Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನೊಂದವರ ಬದುಕಿನ ಭರವಸೆಯ ವೈದ್ಯ...

ನೊಂದವರ ಬದುಕಿನ ಭರವಸೆಯ ವೈದ್ಯ ಡಾ.ಎಸ್.ಎಸ್.ಗುಬ್ಬಿ: ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ29 Jun 2025 7:41 PM IST
share
ನೊಂದವರ ಬದುಕಿನ ಭರವಸೆಯ ವೈದ್ಯ ಡಾ.ಎಸ್.ಎಸ್.ಗುಬ್ಬಿ: ಸಚಿವ ಶರಣಬಸಪ್ಪ ದರ್ಶನಾಪುರ

ಕಲಬುರಗಿ: ನೊಂದವರ, ಬೆಂದವರ ಬದುಕಿನಲ್ಲಿ ಭರವಸೆಯ ಬೆಳಕು ನೀಡುವ ಮೂಲಕ ವೈದ್ಯಕೀಯ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ವಿಭಿನ್ನ ಛಾಪು ಮೂಡಿಸಿದ ಅಪರೂಪದ ವೈದ್ಯ ಡಾ.ಎಸ್.ಎಸ್.ಗುಬ್ಬಿ ಅವರಾಗಿದ್ದಾರೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅಭಿಪ್ರಾಯಪಟ್ಟರು.

ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಡಾ.ಎಸ್.ಎಸ್.ಗುಬ್ಬಿ ಅವರ `ಹೃದಯವಂತ' ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಉದ್ಘಾಟಿಸಿ, ಬಡವರು, ನಿರ್ಗತಿಕರಿಗೆ ಉಚಿತವಾದ ಚಿಕಿತ್ಸೆ ನೀಡಿ `ಹೃದಯವಂತ'ರಾಗಿದ್ದಾರೆ ಎಂದರು.

ಬಡವರು, ದೀನದಲಿತರ ಬಗ್ಗೆ ಡಾ.ಗುಬ್ಬಿ ಅವರು ಹೊಂದಿದ ಅಪಾರವಾದ ಪ್ರೀತಿ ನೋಡಿದರೆ, ಅವರ ಬಗ್ಗೆ ಗೌರವ ಹೆಚ್ಚುತ್ತದೆ. ಅವರು ನಡೆದು ಬಂದ ದಾರಿ ಯುವಕರಿಗೆ ಪ್ರೇರಣೆ ಆಗಬೇಕು ಎಂದರು.

ಗ್ರಂಥ ಬಿಡುಗಡೆ ಮಾಡಿದ ರಾಜ್ಯನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಅವರು ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ದುಡ್ಡಿನ ಹಿಂದೆ ಬೆನ್ನತ್ತುವ ವೈದ್ಯರು ಹೆಚ್ಚಾಗಿದ್ದಾರೆ. ಆದರೆ ಡಾ.ಎಸ್.ಎಸ್.ಗುಬ್ಬಿ ಅವರು ದುಡ್ಡಿನ ಹಿಂದೆ ಬೆನ್ನು ಹತ್ತದೆ, ಯಾವ ರೋಗಿಗಳಿಂದಲೂ ಹೆಚ್ಚು ದುಡ್ಡು ಖರ್ಚು ಮಾಡಿಸದೆ, ಉತ್ತಮ ಆರೋಗ್ಯಕ್ಕಾಗಿ ಹಾಗೂ ರೋಗಗಳ ನಿವಾರಣೆಗೆ ಯೋಗಾಸನ ಮಾಡಲು ಹೇಳುತ್ತಾರೆ. ಗುಣಮಟ್ಟದ ಚಿಕಿತ್ಸೆ ನೀಡಿ ಖ್ಯಾತರಾಗಿದ್ದಾರೆ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಸಿದ್ಧರಾಮ ಹೊನ್ಕಲ್, ಡಾ.ಎಸ್.ಎಸ್.ಗುಬ್ಬಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎಲ್.ಪಾಟೀಲ್, ಉಮೇಶ ಶೆಟ್ಟಿ ಬಸವರಾಜ ಕಲೆಗಾರ ಮಾತನಾಡಿದರು.

ಗ್ರಂಥದ ಸಂಪಾದಕ ಬಿ.ಎಚ್.ನಿರಗುಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದ ಸಾನಿಧ್ಯವನ್ನು ಸೊನ್ನ ಸಿದ್ದಲಿಂಗೇಶ್ವರ ವಿರಕ್ತಮಠದ ಡಾ.ಶಿವಾನಂದ ಮಹಾಸ್ವಾಮಿ ಸಾನಿಧ್ಯ ವಹಿಸಿದ್ದರು. ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಎಸ್.ಬಿ.ಕಾಮರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೇತ್ರ ತಜ್ಞ ಡಾ.ಕೆ.ಜಿ.ಬಿರಾದಾರ, ಗ್ರಂಥದ ಪ್ರಧಾನ ಸಂಪಾದಕ ಎಸ್.ಎಸ್.ಹಿರೇಮಠ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಡಾ.ಎಸ್.ಎಸ್.ಗುಬ್ಬಿ ದಂಪತಿಯನ್ನು ಅಭಿನಂದನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಡಿ.ಎನ್.ಪಾಟೀಲ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಿರಣ ಪಾಟೀಲ್ ಪ್ರಾರ್ಥಿಸಿದರು. ವಿಜಯಕುಮಾರ ರೋಣದ ವಂದಿಸಿದರು. ಕಾರ್ಯಕ್ರಮದಲ್ಲಿ ಗಣ್ಯರಾದ ಉಮಾಕಾಂತ ನಿಗ್ಗುಡಗಿ, ಬಸವರಾಜ ಕೋನೆಕ್, ರವೀಂದ್ರ ಶಾಬಾದಿ, ಸುಜಾಜ ಜಂಗಮಶೆಟ್ಟಿ, ಸದಾನಂದ ಪೆರ್ಲ, ಅಪ್ಪಾರಾವ್ ಅಕ್ಕೋಣಿ, ಸ್ವಾಮಿರಾವ್ ಕುಲಕರ್ಣಿ, ಸಿದ್ದಪ್ಪ ತಳ್ಳಿಳ್ಳಿ ಸೇರಿದಂತೆ ಮೊದಲಾದವರು ಇದ್ದರು. ಕಿರಣ ಪಾಟೀಲ್, ಚಾಮರಾಜ ದೊಡ್ಡಮನಿ, ಬಾಬು ಜಾಧವ, ರಾಜಶೇಖರ್ ಮಾಂಗ್ ಅವರಿಂದ ಕನ್ನಡ ಗೀತಗಾಯನ ಕಾರ್ಯಕ್ರಮ ನಡೆಯಿತು.

Tags

Sharanabasappa Darshanapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X