Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬೆಳೆ ವಿಮೆ ಅನ್ಯಾಯ ಸರಿಪಡಿಸಿ ರೈತರಿಗೆ...

ಬೆಳೆ ವಿಮೆ ಅನ್ಯಾಯ ಸರಿಪಡಿಸಿ ರೈತರಿಗೆ ನ್ಯಾಯ ಕೊಡಿ: ಸುಭಾಷ್ ಆರ್ ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ10 Aug 2026 8:09 PM IST
share
ಬೆಳೆ ವಿಮೆ ಅನ್ಯಾಯ ಸರಿಪಡಿಸಿ ರೈತರಿಗೆ ನ್ಯಾಯ ಕೊಡಿ: ಸುಭಾಷ್ ಆರ್ ಗುತ್ತೇದಾರ

ಆಳಂದ: 2025-26ನೇ ಸಾಲಿನ ಆಳಂದ ತಾಲೂಕಿನ ಹಲವು ಗ್ರಾಮಗಳ ರೈತರಿಗೆ ಬೆಳೆ ವಿಮೆ ಜಮೆಯಾಗದಿರುವ ಕುರಿತು ಸಮಗ್ರ ತನಿಖೆ ನಡೆಸಿ, ಅರ್ಹ ರೈತರಿಗೆ ತಕ್ಷಣ ವಿಮೆ ಮೊತ್ತ ಜಮೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆಗ್ರಹಿಸಿದರು.

ಸೋಮವಾರ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಆಳಂಡ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಆಳಂದ ತಾಲೂಕಿನ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದರೂ, ಹಲವು ಗ್ರಾಮಗಳ ರೈತರಿಗೆ ಇನ್ನೂ ಬೆಳೆ ವಿಮೆ ಪರಿಹಾರ ಜಮೆಯಾಗಿಲ್ಲ. ಕೆಲವು ಗ್ರಾಮಗಳನ್ನು ಸಂಪೂರ್ಣವಾಗಿ "ಶೂನ್ಯ" ಎಂದು ಪರಿಗಣಿಸಿರುವುದು ರೈತರಲ್ಲಿ ತೀವ್ರ ಅಸಮಾಧಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದೂರಿದರು.

ವಾಸ್ತವದಲ್ಲಿ ಆ ಗ್ರಾಮಗಳಲ್ಲಿ ಬೆಳೆ ಹಾನಿ ಸಂಭವಿಸಿದ್ದರೂ, ಅವೈಜ್ಞಾನಿಕವಾಗಿ ಬೆಳೆ ಸಮೀಕ್ಷೆ ನಡೆಸಿರುವುದು, ಬೆಳೆ ಕಟಾವು ಪ್ರಯೋಗ ನಡೆಸುವ ವೇಳೆ ಲೋಪದೋಷಗಳು ನಡೆದಿರುವುದು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ನ್ಯಾಯಯುತ ಪರಿಹಾರ ದೊರೆಯದೆ ಅನ್ಯಾಯವಾಗಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ ಎಂದು ಆರೋಪಿಸಿದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಎಸ್ ಗುತ್ತೇದಾರ ಮಾತನಾಡಿ, ವಿಮೆ ಕಂಪನಿಯ ಅಧಿಕಾರಿಗಳು ಮತ್ತು ಸಂಬoಧಿಸಿದ ಇಲಾಖೆಯ ಕೆಲವು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ, ಗೋಲಮಾಲ್ ಹಾಗೂ ಪಾರದರ್ಶಕತೆಯ ಅಭಾವದಿಂದ ಅರ್ಹ ರೈತರು ಬೆಳೆ ವಿಮೆಯಿಂದ ವಂಚಿತರಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹಲವಾರು ಗ್ರಾಮಗಳಲ್ಲಿ ಸಿಸಿ ಕಟಿಂಗ್ ನಡೆಸುವ ಸಂದರ್ಭದಲ್ಲಿ ನೈಜ ಬೆಳೆ ಪರಿಸ್ಥಿತಿಯನ್ನು ಪರಿಗಣಿಸದೆ ಅವೈಜ್ಞಾನಿಕ ಅಂಕಿ-ಅoಶಗಳನ್ನು ದಾಖಲಿಸಲಾಗಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ ಎಂದು ಹೇಳಿದರು.

ಆಳಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಾದ ಖಜೂರಿ, ಹಾಳ ತಡಕಲ, ಹಡಲಗಿ, ಧುತ್ತರಗಾಂವ, ಆಳಂಗಾ, ಹೆಬಳಿ, ಕೋರಹಳ್ಳಿ, ಹಳ್ಳಿ ಸಲಗರ, ಮುನ್ನಹಳ್ಳಿ, ಧಂಗಾಪೂರ, ನಿಂಬರ್ಗಾ ಸೇರಿದಂತೆ ಅನೇಕ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಬೆಳೆ ವಿಮೆ ಬಂದಿರುವುದಿಲ್ಲ ಎಂದು ಆಪಾದಿಸಿದರು.

ಬಿಜೆಪಿ ಹಿರಿಯ ಮುಖಂಡರಾದ ವೀರಣ್ಣಾ ಮಂಗಾಣೆ, ಚಂದ್ರಶೇಖರ ಹಿರೇಮಠ, ಅಣ್ಣಾರಾವ ಪಾಟೀಲ ಕವಲಗಾ, ಬಸವರಾಜ ಬಿರಾದಾರ, ಹಣಮಂತ ಕಾಬಡೆ, ಶರಣಗೌಡ ದೇವಂತಗಿ, ಶಿವಪುತ್ರ ನಡಗೇರಿ, ಕಲ್ಯಾಣರಾವ ಪಾಟೀಲ ಮಾತನಾಡಿ, ಸರ್ಕಾರ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸುಭಾಷ ಪಾಟೀಲ, ಆನಂದರಾವ ಪಾಟೀಲ, ಕಲ್ಯಾಣಿ ದಾನಾಗೋಳ, ಶಿವಪ್ಪ ವಾರಿಕ, ಮಹಾದೇವಪ್ಪ ವಾಡೆ, ಆದಿನಾಥ ಹೀರಾ, ಕುಮಾರ ಬಂಡೆ, ಸಂತೋಷ ಹಾದಿಮನಿ, ಶಂಕರಗೌಡ ಪಾಟೀಲ, ರುದ್ರಯ್ಯ ಹಿರೇಮಠ, ಅಮೃತ ಬಿಬ್ರಾಣಿ, ನಾಗರಾಜ ಶೇಗಜಿ, ನಾಗರಾಜ ದೇನಕ, ಬಸವರಾಜ ಹತ್ತರಕಿ, ವೈಜನಾಥ ಪಾಟೀಲ, ಸುವರ್ಣಾ ಪಾಟೀಲ, ಶಿವಪ್ಪ ಘಂಟೆ, ಚಂದ್ರಕಾಮಥ ಭೂಸನೂರ, ಧರೇಪ್ಪ ಜಕಾಪೂರೆ, ಫಯ್ಯಾಜ ಪಟೇಲ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಸಾವಳಗಿ, ಶಿವಲಿಂಗಪ್ಪ ದರ್ಗಾಶಿರೂರ, ಅಶೋಕ ಘಾಣೂರೆ, ಪ್ರಕಾಶ ಸಣಮನಿ, ಸಂಜಯ ಚಂಗಳೆ, ಶಿವರಾಜ ಅವರಳ್ಳಿ, ಸೀತಾರಾಮ ಜಮಾದಾರ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.

Tags

Crop insurancefarmersSubhash R Guttedar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X