Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ನೆರೆ ಹಾವಳಿ ಪ್ರದೇಶಕ್ಕೆ ಭಾರತ...

ಕಲಬುರಗಿ| ನೆರೆ ಹಾವಳಿ ಪ್ರದೇಶಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಎಂ) ನಿಯೋಗದಿಂದ ಭೇಟಿ; ಅಗತ್ಯ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Sept 2025 10:46 PM IST
share
ಕಲಬುರಗಿ| ನೆರೆ ಹಾವಳಿ ಪ್ರದೇಶಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಎಂ) ನಿಯೋಗದಿಂದ ಭೇಟಿ; ಅಗತ್ಯ ಕ್ರಮಕ್ಕೆ ಆಗ್ರಹ

ಕಲಬುರಗಿ: ನೆರೆ ಹಾವಳಿಗೆ ಒಳಗಾದ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಎಂ) ನಿಯೋಗದಿಂದ ಭೇಟಿ ಮಾಡಿ, ಪರಿಶೀಲನೆ ನಡೆಸಿದೆ.

ಫರಹತಾಬಾದ್ ಸಮೀಪದ ಕೂಡಿ ದರ್ಗಾದಲ್ಲಿ ಆಸರೆ ಪಡೆದುಕೊಂಡ ನಾಲ್ಕು ಗ್ರಾಮಗಳ ಸಂತ್ರಸ್ತರನ್ನು ಭೇಟಿ ಮಾಡಿದ ನಿಯೋಗವು ಸಂತ್ರಸ್ತರಿಗೆ ನೀಡಬೇಕಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದೆ.

ಮನೆಗಳ ಎಲ್ಲ ವಸ್ತುಗಳು ನೆರೆಯಲ್ಲಿ ಕೊಚ್ಚಿ ಹೋಗಿವೆ. ಉಟ್ಟ ಬಟ್ಟೆಯ ಮೇಲೆ ಕೂಡಿ ದರ್ಗಾದಲ್ಲಿ ಆಸರೆ ಪಡೆದುಕೊಂಡಿದ್ದಾರೆ. ಇಂತಹ ಸಂತ್ರಸ್ತರಿಗೆ ಅಗತ್ಯ ಸವಲತ್ತು ನೀಡಬೇಕೆಂದು ನಿಯೋಗದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಾಳಜಿ ಕೇಂದ್ರದಲ್ಲಿ ಮಕ್ಕಳು, ವೃದ್ಧರಿಗೂ ಬೆಚ್ಚನೆಯ ಹೊದಿಕೆ ಇಲ್ಲವಾಗಿದೆ. ಕುಡಿಯಲು ಶುದ್ಧ ನೀರು ಇಲ್ಲ. ಗಂಜಿ ಕೇಂದ್ರದಲ್ಲಿ ಅನ್ನ ಮತ್ತು ಸಾರು ಬಿಟ್ಟರೆ ಮತ್ತೇನೂ ಇಲ್ಲ. ನೆರೆಯ ಸಂದರ್ಭದಲ್ಲಿ ತೀವ್ರ ತಣ್ಣನೆ ಹವಾಮಾನ ಇತ್ಯಾದಿಯಿಂದಾಗಿ ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಮ ಬೀರುವ ಸಾಧ್ಯತೆಗಳು ಇರುತ್ತವೆ. ಇದೇ ವೇಳೆ ಸಂತ್ರಸ್ತರಿಗೆ ಪೌಷ್ಠಿಕಯುಕ್ತ ಆಹಾರ, ಮಕ್ಕಳಿಗೆ ಹಾಲು ವಿತರಿಸುವ ಅಗತ್ಯ ಇರುತ್ತದೆ. ಕೂಡಲೇ ಸರ್ಕಾರ ಅಗತ್ಯತೆಗಳನ್ನು ಪೂರೈಸಬೇಕು ಎಂದಿದ್ದಾರೆ.

ಹೆಣ್ಣು ಮಕ್ಕಳ ಮಾಸಿಕ ಋತು ಸ್ರಾವದ ಸಂದರ್ಭದಲ್ಲಿ ಉಪಯೋಗಿಸುವ ಪ್ಯಾಡ್ ಒದಗಿಸಬೇಕು, ಉದ್ಯೋಗ ಖಾತ್ರಿ ಕೆಲಸದ ಕೂಲಿಹಣ ಬಾಕಿ ಇರುವುದನ್ನು ಕೂಡಲೇ ವಿತರಿಸಬೇಕು, ಮೂರು ದಿನಗಳಲ್ಲಿ ಎಲ್ಲರಿಗೂ ಉದ್ಯೋಗ ಖಾತ್ರಿ ಕೆಲಸವನ್ನು ಎನ್ ಎಂ ಆರ್ ಜನರೇಟ್ ಮಾಡಿ ಒದಗಿಸಬೇಕು, ಕೂಡಲೇ ಎಲ್ಲರ ಆರೋಗ್ಯ ತಪಾಸಣೆ ಮಾಡಿಸಿ ಅಗತ್ಯವಿದ್ದಲ್ಲಿ ವೈದ್ಯರ ಸಲಹೆಯ ಮೇರೆಗೆ ಉಚಿತವಾಗಿ ಔಷಧಿ ಒದಗಿಸಬೇಕು ಎಂದು ನಿಯೋಗ ಜಿಲ್ಲಾಡಳಿತಕ್ಕೆ ಆಗ್ರಹಿಸಿದೆ.

ನಿಯೋಗದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ರಾಜ್ಯ ಸಮಿತಿ ಸದಸ್ಯೆ ಡಾ.ಮೀನಾಕ್ಷಿ ಬಾಳಿ, ಕೃಷಿ ಕೂಲಿ ಕಾರ್ಮಿಕರ ಸಂಘದ ಮುಖಂಡ ಸಿದ್ಧರಾಮ ಹರವಾಳ, ನಿಂಗಣ್ಣ ಆಡಿನ್ ಕೋಳಕೂರ, ಸಿದ್ದಣ್ಣ ಹಂಗರಗಿ ಕೋಳಕೂರ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X