Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಹೆಣ್ಣುಮಕ್ಕಳಿಗೆ ಉತ್ತಮ...

Chitapur | ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಬಾಲ್ಯವಿವಾಹ ತಡೆ ಸಾಧ್ಯ: ಆರತಿ ತುಪ್ಪದ್

ವಾರ್ತಾಭಾರತಿವಾರ್ತಾಭಾರತಿ24 Jun 2026 6:15 PM IST
share
Chitapur | ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಬಾಲ್ಯವಿವಾಹ ತಡೆ ಸಾಧ್ಯ: ಆರತಿ ತುಪ್ಪದ್

ಚಿತ್ತಾಪುರ: ಹೆಣ್ಣುಮಕ್ಕಳಿಗೆ ತಾರತಮ್ಯ ಮಾಡದೆ ಉತ್ತಮ ಶಿಕ್ಷಣ ನೀಡುವುದರಿಂದ ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್ ಹೇಳಿದರು.

ತಾಲೂಕಿನ ದಂಡೋತಿ ಗ್ರಾಮದ ಅಂಗನವಾಡಿ ಕೇಂದ್ರ-3ರಲ್ಲಿ ಬೇಟಿ ಬಚಾವೋ, ಬೇಟಿ ಪಢಾವೋ ಆಂದೋಲನದ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಅರಿವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಗಂಡು-ಹೆಣ್ಣು ಎಂಬ ತಾರತಮ್ಯದಿಂದ ಹೆಣ್ಣು ಮಕ್ಕಳಿಗೆ ಸಮರ್ಪಕ ಶಿಕ್ಷಣ ದೊರೆಯದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬಾಲ್ಯದಲ್ಲೇ ವಿವಾಹ ಮಾಡಿಸುವುದರಿಂದ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆ, ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಹೆಣ್ಣು ಮಗುವನ್ನು ಭಾರವೆಂದು ಭಾವಿಸಿ ಬಾಲ್ಯವಿವಾಹಕ್ಕೆ ಮುಂದಾಗುವುದು ಕಂಡುಬರುತ್ತಿದೆ. ಇಂತಹ ಮನೋಭಾವದಿಂದ ಸಾರ್ವಜನಿಕರು ಹೊರಬಂದು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣ ಪಡೆದ ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಲಿಂಗ ತಾರತಮ್ಯ, ವರದಕ್ಷಿಣೆ ನಿಷೇಧ ಕಾಯ್ದೆ, ಹೆಣ್ಣು ಮಗುವಿನ ರಕ್ಷಣೆ ಹಾಗೂ ಸುಕನ್ಯಾ ಸಮೃದ್ಧಿ ಯೋಜನೆಯ ಸೌಲಭ್ಯಗಳ ಕುರಿತು ಸಾರ್ವಜನಿಕರು ಮತ್ತು ಪೋಷಕರಿಗೆ ಮಾಹಿತಿ ನೀಡಲಾಯಿತು.

ದಂಡೋತಿ ವಲಯ ಮೇಲ್ವಿಚಾರಕಿ ಶೋಭಾ ಕೇಶಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಗನವಾಡಿ ಶಿಕ್ಷಕಿ ಸರಸ್ವತಿ ಹಾದಿಮನಿ ಪ್ರಾರ್ಥನಾ ಗೀತೆ ಹಾಡಿದರು. ಅಂಗನವಾಡಿ ಕೇಂದ್ರ-5ರ ಶಿಕ್ಷಕಿ ವಿದ್ಯಾನಿಧಿ ಕವಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರೇಣುಕಾ ಕಲಾಲ್, ಗ್ರಾಮದ ಮುಖಂಡರಾದ ದಾವೂದ್ ಪಟೇಲ್, ರಶೀದ್ ಪಠಾಣ್, ಶರಣ ಬಸವೇಶ್ವರ ಶಾಲೆಯ ಮುಖ್ಯೋಪಾದ್ಯಾಯ ಮಲ್ಲಣ್ಣ, ಉರ್ದು ಶಾಲೆಯ ಸಹ ಶಿಕ್ಷಕಿ ಸಭಾ, ಅಂಗನವಾಡಿ ಶಿಕ್ಷಕಿಯರಾದ ಅಕ್ಕಮಹಾದೇವಿ ಭೃಂಗಿಮಠ, ಸುಮಲತಾ ಬಟಿಗೇರಿ, ರಾಧಾ, ರೇಖಾ, ಬಸ್ಸಮ್ಮ, ಆಲಿಯಾ ಬೇಗಂ ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಇದ್ದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X