Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬದುಕುವ ಹಕ್ಕು ಕೊಟ್ಟ ಮಹಾಜ್ಞಾನಿ...

ಬದುಕುವ ಹಕ್ಕು ಕೊಟ್ಟ ಮಹಾಜ್ಞಾನಿ ಡಾ.ಅಂಬೇಡ್ಕರ್: ನಿಜಗುಣ ಪ್ರಭು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ4 May 2025 2:43 PM IST
share
ಬದುಕುವ ಹಕ್ಕು ಕೊಟ್ಟ ಮಹಾಜ್ಞಾನಿ ಡಾ.ಅಂಬೇಡ್ಕರ್: ನಿಜಗುಣ ಪ್ರಭು ಸ್ವಾಮೀಜಿ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.‌ಬಿ.ಆರ್. ಅಂಬೇಡ್ಕರ್ ಅವರು ಕೇವಲ ಮೀಸಲಾತಿ ಕೊಟ್ಟ ಮಹಾಪುರುಷ ಮಾತ್ರವಲ್ಲ; ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಕೊಟ್ಟ ಮಹಾ ಜ್ಞಾನಿ ಎಂದು ಬೈಲೂರು ನಿಷ್ಕಲ ಮಂಟಪದ ಪೂಜ್ಯ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹೇಳಿದರು.

ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಡಾ.‌ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಮೌಢ್ಯಮುಕ್ತ ಭಾರತಕ್ಕಾಗಿ ಸಂಕಲ್ಪ‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಿ, ಸಮಾನತೆಗೆ ಕನಸಿದ ಬುದ್ಧ, ಬಸವ, ಅಂಬೇಡ್ಕರ್ ಅವರು ಕೇವಲ ಜಯಂತಿಗಾಗಿ ಮಾತ್ರ ನೆನಪಾಗದೆ ಸದಾ ಪ್ರಜ್ಞೆಯಾಗಿ ನಮ್ಮೊಳಗೆ ನೆಲೆಸಿರಬೇಕು ಎಂದು ಕರೆ ನೀಡಿದರು.

ಡಾ. ಅಂಬೇಡ್ಕರ್ ಅವರು ಖಡ್ಗದ ಬದಲಿಗೆ ಜ್ಞಾನದ ಶಕ್ತಿ ಕೊಟ್ಟಿದ್ದಾರೆ. ಅದನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು.‌ ಅವರ ಹೆಸರನ್ನು ಘರ್ಷಣೆ, ಕಾನೂನು,‌ ಸಂದರ್ಭಕ್ಕೆ ತಕ್ಕಂತೆ ಬಳಸದೆ ಓದುವುದಕ್ಕಾಗಿ ಬಳಸಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ, ಸಂಘಟನೆ, ಹೋರಾಟದ ಸೂತ್ರ ನೀಡಿದ ಡಾ.‌ಅಂಬೇಡ್ಕರ್ ಅವರು ಈ ನೆಲದ ಅಸ್ಮಿತೆ. ಈ ಅಸ್ಮಿತೆಯ ಉಳಿವಿಗಾಗಿ ನಾವೆಲ್ಲರ ಸದಾ ಜಾಗೃತರಾಗಿರಬೇಕು. ಮೂಢನಂಬಿಕೆ, ಅಜ್ಞಾನ, ಅಂಧಕಾರದಿಂದ ಹೊರ ಬಂದು ಸ್ವಾಭಿಮಾನದಿಂದ ಬದುಕು ಸಾಗಿಸಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರ ಡಾ.‌ಸುರೇಶ ಎಲ್.‌ಶರ್ಮಾ, ಸಾಹಿತಿ ಡಾ.‌ ಶಿವರಂಜನ ಸತ್ಯಂಪೇಟೆ, ಯುವ ಚಿಂತಕ ಡಾ. ಅನಿಲ್ ಟೆಂಗಳಿ ಮಾತನಾಡಿ, ಅಕ್ಷರ, ಅರಿವು, ಸ್ವಾಭಿಮಾನ ಕಲಿಸಿದ ಅಂಬೇಡ್ಕರ್ ಅವರು ನಮ್ಮೆಲ್ಲರ ಎಚ್ಚರಿಕೆಯ ಸಂಕೇತವಾಗಿದ್ದಾರೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ವಿಮಲಾಬಾಯಿ ಎ.ರಾಮನ್, ಉಪಾಧ್ಯಕ್ಷ ಪ್ರಶಾಂತ ಇಂಡಿ, ಮಾಜಿ ಉಪಾಧ್ಯಕ್ಷ ಗೋರಖನಾಥ ಸಜ್ಜನ್, ಯುವ ಮುಖಂಡ ರಾಜು ಕಪನೂರ ಬಸವರಾಜ ಅಟ್ಟೂರ್, ಅಮರ ಏಕಲೂರೆ, ಸಿದ್ಧರಾಮ ನಿಂಬರ್ಗಾ, ಗಂಗಾರಾಮ ಲೇಂಗಟಿ, ಮಹೀಂದ್ರ ನಾಯ್ಡು, ಬಂಡಪ್ಪ ಲೇಂಗಟಿ, ಬಶೀರ್ ಜಮಾದಾರ, ವಿಜಯಕುಮಾರ ಸನ್ನಿಧಿ ಅಂಬಾರಾಯ ನಾಟೀಕಾರ್, ಶಿವಶರಣಪ್ಪ ಸಜ್ಜನ್, ಡಾ. ಪಂಡಿತ ಮದಗುಣಕಿ ಅತಿಥಿಗಳಾಗಿ ಆಗಮಿಸಿದ್ದರು. ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಶಶಿಕಾಂತ ಹೊಳಕರ್ ಅಧ್ಯಕ್ಷತೆ ವಹಿಸಿದ್ದರು.

