Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಂಗ್ರೆಸ್ ಯಾವಾಗಲೂ ಸಾಮಾಜಿಕ‌ ನ್ಯಾಯದ...

ಕಾಂಗ್ರೆಸ್ ಯಾವಾಗಲೂ ಸಾಮಾಜಿಕ‌ ನ್ಯಾಯದ ಪರವಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ

ʼಕಲಬುರಗಿ ನಗರದ 31 ಉದ್ಯಾನವನ, 4 ಕೆರೆ, 23 ಸರ್ಕಲ್‌ಗಳ ಮರು ನಿರ್ಮಾಣಕ್ಕೆ ಕ್ರಮʼ

ವಾರ್ತಾಭಾರತಿವಾರ್ತಾಭಾರತಿ24 Jun 2025 7:51 PM IST
share
ಕಾಂಗ್ರೆಸ್ ಯಾವಾಗಲೂ ಸಾಮಾಜಿಕ‌ ನ್ಯಾಯದ ಪರವಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ, ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದ ಪೂಜ್ಯ ಬಸವರಾಜಪ್ಪ ಅಪ್ಪಾ ಸ್ಮರಣಾರ್ಥ ಭವನದಲ್ಲಿ ನಡೆದ 935 ಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಆದೇಶ ಪತ್ರ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗೂ ಕ್ರೋಮ್ ಬುಕ್ ವಿತರಣೆ, ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಿಕವಾಗಿ ನೇಮಕಾತಿ ಪತ್ರ ವಿತರಿಸಿದರು. ಜೊತೆಗೆ ಹೊಲಿಗೆ ಯಂತ್ರ ಹಾಗೂ ತ್ರಿಚಕ್ರ ವಾಹನಗಳ ವಿತರಣೆ ಮಾಡಿದರು.

ʼಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಸರಕಾರದ ಬದ್ಧತೆಯಿಂದಾಗಿ ನಾವು ಇಂದು ನಿಮಗೆಲ್ಲ ನೇಮಕಾತಿ ಆದೇಶ ವಿತರಿಸಿ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇಲ್ಲಿಂದ ನೀವೆಲ್ಲ ಮಹಾನಗರ ಪಾಲಿಕೆಯ ನೌಕರರಾಗಿರುತ್ತೀರಿ.‌ ಇದು ಅತ್ಯಂತ ಸಂತೋಷದ ಕ್ಷಣವಾಗಿದೆʼ ಎಂದು ಸಚಿವರು ಹೇಳಿದರು.

ಪೌರಕಾರ್ಮಿಕರು ಇದ್ದರೆ ನಗರವೆಲ್ಲ ಸ್ವಚ್ಛತೆಯಿಂದ ಇರಲು ಸಾಧ್ಯವಾಗುತ್ತದೆ. ನಿಮ್ಮೆಲ್ಲ ಕಷ್ಟಗಳ ನಡುವೆ ನಗರವನ್ನು ಸ್ವಚ್ಛವಾಗಿಡಲು ಕೆಲಸ ಮಾಡುತ್ತಿದ್ದೀರಿ ನಿಮಗೆಲ್ಲ ಧನ್ಯವಾದಗಳು ಎಂದ ಸಚಿವರು, 64 ಗ್ರಾಮಸೇವಕರ ನೇಮಕಾತಿ ಮಾಡಿ ಗ್ರಾಮ ಸೇವಕರಿಗೆ ತಂತ್ರಾಂಶ ದಾಖಲಿಸಲು ಅನುಕೂಲವಾಗಲೆಂದು 154 ಕ್ರೊಮ್ ಬುಕ್‌ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದೇ ಮೊದಲಬಾರಿಗೆ ಇಂತಹ ಸೌಲಭ್ಯ ಒದಗಿಸಲಾಗಿದೆ ಎಂದರು.

ಕೇಂದ್ರ ಸರಕಾರ ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು ನಿರಾಕರಿಸಿತು. ಆದರೆ ರಾಜ್ಯ ಸರಕಾರ ಕಲಬುರಗಿಯನ್ನು ಮುಂದಿನ 25 ವರ್ಷಕ್ಕೆ ಹೇಗಿರಬೇಕೋ ಹಾಗೆ ಸುಂದರ ನಗರವನ್ನಾಗಿ ಮಾಡಲು IIHS ( Indian Institute for Human Settlements) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಈಗಾಗಲೇ ನೀಲನಕ್ಷೆ ತಯಾರಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ನವ ಕಲಬುರಗಿ ನಿರ್ಮಾಣ ಮಾಡಲಾಗುವುದು ಎಂದರು.

ಇದರ ಜೊತೆಗೆ 23 ಸರ್ಕಲ್ ಗಳ ಮರುನಿರ್ಮಾಣ, 31 ಉದ್ಯಾನವನ ಅಭಿವೃದ್ದಿ ಹಾಗೂ 4 ಕೆರೆಗಳನ್ನು ಅಭಿವೃದ್ದಿಪಡಿಸಲಾಗುವುದು. ನಗರದ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಕಲಬುರಗಿಯಲ್ಲಿ ಬೇಕಾಗುವ ಅಗತ್ಯ ಮೂಲಭೂತ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ನಗರದ ವಾಜಪೇಯಿ ಬಡಾವಣೆಯಲ್ಲಿ "ನೈಸ್" ( NICE- Nagavi Institute of Competitive Exams) ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಮುಂದಿನ ಜುಲೈ ಕೊನೆಯ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು. ಮೊದಲಿಗೆ 500 ಜನ ಐಎಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು. ಮುಂದೆ 2,000 ಅಭ್ಯರ್ಥಿಗಳಿಗೆ ತರಬೇತಿ‌ ನೀಡುವ ಗುರಿ ಹೊಂದಲಾಗಿದೆ ಎಂದರು.

ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿದರು.

ವೇದಿಕೆಯ ಮೇಲೆ ಮಹಾಪೌರ ಯಲ್ಲಪ್ಪ ನಾಯಕೋಡಿ, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಕನೀಜ್ ಫಾತಿಮಾ, ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್ ಚಿಂಚನಸೂರು, ಕುಡಾ ಅಧ್ಯಕ್ಷ ಮಜರ್ ಆಲಂ‌ಖಾನ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಕಮಿಷನರ್ ಅವಿನಾಶ್ ಶಿಂಧೆ, ಸಚಿನ್ ಶಿರವಾಳ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X