Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ತಳವಾರ ಸಮುದಾಯಕ್ಕೆ ಸಂವಿಧಾನಬದ್ಧ ಎಸ್.ಟಿ...

ತಳವಾರ ಸಮುದಾಯಕ್ಕೆ ಸಂವಿಧಾನಬದ್ಧ ಎಸ್.ಟಿ ಹಕ್ಕು ಜಾರಿಗೊಳಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Sept 2026 12:48 PM IST
share
ತಳವಾರ ಸಮುದಾಯಕ್ಕೆ ಸಂವಿಧಾನಬದ್ಧ ಎಸ್.ಟಿ ಹಕ್ಕು ಜಾರಿಗೊಳಿಸಲು ಆಗ್ರಹ

ಕಲಬುರಗಿ: ಸಂವಿಧಾನಾತ್ಮಕವಾಗಿ ಪರಿಶಿಷ್ಟ ಪಂಗಡ (ST) ಪಟ್ಟಿಗೆ ಸೇರ್ಪಡೆಗೊಂಡಿರುವ ತಳವಾರ ಸಮುದಾಯಕ್ಕೆ ಎಸ್.ಟಿ ಜಾತಿ ಪ್ರಮಾಣ ಪತ್ರ ಸೇರಿದಂತೆ ದೊರೆತಿರುವ ಹಕ್ಕುಗಳನ್ನು ಯಾವುದೇ ಗೊಂದಲವಿಲ್ಲದೆ ಸಂಪೂರ್ಣವಾಗಿ ಜಾರಿಗೊಳಿಸಿ, ಸಮುದಾಯಕ್ಕೆ ಶಾಶ್ವತ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಅಧ್ಯಕ್ಷ ಚಂದ್ರಕಾಂತ ತಳವಾರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ತಳವಾರ ಸಮುದಾಯದ ಎಸ್.ಟಿ ಹಕ್ಕುಗಳ ಅನುಷ್ಠಾನದಲ್ಲಿ ಉಂಟಾಗಿರುವ ಆಡಳಿತಾತ್ಮಕ ಗೊಂದಲದಿಂದ ವಿಶೇಷವಾಗಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಬಡ ತಳವಾರ ಕುಟುಂಬಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ಹೇಳಿದರು.

ಎಸ್.ಟಿ ಪ್ರಮಾಣಪತ್ರ ವಿತರಣೆಗೆ ಸಂಬಂಧಿಸಿದ ಗೊಂದಲದ ಪರಿಣಾಮ ವಿದ್ಯಾರ್ಥಿಗಳ ಶಿಕ್ಷಣ, ಉದ್ಯೋಗಾವಕಾಶಗಳು, ಸರ್ಕಾರಿ ಸೌಲಭ್ಯಗಳ ಪಡೆಯುವಿಕೆ ಹಾಗೂ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ತೀವ್ರ ಹಿನ್ನಡೆಯಾಗಿದೆ. ಒಂದು ಕಡೆ ಸಂವಿಧಾನ ಹಕ್ಕು ನೀಡಲಾಗಿದ್ದರೂ, ಮತ್ತೊಂದೆಡೆ ಆ ಹಕ್ಕಿನ ಪ್ರಯೋಜನ ಪಡೆಯಲು ಅರ್ಹರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ ಎಂದರು.

ಈ ಸಮಸ್ಯೆ ಪರಿಹರಿಸುವಂತೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕ ಹಲವು ಬಾರಿ ಚರ್ಚಿಸಿದ್ದು, ಸರ್ಕಾರಕ್ಕೆ ಅನೇಕ ಮನವಿಗಳನ್ನು ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೂ ಸಮಸ್ಯೆಯನ್ನು ಹಲವು ಬಾರಿ ತರಲಾಗಿದೆ. ಆದರೂ ಇದುವರೆಗೆ ಶಾಶ್ವತ ಹಾಗೂ ಸ್ಪಷ್ಟ ಪರಿಹಾರ ದೊರೆತಿಲ್ಲ ಎಂದು ಆರೋಪ ಮಾಡಿದರು.

ನೂತನ ಮುಖ್ಯಮಂತ್ರಿಗಳು ಈ ಗಂಭೀರ ವಿಚಾರವನ್ನು ವಿಶೇಷ ಆದ್ಯತೆಯಿಂದ ಪರಿಗಣಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಬೇಕು. ಎಸ್.ಟಿ ಪ್ರಮಾಣಪತ್ರ ವಿತರಣೆಗೆ ಸಂಬಂಧಿಸಿದ ಎಲ್ಲ ಗೊಂದಲಗಳನ್ನು ನಿವಾರಿಸಿ, ತಳವಾರ ಸಮುದಾಯಕ್ಕೆ ಸ್ಪಷ್ಟ, ಏಕರೂಪ ಹಾಗೂ ಶಾಶ್ವತ ಮಾರ್ಗಸೂಚಿ ಅಥವಾ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಸಂವಿಧಾನಬದ್ಧ ಹಕ್ಕುಗಳನ್ನು ಖಚಿತಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್ ಫಿರೋಜಾಬಾದ, ರವಿ ಡೊಂಗರಾಂವ್, ಜಟ್ಟೆಪ್ಪ ಶಕಾಪುರ, ಚಂದ್ರಶೇಖರ್ ಶಹಾಪುರ ಹಾಗೂ ಸಿದ್ದು ತಂಗಡಗಿ ಉಪಸ್ಥಿತರಿದ್ದರು.

Tags

ST rightsTalwara community.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X