Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗಡಿನಾಡಿಗೆ ನೀರಾವರಿ, ಶಿಕ್ಷಣ, ಆರೋಗ್ಯ...

ಗಡಿನಾಡಿಗೆ ನೀರಾವರಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸರಕಾರ ಆದ್ಯತೆ ನೀಡಲಿ : ಧರ್ಮಣ್ಣ ಧನ್ನಿ

ವಾರ್ತಾಭಾರತಿವಾರ್ತಾಭಾರತಿ13 Jan 2025 9:43 PM IST
share
Photo of Program

ಕಲಬುರಗಿ : ಗಡಿ ತಾಲೂಕುಗಳಿಗೆ ರಾಜ್ಯ ಸರಕಾರ ಕನ್ನಡ ಕಟ್ಟುವ ಜೊತೆಗೆ ನೀರಾವರಿ ಶಿಕ್ಷಣ ಮತ್ತು ಆರೋಗ್ಯದಂತ ಹಲವು ಕ್ಷೇತ್ರಗಳಿಗೆ ಆದ್ಯತೆ ನೀಡಲು ಕ್ರಮವಹಿಸಬೇಕು ಎಂದು 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಧರ್ಮಣ್ಣ ಧನ್ನಿ ಅವರು ಹೇಳಿದರು.

ಆಳಂದ ತಾಲೂಕಿನ ಮಹಾರಾಷ್ಟ್ರ ಗಡಿ ಸರಹದ್ದಿನ ಬಳಿಯ ಹಿರೋಳಿ ಗ್ರಾಮದಲ್ಲಿ ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಹಮ್ಮಿಕೊಂಡ 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಭಾಷಣ ಮಂಡಿಸಿ ಅವರು ಮಾತನಾಡಿದರು.

ಗಡಿ ಭಾಗದ ನೆಲ, ಜಲ, ಸಂರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು. ಅಂತರ್ಜಲ ಹೆಚ್ಚಳಕ್ಕೆ ಶಿರಪೂರ ಮಾದರಿಯ ನೀರಾವರಿ ಯೋಜನೆಗಳು ಆಳಂದ ತಾಲೂಕಿನಲ್ಲಿ ವಿಸ್ತರಿಸಿ ಜಾರಿಗೊಳಿಸಬೇಕು. ಗಡಿ ಭಾಗದ ಕನ್ನಡ ಶಾಲೆಗಳಿಗೆ ಶಿಕ್ಷಕರ ಕೊರತೆ ಆಗದಂತೆ ನೇಮಕ ಮಾಡಿಕೊಳ್ಳಬೇಕು. ಹಾಗೂ ಅಗತ್ಯವಿರುವ ಕನ್ನಡ ಶಾಲೆಗಳನ್ನು ಆರಂಭಿಸಬೇಕು. ಖಜೂರಿ, ಮಾದನಹಿಪ್ಪರಗಾ, ಕಡಗಂಚಿ, ಹಿರೋಳಿ, ನಿಂಬರ್ಗಾ, ಚಿಂಚನಸೂರ ಗ್ರಾಮಗಳಲ್ಲಿ ಸರಕಾರಿ ಪಿಯುಸಿ, ತಾಂತ್ರಿಕ ಶಿಕ್ಷಣ ಮತ್ತು ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಬೇಕಾಗಿದೆ.

ತಾಲೂಕಿನಲ್ಲಿ ಜಿನುಗು ಕೆರೆ ನಿರ್ಮಾಣ, ಗೊಕಟ್ಟು, ಅರಣ್ಯ ಪ್ರದೇಶಗಳ ಅಭಿವೃದ್ಧಿ ಮತ್ತು ಅವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ನಿರ್ವಹಣೆ ಆಗಬೇಕು. ಕೂಲಿ ಕಾರ್ಮಿಕರು ವಲಸೆ ಹೋಗದಂತೆ ಮುತುವರ್ಜಿ ವಹಿಸಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ತಾಲೂಕಿನ ಕೈಮಗ್ಗ ನೇಕಾರರಿಗೆ ಸರಕಾರದ ಸಾಲ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯಬೇಕು. ಇತಿಹಾಸ ಪರಂಪರೆ ಕುರಿತು ಈಗಾಗಲೇ ಗುರುತಿಸಿದ 32 ಶಾಸನಗಳು ಬಗ್ಗೆ ಅಧ್ಯಯನ ಮತ್ತು ಸಂಶೋಧನೆ ಕಾರ್ಯ ನಡೆಯಬೇಕು. ಕಬ್ಬು ಮತ್ತು ತೊಗರಿ ಬೆಳೆಗಾರರಿಗೆ ರಾಜ್ಯ ಸರಕಾರ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳಿಗೆ ಭಾಷಾಭಿಮಾನ, ಕನ್ನಡ ನಾಡು ನುಡಿ ಮತ್ತು ನೆಲ ಜಲಗಳ ಜಾಗೃತಿ ಮೂಡಿಸಬೇಕು. ತಾಲೂಕಿನಲ್ಲಿ ಇಂಗ್ಲೀಷ್ ಕಲಿಸಬೇಕೆಂಬ ವ್ಯಾಮೋಹ ಪಾಲಕರಲ್ಲಿ ಹೆಚ್ಚುತ್ತಿದೆ. ಆದರೆ ಕನ್ನಡದಲ್ಲಿ ಕಲಿತ ಮಕ್ಕಳು, ನಾಳೆ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ. ನಾವು ಅನ್ಯ ಭಾಷೆಯನ್ನು ಪ್ರೀತಿಸಿ ಗೌರವಿಸೋಣ. ಆದರೆ ದ್ವೇಷ ಬೇಡ. ಭಾಷೆ ನಮ್ಮ ಸಂಹನ ಮಾಧ್ಯಮವಾಗಿದೆ ಎಂದರು.

