ಕಲಬುರಗಿ: ಎಂ.ಎಸ್.ಇರಾಣಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ.ಮಹಾದೇವಪ್ಪ ರಾಂಪೂರೆ ಅವರ 52ನೆಯ ಪುಣ್ಯಸ್ಮರಣೆ ದಿನದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ ಕ್ಲಬ್ ಸಹಯೋಗದೊಂದಿಗೆ ಗುರುವಾರ “ರಕ್ತದಾನ ಶಿಬಿರ” ಹಮ್ಮಿಕೊಳ್ಳಲಾಯಿತು.
ಶಿಬಿರವನ್ನು ಹೈ.ಕ.ಶಿ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಪದವಿ ಮಹಾವಿದ್ಯಾಲಯಗಳ ಸಂಚಾಲಕರಾದ ನಾಗಣ್ಣ ಎಸ್. ಘಂಟಿ ಅವರು ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈ.ಕ.ಶಿ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಅನಿಲಕುಮಾರ ಮರಗೋಳ ಅವರು ರಕ್ತದಾನ ಮಾಡುವುದರಿಂದ ಆರೋಗ್ಯದಲ್ಲಿ ಆಗುವ ಲಾಭಗಳನ್ನು ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ರೋಹಿಣಿಕುಮಾರ ಎಸ್. ಹಿಳ್ಳಿ ಮಾತನಾಡಿ, ಪ್ರತಿ ವರ್ಷ ನಮ್ಮ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುತ್ತೇವೆ. ಶಿಬಿರದಲ್ಲಿ ವಿದ್ಯಾರ್ಥಿಗಳು, ಹಿತೈಸಿಗಳು ಮತ್ತು ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಲು ಸಹಕಾರಿಸುತ್ತಾರೆ ಎಂದರು.
ರಕ್ತದಾನ ಮಾಡುವುದು ಒಂದು ಒಳ್ಳೆಯ ಸಮಾಜಸೇವೆ ಮತ್ತು ಇಂತಹ ಸೇವೆಗಳಲ್ಲಿ ಭಾಗವಹಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಆರೋಗ್ಯವನ್ನು ಚೆನ್ನಾಗಿ ಇಟ್ಟಿಕೊಳ್ಳಲು ನಾವು ದಿನಾಲು ಹಸಿ ತರಕಾರಿಗಳು, ಮೊಟ್ಟೆ, ಹಣ್ಣುಗಳು, ಬೆಲ್ಲ, ಖಜೂರು, ಒಣದ್ರಾಕ್ಷಿ, ಮತ್ತಿತರ ಗುಣಮಟ್ಟದ ಆಹಾರಗಳನ್ನು ಸೇವನೆ ಮಾಡುವುದರ ಮೂಲಕ ರಕ್ತ ಹೀನತೆಯ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯವೆಂದು ಹೇಳಿದರು.
ಡಾ. ಅಕ್ಷತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತವನ್ನು ಡಾ. ಪ್ರಾಣೇಶ ಶಾಂತಾರಾಮ ನೆರವೇರಿಸಿದರು. ಡಾ. ಶಂಕ್ರಪ್ಪ ಕೆ., ವಂದಿಸಿದರು.







