Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿಂಚೋಳಿ| ಶರಣ ಚಿಂತನಾ ಗೋಷ್ಠಿಗಳ ಸಮಾರೋಪ...

ಚಿಂಚೋಳಿ| ಶರಣ ಚಿಂತನಾ ಗೋಷ್ಠಿಗಳ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ27 Aug 2025 9:52 PM IST
share
ಚಿಂಚೋಳಿ| ಶರಣ ಚಿಂತನಾ ಗೋಷ್ಠಿಗಳ ಸಮಾರೋಪ ಸಮಾರಂಭ

ಕಲಬುರಗಿ: ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಶ್ರೀ ಬಸವ ಪರುಷ ಕಟ್ಟೆಯ ಶ್ರಾವಣ ಶರಣ ಚಿಂತನಾ ಗೋಷ್ಠಿಗಳ ಸಮಾರೋಪ ಸಮಾರಂಭ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೀದರ್ ನಗರದ ಶ್ರೀ ಬಸವ ಸೇವಾ ಪ್ರತಿಷ್ಠಾನದ ಪೀಠಾಧ್ಯಕ್ಷೆ ಪೂಜ್ಯ ಗಂಗಾಂಬಿಕೆ, ಚಿಮ್ಮನಚೋಡ ಗ್ರಾಮದ ಶ್ರೀ ಬಸವ ಪರುಷ ಕಟ್ಟೆ ಸಾಕ್ಷಾತ್ ಕಾರಣಿಕ ಪುರುಷ ಬಸವಣ್ಣನವರ ಕಾರಣಿಕ ಕಟ್ಟೆ ಆಗಿದೆ. ಶ್ರಾವಣ ಮಾಸದಾದ್ಯಂತ ನಿತ್ಯ ಬಸವ ಪೂಜೆ ವಚನ ಪ್ರಾರ್ಥನೆ, ಶರಣ ಚಿಂತನಗೊಷ್ಟಿ, ವಚನ ಪಠಣ, ವಚನ ಕಂಠಪಾಠ ಸ್ಪರ್ಧೆ, ವಚನ ಗಾಯನ, ವಚನ ನೃತ್ಯ, ಅನ್ನ ದಾಸೋಹ ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಸಂತಸ ಎಂದು ಹೇಳಿದರು.

ಇದೇ ವೇಳೆ ಬಸವ ಸಂಸ್ಕೃತಿ ಅಭಿಯಾನದ ಕರಪತ್ರಗಳನ್ನು ಬಿಡುಗಡೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷ ಆನಂದ ಕುಮಾರ ಬೆಡಸೂರು ವಂದನಾರ್ಪಣೆ ಮಾಡಿದರು. ಚಂದ್ರಯ್ಯ ಸ್ವಾಮಿಗಳು ವಚನ ಕಂಠಪಾಠ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಲಾವಿದ ಮಹೇಶ ಬಡಿಗೇರ, ವಿದ್ಯಾಸಾಗರ ದೇಶಮುಖ, ಗವಿಸಿದ್ಧಪ್ಪ ಪಾಟೀಲ್, ಜಗನ್ನಾಥ್, ಲಿಂಗಾರ್ತಿ ನಾವದಗೇರೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ವೇಳೆ ಅಬ್ದುಲ್ ಕಲಾಂ ಶಾಲೆ, ವಿಶ್ವಗಂಗಾ ಶಾಲೆ, ಮೌಲಾನಾ ಆಝಾದ್ ಶಾಲೆ ಮಕ್ಕಳ ವಚನ ನೃತ್ಯಗಳು ಗಮನ ಸೆಳೆದವು.

ಈ ಸಂದರ್ಭದಲ್ಲಿ ವೀರಸಂಗಯ್ಯ ಮದರಗಿ ಮಠ, ಜಗದೀಶ್ ಮರಪಳ್ಳಿ, ಸಂಗಮೇಶ ರಗಟೆ ಬಸವರಾಜ ಬುರುಕಪಳ್ಳಿ, ಗುರುಶಾಂತ ಹುಂಡೇಕಾರ, ಮಡಿವಾಳಪ್ಪ ರಗಟೆ, ಶಾಂತಪ್ಪ ದುಬಲಗುಂಡಿ, ಅರುಣವರ್ಧನ ಮರಪಳ್ಳಿ, ವೀರಶೆಟ್ಟಿ ದುಬಲಗುಂಡಿ, ಶಿವರುದ್ರಯ್ಯ ಹಿರೇಮಠ, ಶಾಂತಕುಮಾರ ಸೀತಾಳಗೇರಾ, ಶರಣಕುಮಾರ ನೇತಿ , ರಾಕೇಶಕುಮಾರ ಕೊಡಂಗಲ್, ಸಂತೋಷ ಕೊಡಂಗಲ್, ದಿಲೀಪ್ ಬೆಡಸೂರು, ಮಲ್ಲಿಕಾರ್ಜುನ ಬುರುಕಪಳ್ಳಿ, ಶಿವಶರಣ ಕೊಡಂಗಲ್, ಶಾಂತಾಬಾಯಿ ಕಿಳ್ಳಾ, ನಾಗಮ್ಮಾ ಮಠ, ಕವಿತಾ ಜಾಡರ, ರಾಧಿಕಾ ಹಿರೇಮಠ, ಅಶ್ವಿನಿ ರೆಡ್ಡಿ, ಸುಮಿತ್ರಾ ಮದರಗಿ ಮಠ, ವಿದ್ಯಾವತಿ ಮದರಗಿ ಮಠ ಮುಂತಾದವರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಸಿದ್ಧಲಿಂಗ ದುಬಲಗುಂಡಿ ಸ್ವಾಗತಿಸಿದರು. ಜ್ಯೋತಿ ಸಂಗೋಂಡ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X