಲಿ ಅಪಾಯಕಾರಿ ಬದಲಾವಣೆ ತರಲು ಯತ್ನಿಸುತ್ತಿದೆ. ಇದನ್ನು ತಡೆಯಲು ಎಲ್ಲರೂ ಒಗ್ಗಟ್ಟಾಗುವುದು ಇಂದಿನ ಅಗತ್ಯ ಎಂದು ಎಚ್ಚರಿಸಿದರು.

ಉಪನ್ಯಾಸಕ ವಸಂತ ನಾಸಿ, ಸಾಮಾಜಿಕ ಕಾರ್ಯಕರ್ತ ಪ್ರಬುದ್ಧ ಲಕ್ಷ್ಮಿಕಾಂತ ಹುಬ್ಳಿ, ಸ್ಥಳೀಯ ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ಮಾತನಾಡಿದರು. ಕಲಬುರಗಿ ಸಿದ್ಧಾರ್ಥ ವಿಹಾರನ ಪೂಜ್ಯ ಭಂತೆ ಚನ್ನ, ಸಾನಿದ್ಯ ವಹಿಸಿದ್ದರು.

ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್‌ ಮೆಹಮೂದ್ ಚಿಸ್ತಿ, ಮರಿಯಪ್ಪ ಬುಕ್ಕುಲಕರ, ಶರಣಬಸು ಸಿರೂರಕರ, ರವಿ ಸಿಂಗೆ, ಶ್ರಾವಣಕುಮಾರ ಮೋಸಲಗಿ, ಸಾಯಬಣ್ಣ ಬನ್ನಟ್ಟಿ, ಮಲ್ಲೇಶಿ ಚುಕ್ಕೇರ, ನಾಗೇಂದ್ರ ಜೈಗಂಗ, ಭಾಗಪ್ಪ ಯಾದಗಿರಿ, ಶರಣು ನಾಟೇಕರ, ಚಂದ್ರಸೇನ ಮೇನಗಾರ, ಉದಯ ಯಾದಗಿರಿ, ಅನೀಲ ಸಿಬನೂರ, ಮಲ್ಲು ತಳವಾರ, ಮಲ್ಲಣ್ಣ ಮಸ್ಕಿ, ಸುನೀಲ ಚವಣೂರ, ಅರುಣ ಬರ್ಮಾ, ಶಿವು ಬೆಳಗೇರಿ, ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆಯ ರಾಜ್ಯ ಸಂಯೋಜಕರಾದ ಸಂದೀಪ ಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಚಂದ್ರು ಸಂಗನ ಸ್ವಾಗತಿಸಿಸರು. ರಾಜಕುಮಾರ ಸಂಕಾ ನಿರೂಪಿಸಿದರು.




Tags

Bhima Koregaon
share
ವಾರ್ತಾಭಾರತಿ
ವಾರ್ತಾಭಾರತಿ
Next Story
X