Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶರಣಬಸವ ವಿವಿಯನ್ನು ವಿಶ್ವದ ಶ್ರೇಷ್ಠ...

ಶರಣಬಸವ ವಿವಿಯನ್ನು ವಿಶ್ವದ ಶ್ರೇಷ್ಠ ವಿವಿಗಳ ಸಾಲಿಗೆ ತರುವುದೇ ಅಪ್ಪಾಜಿಯವರಿಗೆ ಸಲ್ಲಿಸುವ ಗೌರವ: ಡಾ. ದಾಕ್ಷಾಯಿಣಿ ಅವ್ವಾಜಿ

ವಾರ್ತಾಭಾರತಿವಾರ್ತಾಭಾರತಿ30 July 2026 9:39 PM IST
share
ಶರಣಬಸವ ವಿವಿಯನ್ನು ವಿಶ್ವದ ಶ್ರೇಷ್ಠ ವಿವಿಗಳ ಸಾಲಿಗೆ ತರುವುದೇ ಅಪ್ಪಾಜಿಯವರಿಗೆ ಸಲ್ಲಿಸುವ ಗೌರವ: ಡಾ. ದಾಕ್ಷಾಯಿಣಿ ಅವ್ವಾಜಿ
ಗುರು ವಂದನಾ ಕಾರ್ಯಕ್ರಮ, 9ನೇ ಸಂಸ್ಥಾಪನಾ ದಿನಾಚರಣೆ

ಕಲಬುರಗಿ: ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಜೀವಮಾನದ ಕನಸಾಗಿದ್ದ ಶರಣಬಸವ ವಿಶ್ವವಿದ್ಯಾಲಯವನ್ನು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಾಲಿಗೆ ತರುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹೇಳಿದರು.

ನಗರದ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿರುವ ದಾಸೋಹ ಮಹಾಮನೆಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಗುರು ವಂದನಾ ಕಾರ್ಯಕ್ರಮ, ಶರಣಬಸವ ವಿಶ್ವವಿದ್ಯಾಲಯದ 9ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ 61ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉನ್ನತ ಶಿಕ್ಷಣವನ್ನು ಸಾಮಾನ್ಯ ಜನರ ಮನೆ ಬಾಗಿಲಿಗೆ ತಲುಪಿಸಿದ ಮಹಾನ್ ವ್ಯಕ್ತಿತ್ವ ಅಪ್ಪಾಜಿಯವರದ್ದಾಗಿತ್ತು ಎಂದು ಹೇಳಿದರು.

ರಾಷ್ಟ್ರೀಯ ಮಾನ್ಯತಾ ಮಂಡಳಿ (NBA) ಪರಿಶೀಲನಾ ತಂಡದ ಶೀಘ್ರದಲ್ಲಿನ ಭೇಟಿಯನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅತ್ಯುತ್ತಮ ರೀತಿಯಲ್ಲಿ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಎಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿದರು.

“ಗುಣಮಟ್ಟದ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಿ, ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬಲ್ಲ ಕೌಶಲ್ಯಯುತ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರನ್ನು ರೂಪಿಸುವ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು” ಎಂದು ಡಾ. ಅವ್ವಾಜಿ ತಿಳಿಸಿದರು.

ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಮಾತನಾಡಿ, ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರಿಗೆ ಭಾವಪೂರ್ಣ ನಮನ ಸಲ್ಲಿಸಿದರು. ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ ಅವರಲ್ಲಿ ಡಾ. ಅಪ್ಪಾಜಿಯವರ ವ್ಯಕ್ತಿತ್ವ, ನಾಯಕತ್ವ ಹಾಗೂ ದೂರದೃಷ್ಟಿಯ ಪ್ರತಿಬಿಂಬವನ್ನು ಕಾಣಬಹುದಾಗಿದೆ ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಡಾ. ಅಪ್ಪಾಜಿಯವರು ನೀಡಿದ ಕೊಡುಗೆ ಅಪಾರವಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿಯೂ ಅಪ್ಪಾಜಿಯವರ ಪಾತ್ರ ಮಹತ್ವದ್ದಾಗಿತ್ತು. ನಂತರ ಕಲ್ಯಾಣ ಕರ್ನಾಟಕ ಪ್ರದೇಶದ ಮೊದಲ ಖಾಸಗಿ ವಿಶ್ವವಿದ್ಯಾಲಯವಾದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಅವರು ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಕುಲಸಚಿವ ಡಾ. ಲಕ್ಷ್ಮೀ ಪಾಟೀಲ ಮಾಕಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವವಿದ್ಯಾಲಯದ ಪ್ರಮುಖ ಸಾಧನೆಗಳು ಹಾಗೂ ಭವಿಷ್ಯದ ಗುರಿಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ 2026-27ನೇ ಸಾಲಿನ ಪ್ರವೇಶ ಮಾಹಿತಿ ಪುಸ್ತಕ, ವಿಶ್ವವಿದ್ಯಾಲಯದ ಪರಿಚಯ ಪುಸ್ತಕ ಹಾಗೂ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದರು.

ಗುರು ವಂದನಾ ಕಾರ್ಯಕ್ರಮದ ಅಂಗವಾಗಿ ಶರಣಬಸವೇಶ್ವರರ ಭಕ್ತರಾದ ಜಗನ್ನಾಥ ಡಿಗ್ಗಿ ಅವರು ಕುಟುಂಬ ಸಮೇತರಾಗಿ ಬೆಳಗುಂಪಾದ ಬೃಹನ್ಮಠದ ಶ್ರೀ ಅಭಿನವ ಪರ್ವತೇಶ್ವರ ಸ್ವಾಮೀಜಿ, ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರಿಗೆ ಪಾದಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ವಿ.ಡಿ. ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಡಾ. ಕಿರಣ್ ಮಕಾ, ಡೀನ್ ಡಾ. ಶಿವಕುಮಾರ ಜವಳಿಗಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ವಿಶ್ವವಿದ್ಯಾಲಯದ ಡೀನರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags

Guru Vandana ProgramKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X