ಚಿಂಚೋಳಿ | ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ : ಕರುಣೇಶ್ವರ ಶಿವಾಚಾರ್ಯ

ಚಿಂಚೋಳಿ : ತಾಲೂಕಿನ ನೀಡಗುಂದಾ ಗ್ರಾಮದ ಶ್ರೀ ಕಂಚಾಳಕುಂಟಿ ನಂದಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ 17ನೇ ಶಾಲಾ ವಾರ್ಷಿಕೋತ್ಸವ ಹಾಗೂ ‘ತಾಯಂದಿರ ಕೈ ತುತ್ತಿನ ಊಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಭಾನುವಾರ ಉದ್ಘಾಟಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಷ.ಬ್ರ. ಕರುಣೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿ, ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ತಂದೆ-ತಾಯಿಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಾಯಿ ಗರ್ಭಧಾರಣೆಯ ಹಂತದಿಂದಲೇ ಮಗುವಿನ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳು ಪ್ರೌಢಾವಸ್ಥೆಗೆ ತಲುಪುವವರೆಗೂ ಪೋಷಕರು ಅವರೊಂದಿಗೆ ಆಪ್ತರಾಗಿರಬೇಕು ಎಂದು ಕಿವಿಮಾತು ಹೇಳಿದರು.
ಮಕ್ಕಳಿಗೆ ಸಾತ್ವಿಕ ನಡವಳಿಕೆ, ಪೌಷ್ಟಿಕ ಆಹಾರ ಹಾಗೂ ಉತ್ತಮ ಸಂಸ್ಕಾರಗಳನ್ನು ನೀಡುವ ಮೂಲಕ ಸರಿಯಾದ ಜೀವನ ಮಾರ್ಗವನ್ನು ತೋರಿಸಿಕೊಡಬೇಕು. ಬಾಲ್ಯದಲ್ಲಿ ಮಕ್ಕಳು ತಪ್ಪು ದಾರಿಗೆ ಹೋಗದಂತೆ ತಡೆಯುವುದು ಪೋಷಕರ ಜವಾಬ್ದಾರಿ. ಪ್ರೌಢಾವಸ್ಥೆಯಲ್ಲಿ ಪೋಷಕರು ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಂಚಾಳಕುಂಟಿ ಬಸವೇಶ್ವರ ವಿದ್ಯಾಸಂಸ್ಥೆಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಪ್ರೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಾಬು ಎಸ್. ಕುಂಬಾರ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಎಲ್. ಹೂವಿನಭಾವಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇಣುಕಾ ಹಾಷನಪಲ್ಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶರಣು ಅಮಿತ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುಕುಂದ ದೇಶಪಾಂಡೆ ಸೇರಿದಂತೆ ಜಗನಾಥ್ ಎಸ್.ಕುಂಬಾರ, ರವಿ ಕೊಂಡಪಳ್ಳಿ, ಪ್ರಕಾಶ, ಸಿದ್ದೆಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ವೀರಶೆಟ್ಟಿ ಮೊಳಕೇರಿ, ಕರೆಪ್ಪ ಪೂಜಾರಿ, ಸದಾನಂದ ಗುತ್ತೇದಾರ, ಮರೆಪ್ಪ ಗೌತಮ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.