ಇನ್ನೂ ತಾಲೂಕಿನ ಅನೇಕ ಯುವಕರು ಸೈನ್ಯದಲ್ಲಿ ಅಮೋಘ ಸೇವೆ ಸಲ್ಲಿಸುತ್ತಿದ್ದಾರೆ. ರಾಷ್ಟಭಕ್ತಿ, ಪ್ರೇಮ ಮೆರೆಯುತ್ತಿದ್ದಾರೆ. ಅವರೆಲ್ಲ ರಾಷ್ಟ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸಿ ಹೆಸರು ಮಾಡುತ್ತಿದ್ದಾರೆ. ತಲೆಯ ತುಂಬಾ ಜ್ಞಾನ ತುಂಬಿ ಹೊಳೆಯಬೇಕು, ಕಂಗಳು, ಎದೆಯ ತುಂಬಾ ತಳಕಬೇಕು ತಾಯಿ ಕನ್ನಡ ಬೆಳದಿಂಗಳ, ನಡೆ ಚನ್ನ ಎಲ್ಲಿ ನೋಡಿದರಲ್ಲಿ ಕನ್ನಡವೇ ಕಿರು ಹಣತೆ ಹಚ್ಚಿ. ಎಂದು ಹೇಳಿ ಬರುವ ದಿನಗಳಲ್ಲಿ ಎಲ್ಲರು ಸೇರಿ ಕನ್ನಡ ನಾಡು ನುಡಿ ಕಟ್ಟೋಣ. ಸಮೃದ್ಧಿ ಬೀಡನ್ನಾಗಿ ಬಹು ಎತ್ತರಕ್ಕೆ ಬೆಳೆಸೋಣ. ಈ ನಾಡು ಕನ್ನಡಮಯ ಬೆಳಕಾಗಬೇಕೆಂದು ಅವರು ಹಾರೈಸಿದರು.

ಅಭಿವೃದ್ಧಿಯ ಹರಿಕಾರರು :

ಮಾಜಿ ಮುಖ್ಯಮಂತ್ರಿ ದಿ.ವಿರೇಂದ್ರ ಪಾಟೀಲ, ಹಾಲಿ ಶಾಸಕರು, ಮುಖ್ಯಮಂತ್ರಿಗಳ ಆಪ್ತ ಸಲಹೆಗಾರರಾದ ಬಿ.ಆರ್.ಪಾಟೀಲ್ ಅವರು ವಿಧಾನ ಪರಿಷತ್ತಿನ ಉಪ ಸಭಾಪತಿಗಳಾಗಿ ಮಾಡಿದ ಸೇವೆ ನೆನಪಿಸಿಕೊಂಡರೆ ನಿಜಕ್ಕೂ ಹೆಮ್ಮೆ ಪಡಬೇಕಾಗಿದೆ. ಹಾಗೂ ಮಾಜಿ ಶಾಸಕರಾದ ದಿವಂಗತ ಎ.ವಿ.ಪಾಟೀಲ್ ಆಳಂದ, ಅಣ್ಣಾರಾವ ಪಾಟೀಲ ಕೊರಳ್ಳಿ, ಶರಣಬಸಪ್ಪ ಪಾಟೀಲ ಧಂಗಾಪೂರ, ಸುಭಾಶ್ ಆರ್.ಗುತ್ತೇದಾರ ಅವರ ರಾಜಕೀಯ ನಡೆ ನುಡಿ ಮೆಚ್ಚುವಂಥವು. ರಾಜಕೀಯ ಮುತ್ಸದ್ಧಿ ಡಿ.ಬಿ.ಕಲಮಣ್ಕರ ಅನೇಕ ರಾಜಕೀಯ ಮುತ್ಸದ್ಧಿಗಳನ್ನು ತವರಾಗಿದೆ ಎಂದು ಇಲ್ಲಿನ ಕಲೆ, ಸಾಂಸ್ಕೃತಿ, ಹೋರಾಟಗಾರ ಶಾಸನ ಕೊಡುಗೆ ಕುರಿತು ಪ್ರಸ್ತಾಪಿಸಿದ ಅವರು ಇದನ್ನು ಮರುಕಳಿಸುವಂತಾಗಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X