Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ʼಕೆಕೆಆರ್‌ಡಿಬಿ ಹಾರ್ಟ್ ಲೈನ್ʼ ಯೋಜನೆಗೆ...

ʼಕೆಕೆಆರ್‌ಡಿಬಿ ಹಾರ್ಟ್ ಲೈನ್ʼ ಯೋಜನೆಗೆ ಸೆ.17ರಂದು ಮುಖ್ಯಮಂತ್ರಿಗಳಿಂದ ಚಾಲನೆ : ಶಾಸಕ ಡಾ.ಅಜಯ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ15 Sept 2025 5:03 PM IST
share
ʼಕೆಕೆಆರ್‌ಡಿಬಿ ಹಾರ್ಟ್ ಲೈನ್ʼ ಯೋಜನೆಗೆ ಸೆ.17ರಂದು ಮುಖ್ಯಮಂತ್ರಿಗಳಿಂದ ಚಾಲನೆ : ಶಾಸಕ ಡಾ.ಅಜಯ್ ಸಿಂಗ್
ʼʼ81 ಆಂಬ್ಯುಲೆನ್ಸ್ ವಾಹನಗಳಿಂದ ಆರೋಗ್ಯ ಸೇವೆʼʼ

ಕಲಬುರಗಿ: ಹೃದ್ರೋಗಿಗಳಿಗೆ ಗೊಲ್ಡನ್ ಹವರ್ ನಲ್ಲಿ‌ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿ ಮಂಡಳಿಯ ಆರ್ಥಿಕ ನೆರವಿನ "ಕೆಕೆಆರ್‌ಡಿಬಿ ಹಾರ್ಟ್ ಲೈನ್" ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.17 ರಂದು‌ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಸೋಮವಾರ ಕಲಬುರಗಿ ನಗರದಲ್ಲಿರುವ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ಜೀವನಶೈಲಿ ಕಾರಣ ಹದಿಹರೆಯದ ಯುವಕರು, 40ಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹಾರ್ಟ್ ಅಟ್ಯಾಕ್ ಕಾಣುತ್ತಿದ್ದೇವೆ. ಕಳೆದ‌ 3 ವರ್ಷದಲ್ಲಿ ಜಯದೇವ ಆಸ್ಪತ್ರೆಯ ಅಂಕಿ ಸಂಖ್ಯೆ ಪ್ರಕಾರ ಹೃದಯಾಘಾತದಿಂದ ನಿಧನ ಹೊಂದಿದ 1,004 ರಲ್ಲಿ 45 ವಯಸ್ಸಿಗ್ಗಿಂತ ಕಡಿಮೆ ಇರುವ 477 ಜನ ಸಾವಪ್ಪಿದ್ದಾರೆ. ಹೀಗಾಗಿ ಹೃದಯಾಘಾತದಿಂದ ಸಾವು ತಪ್ಪಿಸುವ ನಿಟ್ಟಿನಲ್ಲಿ ಈ ಹಾರ್ಟ್ ಲೈನ್ ಯೋಜನೆ ಆರಂಭಿಸಲಾಗುತ್ತಿದೆ ಎಂದರು.

ಈ ಯೋಜನೆಯಡಿ ಕಲಬುರಗಿ ಜಿಲ್ಲೆಗೆ 9, ಬೀದರ-4, ಯಾದಗಿರಿ-2, ರಾಯಚೂರು-5, ಬಳ್ಳಾರಿ-4, ಕೊಪ್ಪಳ-5, ವಿಜಯನಗರ-3 ಸೇರಿದಂತೆ ಒಟ್ಟು ಅತ್ಯಾಧುನಿಕ 32 ಅಂಬುಲೆನ್ಸ್ ವಾಹನಗಳನ್ನು ಒದಗಿಸಲಾಗಿದೆ. ಕಾರ್ಡಿಯಕ್ ಮಾನಿಟರ್, ಡೆಫಿಬ್ರಿಲೇಟರ್, ಪೋರ್ಟೇಬಲ್ ವೆಂಟಿಲೇಟರ್, ಅಂಬು ಬ್ಯಾಗ್, ಎಮರ್ಜೆನ್ಸಿ ಡ್ರಗ್ಸ್ ಸೇವೆಗಳನ್ನು ಈ ಆಂಬ್ಯುಲೆನ್ಸ್ ಹೊಂದಿವೆ ಎಂದರು.

32 ಆಂಬ್ಯುಲೆನ್ಸ್ ವಾಹನಗಳು ಪ್ರದೇಶದ ತಾಲೂಕಾ, ಸಮುದಾಯ ಆರೋಗ್ಯ ಆಸ್ಪತ್ರೆಗಳಿಗೆ ಹಂಚಿಕೆ ಮಾಡಿದ್ದು, ತಲಾ 9.64 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿದ ಆಂಬ್ಯುಲೆನ್ಸ್ (ಬಿ.ಎಲ್.ಎಸ್) ಅರೋಗ್ಯ ಇಲಾಖೆಗೆ ಹಸ್ತಾಂತರಿಸಿದೆ. ಪ್ರಸ್ತುತ ಇರುವ 49 ಅಂಬುಲೆನ್ಸ್ ಸೇರಿದಂತೆ ಒಟ್ಟಾರೆ 81 ಅಂಬುಲೆನ್ಸ್ ವಾಹನಗಳು ಪ್ರದೇಶದ‌ ಆರೋಗ್ಯ ಸೇವೆಗಳು ಲಭ್ಯವಾಗಲಿವೆ ಎಂದರು.