ಸೂರ್ಯಕಾಂತ ಘಂಟಿ, ಯಾಕೂಬ್ ಸಾಬ ಮೂಲಗೆ, ಯಶ್ವಂತ ಬಾಳಿ, ಹಿರಗಪ್ಪ ಪೂಜಾರಿ, ಪ್ರಕಾಶ ಉಪಾಸೆ, ಶಿವಶರಣಪ್ಪ ಮಾವಿನ, ನಾಗಣ್ಣ ಹೂಗಾರ, ಸಾಬಯ್ಯ ಗುತ್ತೇದಾರ ಮತ್ತಿತರರಲ್ಲದೆ ಗ್ರಾಮಸ್ಥರು

ಭಾಗವಹಿಸಿದ್ದರು.

ನಂತರ ಮಲ್ಲಿಕಾರ್ಜುನ ದೊಡ್ಡಮನಿ ನಿರ್ದೇಶನದ ಕಲಬುರಗಿ ರಂಗ ವೃಕ್ಷ ನಾಟಕ ನೃತ್ಯ ಸೇವಾ ಸಂಘ ಪ್ರಸ್ತುತಪಡಿಸಿದ ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನಗೊಂಡಿತು.

ದೇಹದ ಗುಲಾಮಗಿರಿಗಿಂತ ಮಾನಸಿಕ ಗುಲಾಮಗಿರಿ ಬಹಳ ಅಪಾಯ. ಧರ್ಮ, ದೇವರು ಮನುಷ್ಯನನ್ನು ಆಳುತ್ತಿವೆ. ಈ ಭಯದಿಂದ ಹೊರ ಬರಬೇಕು. ಬುದ್ಧ ತನು, ಬಸವ ಪ್ರಾಣ, ಅಂಬೇಡ್ಕರ್ ನಮ್ಮ ಭಾವ ಆಗಬೇಕು.

-ಪೂಜ್ಯ ನಿಜಗುಣ ಪ್ರಭು ಸ್ವಾಮೀಜಿ

ನಿಷ್ಕಲ ಮಂಟಪ, ಬೈಲೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X