Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಂತ್ರಿಗಿರಿ ಪಡೆಯಲು ಬಿಆರ್ ಪಾಟೀಲ್ ರಿಂದ...

ಮಂತ್ರಿಗಿರಿ ಪಡೆಯಲು ಬಿಆರ್ ಪಾಟೀಲ್ ರಿಂದ ಮತಗಳ್ಳತನದ ಸುಳ್ಳು ಆರೋಪ: ಸುಭಾಷ್ ಗುತ್ತೇದಾರ್

ವಾರ್ತಾಭಾರತಿವಾರ್ತಾಭಾರತಿ18 Oct 2025 6:56 PM IST
share
ಮಂತ್ರಿಗಿರಿ ಪಡೆಯಲು ಬಿಆರ್ ಪಾಟೀಲ್ ರಿಂದ ಮತಗಳ್ಳತನದ ಸುಳ್ಳು ಆರೋಪ: ಸುಭಾಷ್ ಗುತ್ತೇದಾರ್

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಗಿಟ್ಟಿಸಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹತ್ತಿರವಾಗುವ ನೆಪಕ್ಕಾಗಿ ನನ್ನ ಮೇಲೆ ಮತಗಳ್ಳತನದ ಸುಳ್ಳು ಆರೋಪಗಳನ್ನು ಹಾಲಿ ಶಾಸಕ ಬಿ.ಆರ್ ಪಾಟೀಲ್ ಮಾಡುತ್ತಿದ್ದಾರೆ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಆರ್ ಪಾಟೀಲ್, ಈ ಹಿಂದೆ ನಾನು 23 ಕೊಲೆಗಳನ್ನು ಮಾಡಿದ್ದೇನೆ ಎಂದು ಆಪಾದನೆ ಮಾಡಿದ್ದರು. ಆದರೆ ಕೊನೆಗೂ ಅದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ಸತ್ಯ ಬಯಲಿಗೆ ಬಂದಿದೆ. ಹೀಗೆ ಅವರು ತಮ್ಮ ಹೈಕಮಾಂಡ್ ಅನ್ನು ಮೆಚ್ಚಿಸಲು ಹಾಗೂ ಸಚಿವ ಸ್ಥಾನ ಪಡೆಯಲು ಇಷ್ಟೆಲ್ಲ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಗುತ್ತೇದಾರ್ ಆರೋಪಿಸಿದರು.

ದೀಪಾವಳಿ ಹಬ್ಬದ ಪ್ರಯುಕ್ತ ಆಳಂದ ಪಟ್ಟಣದಲ್ಲಿರುವ ಮನೆಯನ್ನು ಕೆಲಸದವರು ಸ್ವಚ್ಛಗೊಳಿಸಿದ್ದಾರೆ. ಬೇಡವಾದ ಕಾಗದ ಪತ್ರಗಳನ್ನು ಸುಟ್ಟುಹಾಕಿದ್ದಾರೆ. ನಾನೊಬ್ಬ ರಾಜಕಾರಣಿಯಾಗಿದ್ದರಿಂದ ಮನೆಯಲ್ಲಿ ಮತದಾರರ ಪಟ್ಟಿ, ಕರಪತ್ರಗಳೂ ಇರಬಾರದಾ? ಎಂದು ಪ್ರಶ್ನಿಸಿದ ಅವರು, ಸಾಕ್ಷಿಗಳನ್ನು ನಾಶ ಮಾಡುವುದಾದರೆ ಯಾರಾದ್ರೂ ಮನೆ ಮುಂದೆ ಸುಡುತ್ತಾರಾ? ಒಂದು ವೇಳೆ ಇಂತಹ ಮತಕಳ್ಳತನದಲ್ಲಿ ತೊಡಗಿದ್ದೇ ಆದರೆ ಸಾಕ್ಷಿಗಳನ್ನು ನಾಶಪಡಿಸಲು ದೂರದ ಸ್ಥಳದಲ್ಲಿ ಹೋಗಿ ನಾಶ ಮಾಡುತ್ತಿದ್ದರು ಎಂದರು.

ಧ್ವಜವಂದನೆ ಮಾಡದ ಶಾಸಕ ಬಿ.ಆರ್ ಪಾಟೀಲ್:

ಆಳಂದ ಮತಕ್ಷೇತ್ರದಲ್ಲಿ ಇವರೆಗೆ ಹೇಳಿಕೊಳ್ಳುವಂಥ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿಲ್ಲ. ಇಂತಹ ಸುಳ್ಳು ಆಪಾದನೆ ಮಾಡಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಹಾಲಿ ಶಾಸಕರು ಮುಂದಾಗುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಗೆ ಬಂದರೆ ಇವರು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ದೆಹಲಿಗೆ ಹೋಗಿದ್ದರು. ಇತ್ತ ವಿಮೋಚನೆ ದಿನದಂದು ಧ್ವಜ ವಂದನೆ ಸ್ವೀಕಾರ ಮಾಡಿಲ್ಲ ಎಂದು ಸುಭಾಷ್ ಗುತ್ತೇದಾರ್, ಶಾಸಕರ ವಿರುದ್ಧ ಹರಿಹಾಯ್ದರು.

ಮತಗಳ್ಳತನದ ಆರೋಪವಿರುವ ಕಾರಣಕ್ಕೆ ತನಿಖೆಗಾಗಿ ಸಂಪೂರ್ಣ ಸಹಕರಿಸುವೆ, ಒಂದು ವೇಳೆ ಜೈಲಿಗೆ ಹೋದರೂ ಪರವಾಗಿಲ್ಲ. ನ್ಯಾಯಕ್ಕಾಗಿ ಕೋರ್ಟ್ ಗೆ ಹೋಗುವೆ. ಖಂಡಿತ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಗುತ್ತೇದಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಉಮೇಶ್ ಜಾಧವ್, ಅವಿನಾಶ್ ಜಾಧವ್, ಬಸವರಾಜ ಮತ್ತಿಮಡು, ಚಂದು ಪಾಟೀಲ್, ಅಶೋಕ್ ಬಗಲಿ, ಲಿಂಗರಾಜ ಬಿರಾದಾರ, ಮಲ್ಲಿಕಾರ್ಜುನ್ ಕಂದಗೊಳೆ, ಸಂತೋಷ್ ಹಾದಿಮನಿ ಮತ್ತಿತರು ಇದ್ದರು.


Tags

BR PatilSubhash Guttedar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X