Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಹಾಲಗಡ್ಲಾ ಕೆರೆಗೆ ನೀರು...

ಜೇವರ್ಗಿ | ಹಾಲಗಡ್ಲಾ ಕೆರೆಗೆ ನೀರು ಹರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ12 Sept 2026 7:32 PM IST
share
ಜೇವರ್ಗಿ | ಹಾಲಗಡ್ಲಾ ಕೆರೆಗೆ ನೀರು ಹರಿಸಲು ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಜೇವರ್ಗಿ: ಬರಗಾಲದಿಂದ ತಾಲೂಕಿನ ಹಾಲಗಡ್ಲಾ ಕೆರೆ ಬತ್ತುವ ಹಂತ ತಲುಪಿರುವ ಹಿನ್ನೆಲೆಯಲ್ಲಿ ಕೆರೆಗೆ ಕೂಡಲೇ ನೀರು ತುಂಬಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಹೋರಾಟಗಾರರು ಶನಿವಾರದಿಂದ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಬೆಳಿಗ್ಗೆ 10 ಗಂಟೆಯಿಂದ ಆರಂಭವಾದ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು, ಕೆರೆಗೆ ನೀರು ಹರಿಸುವಲ್ಲಿ ವಿಳಂಬ ಮಾಡುತ್ತಿರುವ ಕೆಬಿಜೆಎನ್‌ಎಲ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದು, ಹಾಲಗಡ್ಲಾ ಕೆರೆ ಸಂಪೂರ್ಣ ಬತ್ತುವ ಸ್ಥಿತಿ ನಿರ್ಮಾಣವಾಗಿದೆ. ಕಾಲುವೆಗಳಲ್ಲಿ ನೀರು ಇಲ್ಲದ ಕಾರಣ ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಹೋರಾಟಗಾರರು ಆರೋಪಿಸಿದರು.

ಕನಿಷ್ಠ ಪ್ರಮಾಣದಲ್ಲಾದರೂ ನೀರು ಹರಿಸಿ ಬೆಳೆಗಳನ್ನು ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಬರಗಾಲದಿಂದ ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಹಾಲಗಡ್ಲಾ ಕೆರೆಗೆ ನೀರು ತುಂಬಿಸಿದರೆ ಅಂತರ್ಜಲ ಮಟ್ಟವೂ ಸುಧಾರಿಸಿ ಸುತ್ತಮುತ್ತಲಿನ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.

ಸಂಬಂಧಪಟ್ಟ ಅಧಿಕಾರಿಗಳು ಕೆರೆಗೆ ನೀರು ಹರಿಸುವವರೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ತಾಲೂಕಿನ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿನ ನೀರಿನ ಸಮಸ್ಯೆ ಪರಿಹರಿಸಲು ತುರ್ತು ಕ್ರಮ ಕೈಗೊಂಡು ಹಾಲಗಡ್ಲಾ ಕೆರೆಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಶಾಸಕರ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಎಚ್ಚರಿಸಿದರು.

ಸತ್ಯಾಗ್ರಹದಲ್ಲಿ ಬಸವರಾಜ ಹಾಲಗಡ್ಲಾ, ಸಂತೋಷ ಪಾಟೀಲ, ಸಕ್ರಪ್ಪಗೌಡ ಹರನೂರು, ಪರ್ವತ್ತರೆಡ್ಡಿ ಪಾಟೀಲ, ಆದರ್ಶ ಹರನೂರು, ನಾಗರಾಜ ಕುಂಬಾರ, ಸುಭಾಷ ಕವಲ್ದಾರ್, ಶರಣಪ್ಪ ಠಣಕೇದಾರ, ರಮೇಶ್ ಬಡಿಗೇರ್, ಹಣಮಂತ ಐನಾಪೂರ, ಸಂಗಪ್ಪ ಹಾಲಗಡ್ಲಾ, ಸಾಬಣ್ಣ ಕಾಡಮಗೇರಿ, ಶಿವರಾಜ, ನಿಂಗಪ್ಪ ಪೂಜಾರಿ, ಸಕ್ಕಪ್ಪ ಹರನೂರು, ತಿಮ್ಮಯ್ಯ ಹರನೂರು, ಸೋಮಣ್ಣಗೌಡ ಮಾಲೀಪಾಟೀಲ, ನಾನಾಗೌಡ ಮಾಲೀಪಾಟೀಲ, ಶಶಿಕಾಂತ ಕವಲ್ದಾರ್ ಸೇರಿದಂತೆ ಗ್ರಾಮಸ್ಥರು ಹಾಗೂ ಹೋರಾಟಗಾರರು ಪಾಲ್ಗೊಂಡಿದ್ದರು.

Tags

lakeJevargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X