Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ನಡೆ ಚೆನ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ2 Aug 2025 8:41 PM IST
share
ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ನಡೆ ಚೆನ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ ನವರನ್ನು ನಮ್ಮ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಸರ್ವರಿಗೂ ಸಂತಸ ತಂದಿದೆ. ಸರ್ವಜನಾಂಗದ ಹಕ್ಕು ಮತ್ತು ಹಿತವನ್ನು ಬಯಸಿದ ಬಸವಾದಿ ಶರಣರು ವಿಶ್ವದ ಪರಿವರ್ತನಾ ಕಾರ್ಯ ಕಾರ್ಯ ಮಾಡಿದವರು. ಅಂದಿನ ಮತ್ತು ಇಂದಿನ ಸರ್ವರಿಗೂ ಏಕ ಸೂತ್ರದ ಅಡಿಯಲ್ಲಿ ಬದುಕು ರೂಪಿಸುವ ಚಿಂತನೆ ಮಾಡಿದ ಬಸವಣ್ಣ ಇಂದು ವಿಶ್ವಗುರುವಾಗಿ ದರ್ಶನವಾಗುತ್ತಿರುವುದು ಈ ನಾಡಿನ ಹೆಗ್ಗಳಿಕೆಯಾಗಿದೆ ಎಂದು ಸಾಹಿತಿ ಡಾ. ಜಗನ್ನಾಥ ತರನಳ್ಳಿ ಹೇಳಿದರು.

ವಚನೋತ್ಸವ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ನಗರದ ರವೀಂದ್ರಕುಮಾರ ಭಂಟನಳ್ಳಿ ಅವರ ಮಹಾಮನೆಯಲ್ಲಿ ಶುಕ್ರವಾರ ಜರುಗಿದ ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ನಡೆ ಚೆನ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಮೌಢ್ಯತೆ ವಿರುದ್ಧ ತೊಡೆತಟ್ಟಿ ನಿಂತು ದೀನ ದಲಿತರ, ಕಾಯಕ ವರ್ಗಗಳ ಆಶಾಕಿರಣವಾಗಿದ್ದ ವಿಶ್ವಗುರು ಬಸವಣ್ಣನವರು ದೇಹವೇ ದೇಗುಲವೆಂದು ಸಾರಿದರು. ಶ್ರೇಷ್ಠತೆ ಹುಟ್ಟಿನಿಂದ ಬರುವುದಿಲ್ಲ. ಅದು ಕಾಯಕದಿಂದ ಎಂಬ ಸಂದೇಶ ಸಾರಿದ ಬಸವ ತತ್ವದ ಪ್ರಚಾರ ವ್ಯಾಪಕವಾಗಿ ನಡೆಯಬೇಕಿದೆ ಎಂದರು.

ಮಹಾಮನೆಯ ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿ, ವಚನ ಸಾಹಿತ್ಯ ವಿಶ್ವಗುರು ಬಸವಣ್ಣನವರು ಸಮಾಜಕ್ಕೆ ಕೊಟ್ಟ ಬಹು ದೊಡ್ಡ ಕೊಡುಗೆಯಾಗಿದೆ. ಸಮಾಜದ ಓರೆ ಕೋರೆಗಳನ್ನು ಜನರಿಗೆ ತಿಳಿಸುವಲ್ಲಿ ಶರಣರ ವಚನಗಳು ಅರಿವಿನ ಸೇತುವೆಯಾಗಿದೆ. ವಚನಗಳನ್ನು ಅಧ್ಯಯನ ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಅಂದಾಗ ಮಾತ್ರ ಸಮಾಜದಲ್ಲಿನ ಅಜ್ಞಾನದ ಕತ್ತಲೆ ಕಳೆದು ಜ್ಷಾನದ ಜ್ಯೋತಿ ಬೆಳಗಲು ಸಾಧ್ಯ ಎಂದರು.

ವಿಜ್ಞಾನಿ ಡಾ. ಬಿ.ಎ. ಪಾಟೀಲ, ಸಾಹಿತ್ಯ ಪ್ರೇರಕ ಸಿದ್ದಪ್ಪ ತಳ್ಳಳ್ಳಿ, ಶಿವರಾಜ ಅಂಡಗಿ, ಭುವನೇಶ್ವರಿ ಹಳ್ಳಿಖೇಡ ವೇದಿಕೆ ಮೇಲಿದ್ದರು. ವಚನೋತ್ಸವ ಪ್ರತಿಷ್ಠಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಬಸವರಾಜ ಧೂಳಾಗುಂಡಿ, ಕಲ್ಯಾಣಪ್ಪ ಬಿರಾದಾರ, ಸುನಂದಾ ಕರ್ಚಗೇಡ, ಸಿದ್ಧರಾಮ ಹಂಚನಾಳ, ಮಾತನಾಡಿದರು.

ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜ್ಯೋತಿ ಮಾರ್ಲ, ವಿದ್ಯಾಸಾಗರ ದೇಶಮುಖ, ಬಸವರಾಜ ಧೂಳಾಗುಂಡಿ, ಜಗದೀಶ ಮರಪಳ್ಳಿ, ಕೇದಾರನಾಥ ಕುಲಕರ್ಣಿ ಅವರನ್ನು ನಡೆ ಚೆನ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X