Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ...

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಕ್ರಮ ಕೈಗೊಳ್ಳಿ : ಮಾಜಿ ಸಚಿವ ವಿ.ಶ್ರೀನಿವಾಸಗೌಡ

ವಾರ್ತಾಭಾರತಿವಾರ್ತಾಭಾರತಿ9 Jan 2026 11:48 PM IST
share
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಕ್ರಮ ಕೈಗೊಳ್ಳಿ : ಮಾಜಿ ಸಚಿವ ವಿ.ಶ್ರೀನಿವಾಸಗೌಡ
ʼʼಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡಿದರೆ ಬೆಂಬಲʼʼ

ಕಲಬುರಗಿ: ಹಿಂದೆ ಹೈದರಾಬಾದ್ ಕರ್ನಾಟಕ ಎನಿಸಿಕೊಳ್ಳುತ್ತಿರುವ ಈಗಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಮರೀಚಿಕೆಯಾಗಿವೆ, ಕೂಡಲೇ ಇಲ್ಲಿನ ಜನಪ್ರತಿನಿಧಿಗಳು ರಸ್ತೆ ಸುಧಾರಣೆ ಸೇರಿದಂತೆ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ತೆಲಂಗಾಣ ರಾಜ್ಯದ ಮಾಜಿ ಸಚಿವ ವಿ.ಶ್ರೀನಿವಾಸಗೌಡ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ತೆಲಂಗಾಣ ರಾಜ್ಯದ ಹೈದರಾಬಾದ್ ನಗರ ಸೇರಿದಂತೆ ಹಲವು ನಗರಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿವೆ, ತಾಂತ್ರಿಕ ವಿಚಾರದಲ್ಲೂ ಪ್ರಸಿದ್ಧಿ ಪಡೆಯುತ್ತಿವೆ, ಆದರೆ ಹೈದರಾಬಾದ್ ಪ್ರಾಂತದಿಂದ ಕರ್ನಾಟಕಕ್ಕೆ ಸೇರ್ಪಡೆಯಾದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ, ಕೈಗಾರಿಕೆಗಳ ಸ್ಥಾಪನೆ, ಶಿಕ್ಷಕರ ನೇಮಕಾತಿ ಸೇರಿದಂತೆ ಉದ್ಯೋಗ ಒದಗಿಸುವಲ್ಲಿ ಇಲ್ಲಿನ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.

ಈ ಭಾಗದ ಅಭಿವೃದ್ಧಿಗಾಗಿ ಹೋರಾಟ ನಡೆಸಿದರೆ ಖಂಡಿತ ನಾವು ಬೆಂಬಲಿಸುತ್ತೇವೆ. ನಮ್ಮ ಪಕ್ಕದಲ್ಲೇ ಇರುವ ತಮ್ಮ ಭಾಗದ ಅಭಿವೃದ್ಧಿಗೆ ನಾವು ಬೆಂಬಲವಾಗಿ ನಿಲ್ಲಲಿದ್ದೇವೆ. ಪ್ರತ್ಯೇಕ ರಾಜ್ಯದ ಹೋರಾಟ ನಡೆಸಿದರೂ ಬೆಂಬಲ ಕೊಡಲಿದ್ದೇವೆ. ಈ ಹೋರಾಟದಲ್ಲಿ ಕರೆದರೆ ಈ ಭಾಗದ ಜನರೊಂದಿಗೆ ಭಾಗಿಯಾಗುವುದಾಗಿ ಹೇಳಿದರು.

ಈ ಭಾಗದಲ್ಲಿ ಸಮರ್ಪಕ ರಸ್ತೆಗಳು, ಶಾಲಾ- ಕಾಲೇಜುಗಳು, ಕೈಗಾರಿಕೆ ಮತ್ತಿತ್ತರ ಉದ್ಯಮಗಳು ಬೆಳೆದಿಲ್ಲ. ಹೀಗಾಗಿ ಇಲ್ಲಿಯ ಜನರು ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ಗೂಳೆ ಹೋಗುತ್ತಿದ್ದಾರೆ. ಕೂಡಲೇ ಈ ಭಾಗದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸಬೇಕು ಆಗ್ರಹಿಸಿದರು.

ತೆಲಂಗಾಣದಲ್ಲಿ ಪ್ರತ್ಯೇಕ ರಾಜ್ಯವಾದ ಬಳಿಕ ಲಕ್ಷಾಂತರ ಹುದ್ದೆಗಳನ್ನು ಸೃಷ್ಟಿಸಿದ್ದೇವೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ, ಹಾಗಾಗಿ ಇಂದು ಹೈದರಾಬಾದ್ ನಗರ ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿದೆ ಎಂದರು.

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರಿಗಿಂತ ಹೆಚ್ಚು ಕಾಲ ಅಧಿಕಾರ ನಡೆಸಿದ್ದೇನೆಂದು ಹೇಳುವುದಕ್ಕಿಂತ ಹೆಚ್ಚು ಬಡವರ, ಹಿಂದುಳಿದವರ ಅಭಿವೃದ್ಧಿಯ ಕೆಲಸಗಳ ಬಗ್ಗೆ ಹೊಂದಾಣಿಕೆ ಮಾಡಿಕೊಳ್ಳಲಿ ಎಂದು ಸವಾಲೆಸೆದರು.

ಈಡಿಗ ಸಮಾಜದ ಪ್ರಣವಾನಂದ ಸ್ವಾಮಿಜಿಗಳು ಹಮ್ಮಿಕೊಂಡಿರುವ ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಲು ತಾವು ಇಲ್ಲಿಗೆ ಬಂದಿದ್ದು, ಕರ್ನಾಟಕ ಸರಕಾರ ವಿಧಾನ ಸೌಧದ ಎದುರು ನಾರಾಯಣ ಗುರುಗಳ ಮೂರ್ತಿ ಸ್ಥಾವನೆ ಮಾಡಬೇಕು, ಈಡಿಗ ನಿಗಮಕ್ಕೆ 500 ಕೋಟಿ ರೂಪಾಯಿ ನೀಡಬೇಕು, ಈಡಿಗ ಸಮುದಾಯದ ಕುಲಕಸುಬಾದ ಶೇಂದಿ ಮಾರಾಟ ಪ್ರಾರಂಭಿಸಬೇಕು, ತೆಲಂಗಾಣ ಮಾದರಿಯಲ್ಲಿ ಇಡಿಗರಿಗೆ ಸಹಾಯ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ, ವೆಂಕಟೇಶ ಕಡೆಚೂರ, ಚನ್ನು ಪಾಟೀಲ, ಸಂತೋಷ್ ಗುತ್ತೇದಾರ, ಸೇರಿದಂತೆ ಹಲವರಿದ್ದರು.

Tags

Kalyana KarnatakaKarnatakaV.Srinivasagowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X