Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಬಸವರಾಜ್ ಪಡುಕೋಟೆ ವಿರುದ್ಧ...

Chitapur | ಬಸವರಾಜ್ ಪಡುಕೋಟೆ ವಿರುದ್ಧ ಕಠಿಣ ಕ್ರಮ ಬೇಡ; ಬಿಡುಗಡೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 July 2026 4:48 PM IST
share
Chitapur | ಬಸವರಾಜ್ ಪಡುಕೋಟೆ ವಿರುದ್ಧ ಕಠಿಣ ಕ್ರಮ ಬೇಡ; ಬಿಡುಗಡೆಗೆ ಮನವಿ

ಚಿತ್ತಾಪುರ: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ಅಧಿಕಾರಿಗಳು ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ವೇಳೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿರುವ ನಮ್ಮ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ, ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕನ್ನಡಪರ ಹೋರಾಟಗಾರ ಬಸವರಾಜ್ ಪಡುಕೋಟೆ ಅವರನ್ನು ರೌಡಿಗಳಂತೆ ಪರಿಗಣಿಸದೇ ಮಾನವೀಯ ದೃಷ್ಟಿಯಿಂದ ನಡೆದುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕೃಷ್ಣ ಬೈರೇಗೌಡ ಅವರಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿ ಮಾತನಾಡಿದ ಅವರು, ಬಸವರಾಜ್ ಪಡುಕೋಟೆ ಅವರ ಬಗ್ಗೆ ಸಮಗ್ರ ಪರಿಶೀಲನೆ ನಡೆಸದೆ ಕೇವಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯನ್ನು ಆಧರಿಸಿ ಕಠಿಣ ಕ್ರಮಕ್ಕೆ ಮುಂದಾಗುವುದು ಸರಿಯಲ್ಲ ಎಂದು ಹೇಳಿದರು.

ಬೆಂಗಳೂರು ಶಿವಾಜಿನಗರದಲ್ಲಿ ನಡೆದ ಘಟನೆಯ ಬಗ್ಗೆ ವಿಷಾದವಿದೆ. ಆದರೆ ಘಟನೆ ನಡೆದ ವೇಳೆ ಕೆಲ ಅಧಿಕಾರಿಗಳು ಬಸವರಾಜ್ ಪಡುಕೋಟೆ ಅವರೊಂದಿಗೆ ಅಸಭ್ಯ ಹಾಗೂ ನಿಂದನಾತ್ಮಕವಾಗಿ ವರ್ತಿಸಿದ್ದರಿಂದ ಕಾರ್ಯಕರ್ತರು ಮತ್ತು ಕೆಲ ವ್ಯಾಪಾರಸ್ಥರು ಆಕ್ರೋಶಗೊಂಡು ಅನುಚಿತವಾಗಿ ನಡೆದುಕೊಂಡಿರುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಕನ್ನಡದ ಬಾವುಟ, ದೇವಸ್ಥಾನ, ಧ್ವಜಸ್ತಂಭ ಸೇರಿದಂತೆ ಸಾರ್ವಜನಿಕ ವಿಚಾರಗಳಿಗೆ ಸಂಬಂಧಿಸಿದ ಕಾರ್ಯಾಚರಣೆ ಕೈಗೊಳ್ಳುವ ಮೊದಲು ಸ್ಥಳೀಯ ಕನ್ನಡಪರ ಸಂಘಟನೆಗಳೊಂದಿಗೆ ಸಮನ್ವಯ ಸಾಧಿಸಿ ಚರ್ಚೆ ನಡೆಸಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ನಮ್ಮ ಕರ್ನಾಟಕ ಸೇನೆ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ನೀಡಿದೆ. ಆದರೆ ಈ ಘಟನೆಯಲ್ಲಿ ಕೇವಲ ಬಸವರಾಜ್ ಪಡುಕೋಟೆ ಹಾಗೂ ವ್ಯಾಪಾರಸ್ಥರನ್ನಷ್ಟೇ ಹೊಣೆಗಾರರನ್ನಾಗಿ ಮಾಡದೇ, ಅಧಿಕಾರಿಗಳ ವರ್ತನೆಯನ್ನೂ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ವಾಡಿ ವಲಯ ಅಧ್ಯಕ್ಷ ಸಿದ್ದು ಪೂಜಾರಿ ಮಾತನಾಡಿ, ಕಳೆದ ಸುಮಾರು 30 ವರ್ಷಗಳಿಂದ ಕನ್ನಡ ನಾಡು, ನುಡಿ ಮತ್ತು ಗಡಿಯ ವಿಚಾರವಾಗಿ ಹೋರಾಟ ನಡೆಸುತ್ತಿರುವ ಬಸವರಾಜ್ ಪಡುಕೋಟೆ ಅವರನ್ನು ಕನ್ನಡಪರ ಹೋರಾಟಗಾರರೆಂದು ಪರಿಗಣಿಸಿ, ಅವರ ವಿರುದ್ಧ ಅತಿಯಾದ ಕಠಿಣ ಕಾನೂನು ಕ್ರಮ ಕೈಗೊಳ್ಳದೆ ಮಾನವೀಯ ದೃಷ್ಟಿಯಿಂದ ಅಲ್ಪ ಪ್ರಮಾಣದ ಶಿಕ್ಷೆ ನೀಡಿ ಕ್ಷಮಿಸಿ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಹುಲ್ ಸಿಂದಗಿ, ಸಂಘಟನಾ ಸಂಚಾಲಕ ಅಂಬರೀಷ ಮಾಳಗಿ, ಪ್ರಭು ಹಲಕರ್ಟಿ, ನಾಗರಾಜ ಬನಸೋಡೆ, ಪ್ರಭಾಕರ ಪೂಜಾರಿ, ಶಶಿಸಾಗರ, ರವೀಂದ್ರ, ಜೈ ಭೀಮ ವಾಲೇಕ‌ರ್, ಬಸವರಾಜ ಗುತ್ತೇದಾರ, ಪ್ರೇಮ್ ಜೋಶಿ ಸೇರಿದಂತೆ ಇತರರು ಇದ್ದರು.

Tags

Chittapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X