ಮಂಡಳಿಯಿಂದ ಕಳೆದ‌ 2 ವರ್ಷಗಳಲ್ಲಿ "ಆರೋಗ್ಯ ಆವಿಷ್ಕಾರ" ಯೋಜನೆಯಡಿ ಸುಮಾರು 2,000 ಕೋಟಿ ರೂ. ಒದಗಿಸಿದ್ದೇವೆ‌. ಪ್ರಸಕ್ತ ವರ್ಷ ಸಹ ಕಬುರಗಿಯಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 40 ಕೋಟಿ ರೂ., ಬೀದರ ವೈದ್ಯಕೀಯ ಸಂಸ್ಥೆಯ ಅಸ್ಒತ್ರೆಯಲ್ಲಿ ಕ್ಯಾನ್ರ್ ವಿಭಾಗ ಅರಂಭಿಸಲು 18 ಕೋಟಿ ರೂ., ಖಬುರಗಿಯ ಜಿಮ್ಸ್ ಅಧೀನದಲ್ಲಿ ಎಂಡೋಕ್ರೋನೊಲೋಜಿ ಘಟಕ ಸ್ಥಾಪನೆಗೆ 18 ಕೋಟಿ ರೂ., ಕಲಬುರಗಿಯಲ್ಲಿ ನಿಮ್ಹಾನ್ಸ್ ಶಾಖೆ ಸ್ಥಾಪನೆಗೆ 34 ಕೋಟಿ ರೂ., ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪನೆಗೆ 34 ಕೋಟಿ ರೂ., ರಾಯಚೂರಿನ ರಾಜೀವ ಗಾಂಧಿ‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ 17 ಕೋಟಿ ರೂ. ಹಾಗೂ ಯಲಬುರ್ಗಾ, ಜೇವರ್ಗಿ ಹಾಗೂ ಕೊಪ್ಪಳನಲ್ಲಿ ತಲಾ 6 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ಸ್ಥಾಪನೆ ಮತ್ತು ಕಲಬುರಗಿಯಲ್ಲಿ ಆರೋಗ್ಯ ಭವನ ನಿರ್ಮಾಣಕ್ಕೆ ಮಂಡಳಿ ಅನುದಾನ ನೀಡುತ್ತಿದೆ ಎಂದರು.

ಹಬ್ & ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ:

ಕೆಕೆಆರ್‌ಡಿಬಿ ಹಾರ್ಟ್ ಲೈನ್ ಯೋಜನೆ ಹಬ್ & ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ನೀಡುವ ಯೋಜನೆಯಾಗಿದೆ. ಗ್ರಾಮೀಣ ಭಾಗದಲ್ಲಿ ಯಾವುದೇ ವ್ಯಕ್ತಿ ಹೃದಯಾಘಾತಕ್ಕೆ ಒಳಗಾದಲ್ಲಿ ಅಂಬುಲೆನ್ಸ್ ಗೆ ಕರೆ ಮಾಡಿದಾಗ ಹತ್ತಿರದ ತಾಲೂಕು ಆಸ್ಪತ್ರೆಗಳಿಗೆ ರೋಗಿಗಳನ್ನು ಸಂಪರ್ಕಿಸಲು ತಿಳಿಸಲಾಗುತ್ತದೆ. ಅಲ್ಲಿ ಹೃದ್ರೋಗಿಗಳಿಗೆ ಜಯದೇವ ಆಸ್ಪತ್ರೆಯ ತಜ್ಞ ವೈದ್ಯರ ಸಲಹೆ ಪಡೆದು ಪ್ರಾಥಮಿಕ ಚಿಕಿತ್ಸೆ‌ ನೀಡಿ ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಜಯದೇವ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಇನ್ನು ತಾಲೂಕು ಆಸ್ಪತ್ರೆಯಲ್ಲಿ 12 ಚಾನೆಲ್ ಇ.ಸಿ.ಜಿ, ಎನ್.ಐ.ಬಿ.ಪಿ., ಎಸ್.ಪಿ.ಓ-2, ಮೊಬೈಲ್ ಫೋನ್, ಲ್ಯಾಪಟಾಪ, ಪ್ರಿಂಟರ್ ಸೌಲಭ್ಯ ಒದಗಿಸಲಾಗುತ್ತದೆ ಎಂದರು.

ಕಲಬುರಗಿ,‌ ಬೀದರ್‌, ಯಾದಗಿರಿ, ರಾಯಚೂರು ಜಿಲ್ಲೆಯ ಕೆಲವು ಆಸ್ಪತ್ರೆಗಳು, ಕಲಬುರಗಿಯ ಜಯದೇವ ಆಸ್ಪತ್ರೆಯ ಹಬ್ ಗೆ, ಕೊಪ್ಪಳ ಜಿಲ್ಲೆಯ ಅಸ್ಪತ್ರೆಗಳು ಬಾಗಲಕೋಟೆಯ ಹಬ್ ಗೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅಸ್ಪತ್ರೆಗಳು ಬಳ್ಳಾರಿ ಹಬ್ ಗೆ ಒಳಪಡಲಿವೆ. ಮುಂದಿನ ದಿನದಲ್ಲಿ ಸಮುದಾಯ ಅರೋಗ್ಯ ಕೇಂದ್ರದ ವರೆಗೂ ಈ ಸೇವೆ ವಿಸ್ತರಣೆ ಮಾಡುವ‌ ಚಿಂತನೆ ಇದೆ ಎಂದು ಡಾ.ಅಜಯ್ ಸಿಂಗ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಉಪ ಕಾರ್ಯದರ್ಶಿ ಮಂಜುನಾಥ ಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ, ಉಪನಿರ್ದೇಶಕ ಡಾ.ಅಂಬರಾಯ ರುದ್ರವಾಡಿ, ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X