Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಇತಿಹಾಸದ ರಚನೆಗೆ ಮೂಲ ಆಕರಗಳನ್ನು...

ಇತಿಹಾಸದ ರಚನೆಗೆ ಮೂಲ ಆಕರಗಳನ್ನು ಸಂಗ್ರಹಿಸುವ ಕಾರ್ಯ ಕಲ್ಯಾಣ ಕರ್ನಾಟಕದಿಂದಲೇ ಶುರುವಾಗಿದೆ: ಡಾ. ಎಸ್. ಕೆ. ಅರುಣಿ

ವಾರ್ತಾಭಾರತಿವಾರ್ತಾಭಾರತಿ21 March 2025 2:24 PM IST
share
ಇತಿಹಾಸದ ರಚನೆಗೆ ಮೂಲ ಆಕರಗಳನ್ನು ಸಂಗ್ರಹಿಸುವ ಕಾರ್ಯ ಕಲ್ಯಾಣ ಕರ್ನಾಟಕದಿಂದಲೇ ಶುರುವಾಗಿದೆ: ಡಾ. ಎಸ್. ಕೆ. ಅರುಣಿ

ಕಲಬುರಗಿ: ಕನ್ನಡ ನಾಡಿನ ಇತಿಹಾಸದ ರಚನೆಗೆ ಮೂಲ ಆಕರಗಳನ್ನು ಸಂಗ್ರಹಿಸುವ ಕಾರ್ಯವು ಕ್ರಿ.ಶ.1790ರ ದಶಕದಲ್ಲಿ ಕಲ್ಯಾಣ- ಕರ್ನಾಟಕ ಪ್ರದೇಶದಲ್ಲಿ ಆರಂಭಗೊಂಡಿದ್ದು ಎಂದು ದಾಖಲೆಗಳು ಹೇಳುತ್ತವೆ ಎಂದು ಬೆಂಗಳೂರಿನ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ತಿನ ಪ್ರಾದೇಶಿಕ ನಿರ್ದೇಶಕರಾದ ಡಾ. ಎಸ್. ಕೆ. ಅರುಣಿಯವರು ಹೇಳಿದರು.

ಅವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ವಿಭಾಗೀಯ ಕಛೇರಿಯ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ, 'ಹೈದರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನಗಳು ಮತ್ತು ಕನ್ನಡ ನಾಡಿನ ಚರಿತ್ರೆ ರಚನೆಯ ಬೆಳವಣಿಗೆ' ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿ, ಮಾತನಾಡಿದರು.

ಕನ್ನಡ ನಾಡಿನ ಇತಿಹಾಸದ ರಚನೆಗೆ ಮೂಲ ಆಕರಗಳನ್ನು ಸಂಗ್ರಹಿಸುವ ಕಾರ್ಯವು ಇಲ್ಲಿಯೇ ಪ್ರಾರಂಭವಾಗಿದ್ದು, ಇದು ಕರ್ನಾಟಕದಲ್ಲಿಯೇ ಪ್ರಥಮ ಎಂದು ಹೇಳಲಾಗುತ್ತದೆ. ಮುಖ್ಯವಾಗಿ ಬ್ರಿಟಿಷ ಅಧಿಕಾರಿ ಕರ್ನಲ್ ಕೋಲೀನ್ ಮೆಕೆಂಜಿಯವರು ಕಲಬುರಗಿ ಒಳಗೊಂಡಂತೆ ಬೀದರ ಪ್ರದೇಶಗಳ ನಕ್ಷೆಗಳನ್ನು ರಚಿಸಿದ. ಈ ನಕ್ಷೆಗಳು ಇಂದು ಇಂಗ್ಲೆಂಡ್ ನ ಬ್ರಿಟಿಷ್ ಲೈಬ್ರರಿ ಸಂಗ್ರಹದಲ್ಲಿವೆ.

ಹೈದರಾಬಾದ ಸಂಸ್ಥಾನದ ಆಶ್ರಯದಲ್ಲಿ ಇತಿಹಾಸದ ದಾಖಲೆಗಳು ಸಂಗ್ರಹಿಸುವ ಕಾರ್ಯ ನಿರಂತರವಾಗಿ ನಡೆದಿದೆ. ನಿಯೋನಾರ್ಡ ಮುನ್, ಮೇಡೋಸ್ ಟೇಲರ್ ಅಲ್ಲದೆ, ಆನಂತರ ಯಾಜ್ದಾನಿ ಅವರುಗಳು ಕಲ್ಯಾಣ ಕರ್ನಾಟಕದ ಇತಿಹಾಸದ ಅಧ್ಯನಕ್ಕೆ ಅಪಾರ ಕೊಡುಗೆಗಳನ್ನು ನೀಡಿದರು. ನಿಜಾಮ ಸರ್ಕಾರವು 1914ರಲ್ಲಿ ಪುರಾತತ್ತ್ವ ಇಲಾಖೆಯನ್ನು ಸ್ಥಾಪಿಸಿ ಬಸವಕಲ್ಯಾಣ, ಮುದ್ಗಲ್, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ ಪ್ರದೇಶಗಳ ಇತಿಹಾಸದ ಕುರುಹುಗಳನ್ನು ಪ್ರಕಟಿಸುವುದರೊಂದಿಗೆ ನಾಡಿನ ಇತಿಹಾಸದ ರಚನೆಗೆ ಬಹುದೊಡ್ಡ ಕೊಡುಗೆಗಳನ್ನು ನೀಡಿದೆ‌ ಎಂದರು.

ಹೈದರಾಬಾದ ಸಂಸ್ಥಾನದ ಆಶ್ರಯದಲ್ಲಿ ಇತಿಹಾಸ ಮತ್ತು‌ ಪುರಾತತ್ವ ಸ್ಮಾರಕಗಳು, ಶಾಸನಗಳನ್ನು ಶೋಧಿಸುವ ಮತ್ತು ಅವುಗಳ ಸಂರಕ್ಷಿಸುವ ಕಾರ್ಯದಿಂದಾಗಿ ಇಂದಿಗೂ ಇತಿಹಾಸದ ಅವಶೇಷಗಳಾಗಿ ನಾವು ಅವುಗಳನ್ನು ಗುರುತಿಸಬಹುದಾಗಿದೆ ಎಂದರು.

ಈ ಅಧ್ಯಯನವನ್ನು ಹೊಸ ಪೀಳಿಗೆಯ ಸಂಶೋಧಕರು ಹಾಗೂ ಈ ಭಾಗದ ಇತಿಹಾಸಕಾರರು ಮುಂದುವರೆಸಬೇಕೆಂದು ಅವರು ಒತ್ತಾಯಿಸಿದರು. ಇದು ನಮ್ಮ ಇಂದಿನ ಈ ಭಾಗದ ಅಜ್ಞಾತ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಮಾಡುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X