Jewargi | ಕಳಪೆ ಹತ್ತಿ ಬೀಜ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಎತ್ತಿನ ಬಂಡಿ ಪ್ರತಿಭಟನೆ

ಜೇವರ್ಗಿ : ಕಳಪೆ ಮಟ್ಟದ ಹತ್ತಿ ಬೀಜಗಳ ಮಾರಾಟವನ್ನು ತಕ್ಷಣ ನಿಷೇಧಿಸಬೇಕು ಹಾಗೂ ಎಫ್ಐಡಿ (FID) ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಸಮಿತಿಯ ವತಿಯಿಂದ ಪಟ್ಟಣದಲ್ಲಿ ಎತ್ತಿನ ಬಂಡಿ ಮುಖಾಂತರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಮಹೇಶ್ ಸುಬೇದಾರ ಹಾಗೂ ರಾಜ್ಯ ಸಹ ಕಾರ್ಯದರ್ಶಿ ಅಲ್ಲಾ ಪಟೇಲ್ ಇಜೇರಿ ಮಾತನಾಡಿ, ಯಾವುದೇ ಕಾರಣಕ್ಕೂ ರೈತರಿಗೆ ಕಳಪೆ ಬೀಜ ವಿತರಣೆ ಆಗಬಾರದು. ಒಂದು ವೇಳೆ ಕಳಪೆ ಬೀಜ ವಿತರಣೆ ಮಾಡಿದರೆ ಸಂಬಂಧಪಟ್ಟ ಕಂಪನಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಮಲ್ಲನಗೌಡ ಪಾಟೀಲ ಗೌನಳ್ಳಿ ಮಾತನಾಡಿ, ಎಫ್ಐಡಿ ವ್ಯವಸ್ಥೆಯ ಮೂಲಕ ರಸಗೊಬ್ಬರ ವಿತರಣೆ ಮಾಡುವ ಕ್ರಮ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಹಿಂದಿನಂತೆ ಸರಳ ಹಾಗೂ ಸುಗಮವಾಗಿ ರಸಗೊಬ್ಬರ ವಿತರಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಕಂದಾಯ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಸಮಿತಿಯ ರೈತ ಮುಖಂಡರಾದ ಸಂಗೀತ ಕಲ್ಲೂರ, ಶೇಖಮ್ಮ ನೆಲೋಗಿ, ಪ್ರಭಾವತಿ ನೆಲೋಗಿ, ಬಸಮ್ಮ ಜೇವರ್ಗಿ, ಶಾರದಾ ಜೇವರ್ಗಿ, ಶಾಂತಮ್ಮ ಜೇವರ್ಗಿ, ಭೀಮು ಖಾದ್ಯಪುರ, ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಭೀಮಶಂಕರ್ ಜನಿವಾರ, ಭಾಗಪ್ಪ ಗೌನಳ್ಳಿ, ನಮ್ಮ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ರವಿ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






