Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಭೀಮಾ ಕೋರೆಗಾಂವ್ ವಿಜಯೋತ್ಸವ |...

ಭೀಮಾ ಕೋರೆಗಾಂವ್ ವಿಜಯೋತ್ಸವ | ಸ್ವಾಭಿಮಾನ–ಸಮಾನತೆ ಹೋರಾಟದ ಐತಿಹಾಸಿಕ ಸಂಕೇತ: ಸುಭಾಷ್ ಗುತ್ತೇದಾರ್

ವಾರ್ತಾಭಾರತಿವಾರ್ತಾಭಾರತಿ5 Jan 2026 7:38 PM IST
share
ಭೀಮಾ ಕೋರೆಗಾಂವ್ ವಿಜಯೋತ್ಸವ | ಸ್ವಾಭಿಮಾನ–ಸಮಾನತೆ ಹೋರಾಟದ ಐತಿಹಾಸಿಕ ಸಂಕೇತ: ಸುಭಾಷ್ ಗುತ್ತೇದಾರ್

ಆಳಂದ: ಭೀಮಾ ಕೋರೆಗಾಂವ್ ಯುದ್ಧವು ಶೋಷಿತ–ವಂಚಿತ ವರ್ಗಗಳ ಸ್ವಾಭಿಮಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹೋರಾಟಕ್ಕೆ ದಿಕ್ಕು ತೋರಿದ ಐತಿಹಾಸಿಕ ಘಟನೆಯಾಗಿದೆ ಎಂದು ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದರು.

ಪಟ್ಟಣದ ಹಳೆಯ ಚೆಕ್‌ಪೋಸ್ಟ್ ಬಳಿಯ ದೀಕ್ಷಾ ಭೂಮಿಯಲ್ಲಿ ತಾಲೂಕು ದಲಿತ ಸೇನೆಯ ಆಶ್ರಯದಲ್ಲಿ ಸಮವಾರ ನಡೆದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಹಾಗೂ ಭೀಮಾ ಕೋರೆಗಾಂವ್ ಸ್ತಂಭ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾವಚಿತ್ರ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಈ ವಿಜಯೋತ್ಸವವು ಕೇವಲ ಇತಿಹಾಸ ಸ್ಮರಣೆ ಮಾತ್ರವಲ್ಲ; ಇಂದಿನ ಪೀಳಿಗೆಗೆ ಸಂವಿಧಾನಾತ್ಮಕ ಮೌಲ್ಯಗಳು, ಮಾನವೀಯತೆ ಮತ್ತು ಸಮಾನ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಮಹತ್ವದ ಪ್ರೇರಣೆಯಾಗಿದೆ ಎಂದು ಗುತ್ತೇದಾರ್ ಹೇಳಿದರು.

ದಲಿತ ಸೇನೆ ರಾಜ್ಯಾಧ್ಯಕ್ಷ ಹಾಗೂ ನ್ಯಾಯವಾದಿ ಹನುಮಂತ ಯಳಸಂಗಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭೀಮಾ ಕೋರೆಗಾಂವ್ ಸ್ತಂಭವು ಹೋರಾಟ, ತ್ಯಾಗ ಮತ್ತು ಆತ್ಮಗೌರವದ ಪ್ರತೀಕವಾಗಿದೆ ಎಂದು ಹೇಳಿದರು. ಸಂವಿಧಾನ ನೀಡಿದ ಹಕ್ಕುಗಳನ್ನು ಅರಿತುಕೊಂಡು ಅವುಗಳ ರಕ್ಷಣೆಗೆ ಸದಾ ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಬಳಸಿ ರಾಜಕೀಯ ನಾಟಕ ಮಾಡುತ್ತಿವೆ ಎಂದು ಟೀಕಿಸಿದ ಯಳಸಂಗಿ, ಶಿವಾಜಿ ಮತ್ತು ಸಂಭಾಜಿ ಮಹಾರಾಜರ ಇತಿಹಾಸವನ್ನು ವಿಕೃತಗೊಳಿಸಲಾಗುತ್ತಿದೆ ಹಾಗೂ ಟಿಪ್ಪು ಜಯಂತಿ ವಿಷಯದಲ್ಲಿ ದ್ವಂದ್ವ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.

ಉಪನ್ಯಾಸಕ ಜೀತೆಂದ್ರ ತಳವಾರ ಉಪನ್ಯಾಸ ನೀಡುತ್ತಾ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ಹಿನ್ನೆಲೆ ವಿವರಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಮ್ ಪ್ಯಾಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಾದಿಮನಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಮಲ್ಲಿಕಾರ್ಜುನ ಖೇಮಜೀ, ಪ್ರಕಾಶ ಮೂಲಭಾರತಿ, ಆನಂದ ಗಾಯಕವಾಡ, ಪುರಸಭೆ ನಿಕಟಪೂರ್ವ ಸದಸ್ಯ ಶಿವುಪುತ್ರ ನಡಗೇರಿ, ಲಕ್ಷ್ಮಣ ಝಳಕಿ, ಸಿದ್ಧು ಪೂಜಾರಿ, ಕಿಟ್ಟಿ ಸಾಲೇಗಾಂವ, ಶ್ರೀಮಂತ ಜಿಡ್ಡೆ, ಸುನೀಲ ಹಿರೋಳಿಕರ್, ಫಯಾಜ್ ಪಟೇಲ್, ದಲಿತ ಸೇನೆಯ ತಾಲೂಕು ಅಧ್ಯಕ್ಷ ಪಿಂಟು ಸಾಲೇಗಾಂವ, ಗೌರವ ಅಧ್ಯಕ್ಷ ಪಿಂಕು ಭದ್ರೆ, ಗೌತಮ ಕಾಂಬಳೆ, ವಿ.ಓ. ಅಧ್ಯಕ್ಷ ಗೌತಮ ನಿಂಬಾಳ, ಅಪ್ಪು ಗೋಪಾಳೆ, ಆಕಾಶ ಬಂಗರಗಾ, ಸಾಗರೆ ಗುಳಗಿ, ದಿಲೀಪ ಕ್ಷೀರಸಾಗರ, ರಾಘವೇಂದ್ರ ಹೇಬಳಿ, ಸೂರ್ಯಕಾಂಗ ಸಾಲೇಗಾಂವ ಸೇರಿದಂತೆ ಹಲವರಿದ್ದರು. ನಂತರ ಭೀಮಾ ಕೋರೆಗಾಂವ್ ಸ್ತಂಭ ಮೆರವಣಿಗೆ ನಡೆಯಿತು. ಶಿವುಕುಮಾರ ದಳಪತಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X